AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ನಟಿ ತಮನ್ನಾಗೆ ಸಂಭಾವನೆ ಕೊಡದೆ ಮೋಸ; ಹೀಗಾದ್ರೆ ಉಳಿದವರ ಕಥೆ ಏನು?

ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಡುಗೆ ಶೋ ‘ಮಾಸ್ಟರ್​ ಶೆಫ್’​ಅನ್ನು ತಮನ್ನಾ ನಡೆಸಿಕೊಡುತ್ತಿದ್ದರು. ಈ ಶೋ ನಿರೂಪಣೆಗೆ ತಮನ್ನಾ ಕೋಟಿ ಮೊತ್ತದ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

ಸ್ಟಾರ್​ ನಟಿ ತಮನ್ನಾಗೆ ಸಂಭಾವನೆ ಕೊಡದೆ ಮೋಸ; ಹೀಗಾದ್ರೆ ಉಳಿದವರ ಕಥೆ ಏನು?
ತಮನ್ನಾ
TV9 Web
| Edited By: |

Updated on: Oct 25, 2021 | 3:10 PM

Share

ನಟಿ ತಮನ್ನಾ ಭಾಟಿಯಾಗೆ ದೇಶಾದ್ಯಂತ ಫ್ಯಾನ್ಸ್​ ಇದ್ದಾರೆ. ಅವರ ಮೈಮಾಟ ಹಾಗೂ ನಟನೆಗೆ ಫಿದಾ ಆಗದವರೇ ಇಲ್ಲ. ಹಲವು ಸ್ಟಾರ್ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ತಮನ್ನಾಗೆ ಇದೆ. ಇಷ್ಟೊಂದು ಸ್ಟಾರ್ ಗಿರಿ ಇಟ್ಟುಕೊಂಡ ಹೊರತಾಗಿಯೂ ಅವರಿಗೆ ಮೋಸ ಆಗಿದೆ. ಈ ಕುರಿತಂತೆ ಅವರು ಕೋರ್ಟ್​ ಮೆಟ್ಟಿಲು ಹತ್ತೋಕೆ ನಿರ್ಧರಿಸಿದ್ದಾರೆ.

ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಡುಗೆ ಶೋ ‘ಮಾಸ್ಟರ್​ ಶೆಫ್’​ಅನ್ನು ತಮನ್ನಾ ನಡೆಸಿಕೊಡುತ್ತಿದ್ದರು. ಈ ಶೋ ನಿರೂಪಣೆಗೆ ತಮನ್ನಾ ಕೋಟಿ ಮೊತ್ತದ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಈಗ ಅವರಿಗೆ ಸಂಭಾವನೆ ಸರಿಯಾಗಿ ಸಿಕ್ಕಿಲ್ಲ. ಇದರ ಜತೆಗೆ ಸೆಟ್​ನಲ್ಲಿ ಅವರ ಜತೆಗೆ ಯಾರೂ ಸರಿಯಾಗಿ ನಡೆದುಕೊಂಡಿಲ್ಲ. ಈ ಕಾರಣಕ್ಕೆ ಅವರು ಕೋರ್ಟ್​ ಮೆಟ್ಟಿಲು ಹತ್ತುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಆಗಸ್ಟ್​ 27ರಂದು ಈ ಶೋ ಆರಂಭಗೊಂಡಿತ್ತು. 20ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಆದರೆ, ಈಗ ವಾಹಿನಿಯವರು ತಮನ್ನಾಗೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿಲ್ಲ. ಇನ್ನು, ಅವರಿಗೆ ಬರಬೇಕಾದ ಸಂಭಾವನೆ ಕೂಡ ಬಂದಿಲ್ಲ. ಈ ಎಲ್ಲಾ ಕಾರಣಕ್ಕೆ ಅವರು ಶೋನಿಂದ ಹೊರ ಬಂದಿದ್ದಾರೆ. ಖ್ಯಾತ ಆ್ಯಂಕರ್​ ಅನುಸೂಯಾ ಭಾರದ್ವಾಜ್​ ಈ ಶೋ ಮುನ್ನಡೆಸಿಕೊಡುತ್ತಿದ್ದಾರೆ. ಸ್ಟಾರ್​ ನಟಿಗೆ ಈ ರೀತಿ ಮೋಸ ಆದರೆ, ಯುವ ಕಲಾವಿದರ ಕಥೆ ಏನು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಹಿಂದಿಯಲ್ಲಿ ತೆರೆಗೆ ಬಂದಿದ್ದ ಸೂಪರ್​ ಹಿಟ್​ ಚಿತ್ರ ‘ಅಂಧಾಧುನ್​’ ಸಿನಿಮಾದ ತೆಲುಗು ರಿಮೇಕ್​ನಲ್ಲಿ ತಮನ್ನಾ ನಟಿಸಿದ್ದರು. ಈ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಹಿಂದಿಯಲ್ಲಿ ಟಬು ಮಾಡಿದ್ದ ಪಾತ್ರವನ್ನು ತೆಲುಗಿನಲ್ಲಿ ತಮನ್ನಾ ಮಾಡಿದ್ದರು. ರಾಧಿಕಾ ಆಪ್ಟೆ ಮಾಡಿದ ಪಾತ್ರಕ್ಕೆ ನಭಾ ನಟೇಶ್​ ಜೀವ ತುಂಬಿದ್ದರು. ​ ಆಯುಷ್ಮಾನ್​ ಖುರಾನಾ ಮಾಡಿದ ಪಾತ್ರದಲ್ಲಿ ನಿತೀನ್ ಕಾಣಿಸಿಕೊಂಡಿದ್ದರು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿಲ್ಲ. ತಮನ್ನಾ ಸದ್ಯ, ‘ಎಫ್​3: ಫನ್​ ಆ್ಯಂಡ್​ ಫ್ರಸ್ಟ್ರೇಷನ್​’  ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅನಿಲ್​ ರವಿಪುಡಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಬೆತ್ತಲೆ ದೃಶ್ಯವನ್ನು ಏಳು ಬಾರಿ ಶೂಟ್​ ಮಾಡಿಸಿದ್ದರು, ನಾನು ನೆಲದಮೇಲೆ ಬಿಕ್ಕಿಬಿಕ್ಕಿ ಅತ್ತಿದೆ’; ಕುಬ್ರಾ ಸೇಠ್​

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?