AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ

Tamannaah Bhatia: ತಮನ್ನಾ ಹಂಚಿಕೊಂಡಿರುವ ಫೋಟೋದಲ್ಲಿ ವಿಜಯ್​ ಸೇತುಪತಿ ಅವರ ಲುಕ್​ ಗಮನ ಸೆಳೆಯುತ್ತಿದೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಹೇರ್​ ಸ್ಪೈಲ್​ನಲ್ಲಿ ಅವರು ಮಿಂಚುತ್ತಿದ್ದಾರೆ.

ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ
ವಿಜಯ್​ ಸೇತುಪತಿ, ತಮನ್ನಾ ಭಾಟಿಯಾ
TV9 Web
| Edited By: |

Updated on: Jun 28, 2021 | 2:30 PM

Share

ದಕ್ಷಿಣ ಭಾರತದ ಸ್ಟಾರ್​ ಕಲಾವಿದರಾದ ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಬಹುಭಾಷೆಯಲ್ಲಿ ಫೇಮಸ್​. ಅವರ ಕೈಯಲ್ಲಿ ಸಿಕ್ಕಾಪಟ್ಟೆ ಆಫರ್​ಗಳಿವೆ. ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇಷ್ಟೆಲ್ಲ ಬ್ಯುಸಿ ಇರುವಾಗಲೇ ಅವರು ಸಿನಿಮಾ ಹೊರತಾದ ಒಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಆ ಕೆಲಸದ ಕಾರಣದಿಂದಲೇ ಬೆಂಗಳೂರಿನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಏನು ಈ ಜೋಡಿಯ ಪ್ಲ್ಯಾನ್? ಅಡುಗೆ ಮಾಡೋದು!

ಹೌದು, ದಕ್ಷಿಣ ಭಾರತದ ಎಲ್ಲ ಭಾಷೆಯ ಕಿರುತೆರೆಯಲ್ಲಿ ಆರಂಭ ಆಗಲಿರುವ ‘ಮಾಸ್ಟರ್​ ಶೆಫ್​’ ಅಡುಗೆ ಕಾರ್ಯಕ್ರಮವನ್ನು ನಡೆಸಿಕೊಡಲು ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಒಪ್ಪಿಕೊಂಡಿದ್ದಾರೆ. ತೆಲುಗಿನಲ್ಲಿ ತಮನ್ನಾ ಹಾಗೂ ತಮಿಳಿನಲ್ಲಿ ವಿಜಯ್​ ಸೇತುಪತಿ ಈ ಶೋ ನಿರೂಪಿಸಲಿದ್ದಾರೆ. ಶೀಘ್ರದಲ್ಲೇ ‘ಮಾಸ್ಟರ್​ ಶೆಫ್​’ ಕಾರ್ಯಕ್ರಮ ಪ್ರಸಾರ ಆಗಲಿದ್ದು, ಅದರ ಶೂಟಿಂಗ್​ ಈಗಾಗಲೇ ಶುರುವಾಗಿದೆ.

ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಈ ಕಾರ್ಯಕ್ರಮದ ಪ್ರೋಮೋ ಶೂಟಿಂಗ್​ ನಡೆಯುತ್ತಿದೆ. ಅದಕ್ಕಾಗಿ ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಒಟ್ಟಿಗೆ ಆಗಮಿಸಿದ್ದಾರೆ. ಒಂದೇ ಸ್ಥಳದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇಬ್ಬರೂ ಜೊತೆಯಾಗಿ ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ತಮನ್ನಾ ಅವರು ಸಂಭ್ರಮಿಸಿದ್ದಾರೆ.

ಅಂದಹಾಗೆ, ತಮನ್ನಾ ಹಂಚಿಕೊಂಡಿರುವ ಫೋಟೋದಲ್ಲಿ ವಿಜಯ್​ ಸೇತುಪತಿ ಅವರ ಲುಕ್​ ಗಮನ ಸೆಳೆಯುತ್ತಿದೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಹೇರ್​ ಸ್ಪೈಲ್​ನಲ್ಲಿ ಅವರು ಮಿಂಚುತ್ತಿದ್ದಾರೆ. ಈ ಫೋಟೋ ನೋಡಿದ ಬಳಿಕ ಅವರ ಅಭಿಮಾನಿಗಳಲ್ಲಿ ಮಾಸ್ಟರ್​ ಶೆಫ್​ ಕಾರ್ಯಕ್ರಮದ ಬಗ್ಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. 6.8 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋವನ್ನು ಲೈಕ್​ ಮಾಡಿದ್ದಾರೆ. ತಮನ್ನಾ ಇದೇ ಮೊದಲ ಬಾರಿಗೆ ಈ ಶೋ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ತಮಿಳು, ತೆಲುಗು ಮಾತ್ರವಲ್ಲದೆ ಕನ್ನಡ ಮತ್ತು ಮಲಯಾಳಂನಲ್ಲಿಯೂ ‘ಮಾಸ್ಟರ್​ ಶೆಫ್​’ ಶೋ ಆರಂಭ ಆಗಲಿದೆ. ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರನ್​ ಹಾಗೂ ಕನ್ನಡದಲ್ಲಿ ಕಿಚ್ಚ ಸುದೀಪ್​ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂಬ ಗುಸುಗುಸು ಹರಿದಾಡುತ್ತಿದೆ. ಇನ್ನಷ್ಟೇ ಅಧಿಕೃತ ಸುದ್ದಿ ಹೊರಬೀಳಬೇಕಿದೆ.

ಈ ಹಿಂದೆ ತಮನ್ನಾ ಮತ್ತು ವಿಜಯ್​ ಸೇತುಪತಿ ‘ಧರ್ಮ ದುರೈ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. 2016ರಲ್ಲಿ ಬಿಡುಗಡೆ ಆದ ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಬಳಿಕ ಈಗ ಒಂದೇ ಶೋನಲ್ಲಿ ಜೊತೆಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ:

ವಿಜಯ್​ ಸೇತುಪತಿ ಮೇಲೆ ಕಣ್ಣಿಟ್ಟ ‘ದಿ ಫ್ಯಾಮಿಲಿ ಮ್ಯಾನ್​’ ತಂಡ; 3ನೇ ಸೀಸನ್​ನಲ್ಲಿ ಬಿಗ್​ ಸರ್ಪ್ರೈಸ್​?​

ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ