Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ

Indian Shakira: ‘ಜೈಲರ್​’ ಸಿನಿಮಾದ ‘ಕಾವಾಲಾ..’ ಹಾಡು ವೈರಲ್​ ಆಗಿದೆ. ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಅವರು ಶಕೀರಾ ರೀತಿ ಕಾಣುತ್ತಾರೆ ಎಂಬುದು ಅನೇಕರ ಅಭಿಪ್ರಾಯ.

Tamannaah Bhatia: ‘ಇಂಡಿಯನ್​ ಶಕೀರಾ’: ಅಭಿಮಾನಿಗಳು ಕೊಟ್ಟ ಹೊಸ ಬಿರುದನ್ನು ಸ್ವೀಕರಿಸಿದ ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
Follow us
|

Updated on: Jul 10, 2023 | 6:09 PM

ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಈಗ ಟ್ರೆಂಡ್​ನಲ್ಲಿ ಇದ್ದಾರೆ. ಅವರು ನಟಿಸಿದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಜನರ ಎದುರು ಬರುತ್ತಿವೆ. ‘ಲಸ್ಟ್​ ಸ್ಟೋರೀಸ್​ 2’ ಚಿತ್ರದಲ್ಲಿ ಅವರು ಕಾಣಿಸಿಕೊಂಡ ಪರಿಗೆ ಪ್ರೇಕ್ಷಕರು ಬೆರಗಾದರು. ‘ಜೀ ಕರ್ದಾ’ ವೆಬ್​ ಸಿರೀಸ್​ ಕೂಡ ಗಮನ ಸೆಳೆದಿದೆ. ಅದರ ಬೆನ್ನಲ್ಲೇ ‘ಕಾವಾಲಾ..’ ಹಾಡು (Kaavaalaa Song) ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ‘ಜೈಲರ್​’ (Jailer Movie) ಸಿನಿಮಾದ ಈ ಹಾಡಿನಲ್ಲಿ ತಮನ್ನಾ ಭಾಟಿಯಾ ಅವರು ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಅವರು ಹೆಜ್ಜೆ ಹಾಕಿದ ಪರಿ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ತಮನ್ನಾರನ್ನು ಶಕೀರಾಗೆ ಹೋಲಿಸಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಇಂಡಿಯನ್​ ಶಕೀರಾ’ ಎಂಬ ಬಿರುದು ವೈರಲ್​ ಆಗಿದೆ. ಅದನ್ನು ತಮನ್ನಾ ಕೂಡ ಖುಷಿಯಿಂದ ಸ್ವೀಕರಿಸಿದ್ದಾರೆ.

‘ಜೈಲರ್​’ ಸಿನಿಮಾದ ‘ಕಾವಾಲಾ..’ ಹಾಡಿನಲ್ಲಿ ತಮನ್ನಾ ಭಾಟಿಯಾ ಅವರು ಶಕೀರಾ ರೀತಿ ಕಾಣುತ್ತಾರೆ ಎಂಬುದು ಅನೇಕರ ಅಭಿಪ್ರಾಯ. ಹಾಗಾಗಿ ಶಕೀರಾ ಅವರ ‘ದಿಸ್​ ಟೈಂ ಫಾರ್​ ಆಫ್ರಿಕಾ..’ (ವಕ್ಕಾ ವಕ್ಕಾ..) ಹಾಡಿನ ದೃಶ್ಯಗಳನ್ನು ‘ಕಾವಾಲಾ..’ ಆಡಿಯೋ ಜೊತೆ ಎಡಿಟ್​ ಮಾಡಿ ಹರಿಬಿಡಲಾಗಿದೆ. ಅದನ್ನು ನೋಡಿ ಸ್ವತಃ ತಮನ್ನಾ ಕೂಡ ಫಿದಾ ಆಗಿದ್ದಾರೆ. ಆ ವಿಡಿಯೋವನ್ನು ಅವರು ಟ್ವಿಟರ್​ನಲ್ಲಿ ರಿ-ಟ್ವೀಟ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹಿಂಗೆಲ್ಲ ಕುಣಿದು ಪಡ್ಡೆಗಳ ನಿದ್ದೆ ಕೆಡಿಸಿದ ತಮನ್ನಾ ಭಾಟಿಯಾ

‘ಈ ಹಾಡು ತುಂಬ ಚೆನ್ನಾಗಿ ಸಿಂಕ್​ ಆಗಿದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು’ ಎಂಬ ಕ್ಯಾಪ್ಷನ್​ನೊಂದಿಗೆ ತಮನ್ನಾ ಅವರು ಈ ವಿಡಿಯೋವನ್ನು ರಿ-ಟ್ವೀಟ್​ ಮಾಡಿಕೊಂಡಿದ್ದಾರೆ. ಅವರ ಗ್ಲಾಮರಸ್​ ಅವತಾರಕ್ಕೆ ಫ್ಯಾನ್ಸ್​ ಮರುಳಾಗಿದ್ದಾರೆ. ಸದ್ಯಕ್ಕೆ ಬಿಡುಗಡೆ ಆಗಿರುವುದು ಲಿರಿಕಲ್​ ವಿಡಿಯೋ ಮಾತ್ರ. ಪೂರ್ತಿ ವಿಡಿಯೋ ಸಾಂಗ್​ ಬಿಡುಗಡೆ ಆಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಅನಿರುದ್ಧ್​ ರವಿಚಂದರ್​ ಅವರು ‘ಕಾವಾಲಾ..’ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಂದ ಈ ಹಾಡಿಗೆ ಭರ್ಜರಿ ಮೆಚ್ಚುಗೆ ಸಿಗುತ್ತಿದೆ. ಯೂಟ್ಯೂಬ್​ನಲ್ಲಿ 2.1 ಕೋಟಿಗೂ ಅಧಿಕ ಬಾರಿ ಈ ಹಾಡು ವೀಕ್ಷಣೆ ಕಂಡಿದೆ. ಈ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ಜೊತೆ ತಮನ್ನಾ ಅವರು ತೆರೆ ಹಂಚಿಕೊಂಡಿದ್ದಾರೆ. ಪ್ರತಿಷ್ಠಿತ ‘ಸನ್​ ಪಿಕ್ಚರ್ಸ್​’ ಮೂಲಕ ‘ಜೈಲರ್​’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರಕ್ಕೆ ನೆಲ್ಸನ್​ ಅವರು ನಿರ್ದೇಶನ ಮಾಡಿದ್ದು, ಶಿವರಾಜ್​ಕುಮಾರ್​ ಕೂಡ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ