AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯ್ಯೋ ಅದು ಡೈಮಂಡ್ ರಿಂಗ್ ಅಲ್ಲ ಬಾಟಲ್ ಓಪನರ್’; ಉಂಗುರ ವಿಚಾರಕ್ಕೆ ತಮನ್ನಾ ಸ್ಪಷ್ಟನೆ

ತಮನ್ನಾ ಅವರು ಡೈಮಂಡ್ ಉಂಗುರು ಧರಿಸಿ ಕುಳಿತ ಫೋಟೋ ವೈರಲ್ ಆಗಿತ್ತು. ಇದರ ಬೆಲೆ 2 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. ಆದರೆ, ಇದರ ಅಸಲಿಯತ್ತು ಬೇರೆ ಇದೆ.

‘ಅಯ್ಯೋ ಅದು ಡೈಮಂಡ್ ರಿಂಗ್ ಅಲ್ಲ ಬಾಟಲ್ ಓಪನರ್’; ಉಂಗುರ ವಿಚಾರಕ್ಕೆ ತಮನ್ನಾ ಸ್ಪಷ್ಟನೆ
ತಮನ್ನಾ
ರಾಜೇಶ್ ದುಗ್ಗುಮನೆ
|

Updated on: Jul 26, 2023 | 7:09 AM

Share

ನಟಿ ತಮನ್ನಾ (Tamannaah Bhatia) ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿದ್ದಾರೆ. ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಇದರ ಜೊತೆಗೆ ವೈಯಕ್ತಿಕ ಜೀವನದ ವಿಚಾರದಲ್ಲೂ ಅವರು ಸುದ್ದಿ ಆಗುತ್ತಿದ್ದಾರೆ. ಇತ್ತೀಚೆಗೆ ತಮನ್ನಾ ಅವರು ಡೈಮಂಡ್ ಉಂಗುರ ಧರಿಸಿರುವ ಫೋಟೋ ವೈರಲ್ ಆಗಿತ್ತು. ಇಷ್ಟೇ ಅಲ್ಲ, ಈ ಉಂಗುರವನ್ನು ಅವರಿಗೆ ರಾಮ್​ ಚರಣ್ (Ram Charan) ಪತ್ನಿ ಉಪಾಸನಾ ಗಿಫ್ಟ್ ನೀಡಿದ್ದರು ಎಂದು ಕೂಡ ಹೇಳಲಾಗಿತ್ತು. ಆದರೆ, ಅಸಲಿ ವಿಚಾರ ತಿಳಿದ ಬಳಿಕ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಏಕೆಂದರೆ ಅದು ಡೈಮಂಡ್ ಆಗಿರಲೇ ಇಲ್ಲ! ಈ ವಿಚಾರವನ್ನು ತಮನ್ನಾ ಹೇಳಿಕೊಂಡಿದ್ದಾರೆ.

ತಮನ್ನಾ ಅವರು ಡೈಮಂಡ್ ಉಂಗುರು ಧರಿಸಿ ಕುಳಿತ ಫೋಟೋ ವೈರಲ್ ಆಗಿತ್ತು. ಇದರ ಬೆಲೆ 2 ಕೋಟಿ ರೂಪಾಯಿ ಎಂದು ಹೇಳಲಾಗಿತ್ತು. 2019ರಲ್ಲಿ ರಿಲೀಸ್ ಆದ ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ತಮನ್ನಾ ನಟಿಸಿದ್ದರು. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ರಾಮ್ ಚರಣ್. ಚಿತ್ರದಲ್ಲಿನ ಅದ್ಭುತ ನಟನೆಗೆ ಈ ಉಂಗುರವನ್ನು ಉಪಾಸನಾ ಅವರು ತಮನ್ನಾಗೆ ನೀಡಿದ್ದರು ಎಂದು ಹೇಳಲಾಗಿತ್ತು. ಆದರೆ, ಈ ಉಂಗುರ ಉಪಾಸನಾ ಕೊಟ್ಟಿದ್ದು ಅಲ್ಲವೇ ಅಲ್ಲ. ಇದೊಂದು ಬಾಟಲ್ ಓಪನರ್.

‘ಇದನ್ನು ಹೇಳಲು ನನಗೆ ಬೇಸರ ಇದೆ. ಬಾಟಲ್ ಓಪನರ್ ಜೊತೆ ನಾವು ಫೋಟೋಶೂಟ್ ಮಾಡುತ್ತಿದ್ದೆವು. ನಿಜವಾದ ಡೈಮಂಡ್ ಅಲ್ಲ’ ಎಂದು ಬರೆದುಕೊಂಡಿರುವ ತಮನ್ನಾ, ಹೆಣ್ಣುಮಕ್ಕಳು ಫೋಟೋ ಕ್ಲಿಕ್ಕಿಸಿಕೊಳ್ಳಲು ಇಷ್ಟಪಡುತ್ತಾರೆ ಎಂಬರ್ಥ ಬರುವ ಹ್ಯಾಶ್​ಟ್ಯಾಗ್ ಹಾಕಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಸುಳ್ಳು ಸುದ್ದಿ ಎಷ್ಟು ಬೇಗ ಹಬ್ಬುತ್ತದೆ ಎಂಬುದಕ್ಕೆ ಇದೊಂದು ಒಳ್ಳೆಯ ಉದಾಹರಣೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ​Tamannaah Bhatia: ತಮನ್ನಾ ಬಳಿ ಇದೆ 2 ಕೋಟಿ ರೂ. ಬೆಲೆಯ ವಜ್ರದ ಉಂಗುರ; ರಾಮ್​ ಚರಣ್ ಪತ್ನಿ ಉಪಾಸನಾ ನೀಡಿದ ಉಡುಗೊರೆ

ತಮನ್ನಾ ನಟನೆಯ ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಇತ್ತೀಚೆಗೆ ತೆರೆಗೆ ಬಂತು. ಈ ವೆಬ್ ಸೀರಿಸ್​ನಲ್ಲಿ ತಮನ್ನಾ ಹಾಗೂ ವಿಜಯ್ ವರ್ಮಾ ಒಟ್ಟಾಗಿ ನಟಿಸಿದ್ದಾರೆ. ಇಂಟಿಮೇಟ್​ ದೃಶ್ಯಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ವಿಜಯ್ ವರ್ಮಾ ಜೊತೆ ತಮನ್ನಾ ಡೇಟಿಂಗ್ ಮಾಡುತ್ತಿದ್ದಾರೆ. ಇದನ್ನು ತಮನ್ನಾ ಕೂಡ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್