ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ

ಖ್ಯಾತಿ ನಟಿ ತಮನ್ನಾ ಭಾಟಿಯಾ ಅವರಿಗೆ ಹೊಸ ತಲೆನೋವು ಶುರುವಾಗಿದೆ. ಹೆಚ್​ಪಿಝಡ್ ಆ್ಯಪ್ ಪ್ರಚಾರ ಮಾಡಿದ್ದರಿಂದ ಅವರ ಮೇಲೆ ಇಡಿ ಅಧಿಕಾರಿಗಳು ಕಣ್ಣು ಇಟ್ಟಿದ್ದಾರೆ. ಆ್ಯಪ್​ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ತಮನ್ನಾ ಅವರನ್ನು ಪ್ರಶ್ನಿಸಲಾಗಿದೆ. ಗುಹವಾಟಿಯಲ್ಲಿ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ
ತಮನ್ನಾ ಭಾಟಿಯಾ
Follow us
|

Updated on: Oct 17, 2024 | 11:02 PM

ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ತಣುಕುಹಾಕಿಕೊಂಡಿದೆ. ಈ ಕೇಸ್​ನಲ್ಲಿ ತಮನ್ನಾ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ, ಅವರು ಈ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಜಾರಿಯಲ್ಲಿದೆ. ತನಿಖಾಧಿಕಾರಿಗಳ ಮುಂದೆ ಹಾಜರಾಗಲು ತಮನ್ನಾ ಭಾಟಿಯಾ ಅವರು ತಾಯಿಯ ಜೊತೆ ಗುಹವಾಟಿಗೆ ಬಂದಿದ್ದಾರೆ.

ತಮನ್ನಾ ಭಾಟಿಯಾ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ಮಹದೇವ್ ಬೆಟ್ಟಿಂಗ್ ಆ್ಯಪ್​ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಅವರು ವಿಚಾರಣೆ ಎದುರಿಸಿದ್ದರು. ಈಗ ಅವರು ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ:  ‘ಸುಳ್ಳು ಹೇಳುವವರ ಜೊತೆ ಜೀವನ ಮಾಡಲು ಸಾಧ್ಯವಿಲ್ಲ’; ತಮನ್ನಾಗೆ ಏನಾಯ್ತು?

ಹೆಚ್​ಪಿಝಡ್ ಆ್ಯಪ್ ಮೂಲಕ ದೊಡ್ಡ ಹಗರಣ ನಡೆದಿದೆ. ಪ್ರತಿ ದಿನ 4 ಸಾವಿರ ರೂಪಾಯಿ ಲಾಭ ನೀಡುವುದಾಗಿ ನಂಬಿಸಿ ಪ್ರತಿಯೊಬ್ಬರಿಂದ 57 ಸಾವಿರ ರೂಪಾಯಿ ಪಡೆದುಕೊಂಡು ವಂಚಿಸಲಾಗಿದೆ. ನಕಲಿ ಬ್ಯಾಂಕ್ ಖಾತೆಗಳನ್ನು ಬಳಸಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಂದಾಜು 497.20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಂಭಾವನೆ ಹೆಚ್ಚಿಸಿಕೊಂಡ ತಮನ್ನಾ ಭಾಟಿ, ಒಂದು ಹಾಡಿಗೆ ಎಷ್ಟು?

ಕೋಟ್ಯಂತರ ರೂಪಾಯಿ ಹಗರಣಕ್ಕೆ ಕಾರಣ ಆಗಿರುವ ಹೆಚ್​ಪಿಝಡ್ ಆ್ಯಪ್​ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಅವರು ಭಾಗಿ ಆಗಿದ್ದರು. ಅದಕ್ಕಾಗಿ ಸಂಭಾವನೆ ರೂಪದಲ್ಲಿ ತಮನ್ನಾ ಅವರಿಗೆ ಹಣ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಇಡಿ ತನಿಖೆಯ ತಲೆ ನೋವು ಶುರುವಾಗಿದೆ. ಒಂದು ವೇಳೆ ತಮನ್ನಾ ಅವರು ತಪ್ಪು ಮಾಡಿದರೆ ಸಾಬೀತಾದರೆ ಶಿಕ್ಷೆ ಎದುರಿಸಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ