ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ
ಖ್ಯಾತಿ ನಟಿ ತಮನ್ನಾ ಭಾಟಿಯಾ ಅವರಿಗೆ ಹೊಸ ತಲೆನೋವು ಶುರುವಾಗಿದೆ. ಹೆಚ್ಪಿಝಡ್ ಆ್ಯಪ್ ಪ್ರಚಾರ ಮಾಡಿದ್ದರಿಂದ ಅವರ ಮೇಲೆ ಇಡಿ ಅಧಿಕಾರಿಗಳು ಕಣ್ಣು ಇಟ್ಟಿದ್ದಾರೆ. ಆ್ಯಪ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ತಮನ್ನಾ ಅವರನ್ನು ಪ್ರಶ್ನಿಸಲಾಗಿದೆ. ಗುಹವಾಟಿಯಲ್ಲಿ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ.

ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೆಚ್ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ತಣುಕುಹಾಕಿಕೊಂಡಿದೆ. ಈ ಕೇಸ್ನಲ್ಲಿ ತಮನ್ನಾ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ, ಅವರು ಈ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಜಾರಿಯಲ್ಲಿದೆ. ತನಿಖಾಧಿಕಾರಿಗಳ ಮುಂದೆ ಹಾಜರಾಗಲು ತಮನ್ನಾ ಭಾಟಿಯಾ ಅವರು ತಾಯಿಯ ಜೊತೆ ಗುಹವಾಟಿಗೆ ಬಂದಿದ್ದಾರೆ.
ತಮನ್ನಾ ಭಾಟಿಯಾ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ಮಹದೇವ್ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಅವರು ವಿಚಾರಣೆ ಎದುರಿಸಿದ್ದರು. ಈಗ ಅವರು ಹೆಚ್ಪಿಝಡ್ ಆ್ಯಪ್ ಹಗರಣದಲ್ಲಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: ‘ಸುಳ್ಳು ಹೇಳುವವರ ಜೊತೆ ಜೀವನ ಮಾಡಲು ಸಾಧ್ಯವಿಲ್ಲ’; ತಮನ್ನಾಗೆ ಏನಾಯ್ತು?
ಹೆಚ್ಪಿಝಡ್ ಆ್ಯಪ್ ಮೂಲಕ ದೊಡ್ಡ ಹಗರಣ ನಡೆದಿದೆ. ಪ್ರತಿ ದಿನ 4 ಸಾವಿರ ರೂಪಾಯಿ ಲಾಭ ನೀಡುವುದಾಗಿ ನಂಬಿಸಿ ಪ್ರತಿಯೊಬ್ಬರಿಂದ 57 ಸಾವಿರ ರೂಪಾಯಿ ಪಡೆದುಕೊಂಡು ವಂಚಿಸಲಾಗಿದೆ. ನಕಲಿ ಬ್ಯಾಂಕ್ ಖಾತೆಗಳನ್ನು ಬಳಸಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಂದಾಜು 497.20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಸಂಭಾವನೆ ಹೆಚ್ಚಿಸಿಕೊಂಡ ತಮನ್ನಾ ಭಾಟಿ, ಒಂದು ಹಾಡಿಗೆ ಎಷ್ಟು?
ಕೋಟ್ಯಂತರ ರೂಪಾಯಿ ಹಗರಣಕ್ಕೆ ಕಾರಣ ಆಗಿರುವ ಹೆಚ್ಪಿಝಡ್ ಆ್ಯಪ್ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಅವರು ಭಾಗಿ ಆಗಿದ್ದರು. ಅದಕ್ಕಾಗಿ ಸಂಭಾವನೆ ರೂಪದಲ್ಲಿ ತಮನ್ನಾ ಅವರಿಗೆ ಹಣ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಇಡಿ ತನಿಖೆಯ ತಲೆ ನೋವು ಶುರುವಾಗಿದೆ. ಒಂದು ವೇಳೆ ತಮನ್ನಾ ಅವರು ತಪ್ಪು ಮಾಡಿದರೆ ಸಾಬೀತಾದರೆ ಶಿಕ್ಷೆ ಎದುರಿಸಬೇಕಾಗುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.