AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?

ತಮನ್ನಾ ಹೇಳಿದ ಮಾತನ್ನು ನಂಬುವುದು ಅಥವಾ ನಂಬದಿರುವುದು ಅವರ ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ. ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?
ತಮನ್ನಾ ಭಾಟಿಯಾ
ಮದನ್​ ಕುಮಾರ್​
|

Updated on: Jun 18, 2021 | 12:38 PM

Share

ನಟಿ ತಮನ್ನಾ ಭಾಟಿಯಾ ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿ. ಬಾಹುಬಲಿ ಮುಂತಾದ ಸಿನಿಮಾಗಳ ಮೂಲಕ ಅವರು ದೇಶಾದ್ಯಂತ ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ನಟನೆ ಮಾತ್ರವಲ್ಲದೆ ತಮ್ಮ ಸೌಂದರ್ಯದ ಕಾರಣದಿಂದಲೂ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಅವರ ಸುಕೋಮಲ ತ್ವಚೆಗೆ ಎಲ್ಲರೂ ಫಿದಾ ಆಗಿದ್ದಾರೆ. ‘ಮಿಲ್ಕೀ ಬ್ಯೂಟಿ’ ಎಂದು ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಕರೆಯುತ್ತಾರೆ. ಹಾಗಾದರೆ ನಟಿ ತಮನ್ನಾ ಅವರ ಮಿರುಗುವ ತ್ವಚೆಯ ರಹಸ್ಯ ಏನು?

ಸಾಮಾನ್ಯ ಜನರ ರೀತಿಯೇ ತಮನ್ನಾ ಕೂಡ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಯಿಂದ ಬಳಲುತ್ತಿದ್ದರು. ಮೊಡವೆ, ಮುಖದ ಮೇಲಿನ ಕಲೆ ಮುಂತಾದವುಗಳಿಂದ ಮುಕ್ತಿ ಪಡೆಯಲು ಅವರು ಅನೇಕ ಔಷಧಿಗಳನ್ನು ಪ್ರಯತ್ನಿಸಿದ್ದಾರೆ. ಅದರಲ್ಲಿ ತುಂಬ ವಿಚಿತ್ರ ಎನಿಸುವಂತಹ ಪ್ರಯೋಗಗಳೂ ಇವೆ. ನಂಬಿದರೆ ನಂಬಿ, ಬಿಟ್ಟರೆ ಬಿಡಿ. ಅವರು ತಮ್ಮ ಎಂಜಲನ್ನು ಕೂಡ ಮುಖಕ್ಕೆ ಹಚ್ಚಿಕೊಂಡಿದ್ದಾರಂತೆ! ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಅವರೇ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗಿನ ಒಂದು ಸಂದರ್ಶನದಲ್ಲಿ ತಮನ್ನಾ ಈ ಬಗ್ಗೆ ಬಾಯಿ ಬಿಟ್ಟಿದ್ದಾರೆ. ‘ಮುಖಕ್ಕೆ ನಾನು ಹಚ್ಚಿದ ಅತಿ ವಿಚಿತ್ರ ವಸ್ತು ಎಂದರೆ ಅದು ಎಂಜಲು. ಅದರಲ್ಲೂ ಬೆಳಗ್ಗಿನ ಸಮಯ ಬರುವ ಎಂಜಲು. ಮೊಡವೆಗಳನ್ನು ಒಣಗಿಸುವ ಸಾಮರ್ಥ್ಯ ಅದಕ್ಕಿದೆ. ಕೇಳೋಕೆ ಇದು ಬಹಳ ವಿಚಿತ್ರ ಎನಿಸಬಹುದು. ಆದರೆ ನಿಜವಾಗಿಯೂ ಅದು ಕೆಲಸ ಮಾಡುತ್ತದೆ’ ಎಂದು ತಮ್ಮನ್ನಾ ಹೇಳಿದ್ದಾರೆ. ಇದು ನಿಜವೇ ಎಂದು ಅನೇಕರು ಹುಬ್ಬೇರಿಸುತ್ತಿದ್ದಾರೆ.

ದಯವಿಟ್ಟು ಗಮನಿಸಿ, ತಮನ್ನಾ ಹೇಳಿದ ಮಾತನ್ನು ನಂಬುವುದು ಅಥವಾ ನಂಬದಿರುವುದು ಅವರ ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ. ಆದರೆ ಯಾವುದೇ ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಈಗಲೂ ತಮನ್ನಾ ಬಹುಬೇಡಿಕೆಯ ನಟಿಯಾಗಿ ತಮ್ಮ ಚಾರ್ಮ್​ ಉಳಿಸಿಕೊಂಡಿದ್ದಾರೆ. ಅವರು ನಟಿಸಿದ ಹೊಸ ವೆಬ್​ ಸಿರೀಸ್​ ‘ನವೆಂಬರ್​ ಸ್ಟೋರಿಸ್​’ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇತ್ತೀಚೆಗೆ ಬಿಡುಗಡೆ ಆಯಿತು. ಶೀಘ್ರದಲ್ಲೇ ಅವರು ಅಡುಗೆ ಕಾರ್ಯಕ್ರಮವೊಂದರ ನಿರೂಪಕಿಯಾಗಿ ಕಿರುತೆರೆಗೂ ಕಾಲಿಡಲಿದ್ದಾರೆ. ಹಲವು ಸಿನಿಮಾಗಳ ಆಫರ್​ ಕೂಡ ಅವರ ಕೈಯಲ್ಲಿದೆ.​

ಇದನ್ನೂ ಓದಿ:

ಕಿರುತೆರೆಗೆ ಕಾಲಿಡುತ್ತಿದ್ದಾರೆ ತಮನ್ನಾ ಭಾಟಿಯಾ; ಅಡುಗೆ ಶೋ ಹೋಸ್ಟ್​ ಮಾಡೋಕೆ ನಟಿ ರೆಡಿ

ಕಿರುತೆರೆಗೆ ಕಾಲಿಡುತ್ತಿದ್ದಾರೆ ತಮನ್ನಾ ಭಾಟಿಯಾ; ಅಡುಗೆ ಶೋ ಹೋಸ್ಟ್​ ಮಾಡೋಕೆ ನಟಿ ರೆಡಿ

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?