ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?

ತಮನ್ನಾ ಹೇಳಿದ ಮಾತನ್ನು ನಂಬುವುದು ಅಥವಾ ನಂಬದಿರುವುದು ಅವರ ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ. ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?
ತಮನ್ನಾ ಭಾಟಿಯಾ
Follow us
|

Updated on: Jun 18, 2021 | 12:38 PM

ನಟಿ ತಮನ್ನಾ ಭಾಟಿಯಾ ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿ. ಬಾಹುಬಲಿ ಮುಂತಾದ ಸಿನಿಮಾಗಳ ಮೂಲಕ ಅವರು ದೇಶಾದ್ಯಂತ ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ನಟನೆ ಮಾತ್ರವಲ್ಲದೆ ತಮ್ಮ ಸೌಂದರ್ಯದ ಕಾರಣದಿಂದಲೂ ಅವರು ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಅವರ ಸುಕೋಮಲ ತ್ವಚೆಗೆ ಎಲ್ಲರೂ ಫಿದಾ ಆಗಿದ್ದಾರೆ. ‘ಮಿಲ್ಕೀ ಬ್ಯೂಟಿ’ ಎಂದು ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಕರೆಯುತ್ತಾರೆ. ಹಾಗಾದರೆ ನಟಿ ತಮನ್ನಾ ಅವರ ಮಿರುಗುವ ತ್ವಚೆಯ ರಹಸ್ಯ ಏನು?

ಸಾಮಾನ್ಯ ಜನರ ರೀತಿಯೇ ತಮನ್ನಾ ಕೂಡ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಯಿಂದ ಬಳಲುತ್ತಿದ್ದರು. ಮೊಡವೆ, ಮುಖದ ಮೇಲಿನ ಕಲೆ ಮುಂತಾದವುಗಳಿಂದ ಮುಕ್ತಿ ಪಡೆಯಲು ಅವರು ಅನೇಕ ಔಷಧಿಗಳನ್ನು ಪ್ರಯತ್ನಿಸಿದ್ದಾರೆ. ಅದರಲ್ಲಿ ತುಂಬ ವಿಚಿತ್ರ ಎನಿಸುವಂತಹ ಪ್ರಯೋಗಗಳೂ ಇವೆ. ನಂಬಿದರೆ ನಂಬಿ, ಬಿಟ್ಟರೆ ಬಿಡಿ. ಅವರು ತಮ್ಮ ಎಂಜಲನ್ನು ಕೂಡ ಮುಖಕ್ಕೆ ಹಚ್ಚಿಕೊಂಡಿದ್ದಾರಂತೆ! ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಅವರೇ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗಿನ ಒಂದು ಸಂದರ್ಶನದಲ್ಲಿ ತಮನ್ನಾ ಈ ಬಗ್ಗೆ ಬಾಯಿ ಬಿಟ್ಟಿದ್ದಾರೆ. ‘ಮುಖಕ್ಕೆ ನಾನು ಹಚ್ಚಿದ ಅತಿ ವಿಚಿತ್ರ ವಸ್ತು ಎಂದರೆ ಅದು ಎಂಜಲು. ಅದರಲ್ಲೂ ಬೆಳಗ್ಗಿನ ಸಮಯ ಬರುವ ಎಂಜಲು. ಮೊಡವೆಗಳನ್ನು ಒಣಗಿಸುವ ಸಾಮರ್ಥ್ಯ ಅದಕ್ಕಿದೆ. ಕೇಳೋಕೆ ಇದು ಬಹಳ ವಿಚಿತ್ರ ಎನಿಸಬಹುದು. ಆದರೆ ನಿಜವಾಗಿಯೂ ಅದು ಕೆಲಸ ಮಾಡುತ್ತದೆ’ ಎಂದು ತಮ್ಮನ್ನಾ ಹೇಳಿದ್ದಾರೆ. ಇದು ನಿಜವೇ ಎಂದು ಅನೇಕರು ಹುಬ್ಬೇರಿಸುತ್ತಿದ್ದಾರೆ.

ದಯವಿಟ್ಟು ಗಮನಿಸಿ, ತಮನ್ನಾ ಹೇಳಿದ ಮಾತನ್ನು ನಂಬುವುದು ಅಥವಾ ನಂಬದಿರುವುದು ಅವರ ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ. ಆದರೆ ಯಾವುದೇ ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಈಗಲೂ ತಮನ್ನಾ ಬಹುಬೇಡಿಕೆಯ ನಟಿಯಾಗಿ ತಮ್ಮ ಚಾರ್ಮ್​ ಉಳಿಸಿಕೊಂಡಿದ್ದಾರೆ. ಅವರು ನಟಿಸಿದ ಹೊಸ ವೆಬ್​ ಸಿರೀಸ್​ ‘ನವೆಂಬರ್​ ಸ್ಟೋರಿಸ್​’ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇತ್ತೀಚೆಗೆ ಬಿಡುಗಡೆ ಆಯಿತು. ಶೀಘ್ರದಲ್ಲೇ ಅವರು ಅಡುಗೆ ಕಾರ್ಯಕ್ರಮವೊಂದರ ನಿರೂಪಕಿಯಾಗಿ ಕಿರುತೆರೆಗೂ ಕಾಲಿಡಲಿದ್ದಾರೆ. ಹಲವು ಸಿನಿಮಾಗಳ ಆಫರ್​ ಕೂಡ ಅವರ ಕೈಯಲ್ಲಿದೆ.​

ಇದನ್ನೂ ಓದಿ:

ಕಿರುತೆರೆಗೆ ಕಾಲಿಡುತ್ತಿದ್ದಾರೆ ತಮನ್ನಾ ಭಾಟಿಯಾ; ಅಡುಗೆ ಶೋ ಹೋಸ್ಟ್​ ಮಾಡೋಕೆ ನಟಿ ರೆಡಿ

ಕಿರುತೆರೆಗೆ ಕಾಲಿಡುತ್ತಿದ್ದಾರೆ ತಮನ್ನಾ ಭಾಟಿಯಾ; ಅಡುಗೆ ಶೋ ಹೋಸ್ಟ್​ ಮಾಡೋಕೆ ನಟಿ ರೆಡಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ