AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಗ್ಗೆ ಪಾಲಕರಿಂದಲೇ ತಮನ್ನಾಗೆ ಒತ್ತಡ? ಶೀಘ್ರವೇ ಜರುಗಲಿದೆ ವಿವಾಹ

ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಮೂಲಕ ಗೆಲುವು ಕಂಡರು. ಇವರು ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಶೂಟಿಂಗ್ ವೇಳೆ ಇವರ ಮಧ್ಯೆ ಪ್ರೀತಿ ಮೂಡಿದೆ.

ಮದುವೆ ಬಗ್ಗೆ ಪಾಲಕರಿಂದಲೇ ತಮನ್ನಾಗೆ ಒತ್ತಡ? ಶೀಘ್ರವೇ ಜರುಗಲಿದೆ ವಿವಾಹ
ತಮನ್ನಾ ಭಾಟಿಯಾ
ರಾಜೇಶ್ ದುಗ್ಗುಮನೆ
|

Updated on:Nov 15, 2023 | 1:55 PM

Share

ನಟಿ ತಮನ್ನಾ ಭಾಟಿಯಾ (Tamannaah Bhatia) ಹಾಗೂ ವಿಜಯ್ ವರ್ಮಾ ಅವರು ಪರಸ್ಪರ ಪ್ರೀತಿಸುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಇದನ್ನು ಇಬ್ಬರೂ ಓಪನ್ ಆಗಿ ಹೇಳಿಕೊಂಡಿದ್ದಾರೆ. ಇವರ ಮದುವೆ ಯಾವಾಗ ಎನ್ನುವ ಪ್ರಶ್ನೆಗಳು ಅಭಿಮಾನಿಗಳಿಗೆ ಆಗಾಗ ಮೂಡುತ್ತಲೇ ಇರುತ್ತದೆ. ಇದಕ್ಕೆ ತಮನ್ನಾ ಕಡೆಯಿಂದಾಗಲೀ, ವಿಜಯ್ ಕಡೆಯಿಂದಾಗಲೀ ಮಾಹಿತಿ ಸಿಕ್ಕಿಲ್ಲ. ತಮನ್ನಾಗೆ ಮದುವೆ ಆಗುವ ಬಗ್ಗೆ ಕುಟುಂಬದ ಕಡೆಯಿಂದಲೇ ಒತ್ತಡ ಇದೆ ಎಂದು ಹೇಳಲಾಗುತ್ತಿದೆ.

ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಮೂಲಕ ಗೆಲುವು ಕಂಡರು. ಇವರು ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಶೂಟಿಂಗ್ ವೇಳೆ ಇವರ ಮಧ್ಯೆ ಪ್ರೀತಿ ಮೂಡಿದೆ. ಈಗ ಇವರು ಶೀಘ್ರವೇ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

‘ತಮನ್ನಾ ಹಾಗೂ ವಿಜಯ್ ಶೀಘ್ರವೇ ವಿವಾಹ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಮದುವೆ ವಿಚಾರದಲ್ಲಿ ತಮನ್ನಾಗೆ ಕುಟುಂಬದಿಂದ ಒತ್ತಡ ಬಂದಿದೆ’ ಎಂದು ಮೂಲಗಳು ಹೇಳಿರುವುದಾಗಿ ವರದಿ ಆಗಿದೆ. ಇನ್ನು, ತಮನ್ನಾ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇವರ ಮದುವೆ ಸುದ್ದಿ ಹುಟ್ಟಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಯಾವುದೇ ನಟಿ ಪ್ರೀತಿಯಲ್ಲಿದ್ದಾಗ ಸಿನಿಮಾ ಒಪ್ಪಿಕೊಳ್ಳದೇ ಇದ್ದರೆ ಮದುವೆ ಗಾಸಿಪ್ ಹುಟ್ಟಿಕೊಳ್ಳುತ್ತದೆ. ತಮನ್ನಾ ವಿಚಾರದಲ್ಲೂ ಹೀಗೆಯೇ ಆಗಿದೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳದೇ ಇರಲು ಬೇರೆ ಕಾರಣ ಇದೆಯೇ ಅಥವಾ ಮದುವೆಯೇ ಕಾರಣವೇ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಇದನ್ನೂ ಓದಿ: ಹಬ್ಬದ ಸಮಯದಲ್ಲಿ ಸಖತ್ ಬೋಲ್ಡ್ ಆದ ತಮನ್ನಾ ಭಾಟಿಯಾ

ಈ ಮೊದಲು ತಮನ್ನಾ ಕರಿಯರ್ ಹಾಗೂ ಮದುವೆ ಬಗ್ಗೆ ಮಾತನಾಡಿದ್ದರು. ‘ನಾನು 18ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟೆ. 8-10 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿ ಉಳಿದುಕೊಳ್ಳಬಹುದು ಎಂದು ನಾನು ಭಾವಿಸಿದ್ದೆ. 30 ವರ್ಷಕ್ಕೆ ಮದುವೆ ಆಗಿ ಮಕ್ಕಳನ್ನು ಮಾಡಿಕೊಳ್ಳುವ ಆಲೋಚನೆ ಇತ್ತು. ಆದರೆ, ಜೀವನ ಬೇರೆಯದೇ ಪ್ಲಾನ್ ಮಾಡಿತು’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:54 pm, Wed, 15 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ