AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಗ್ಗೆ ಪಾಲಕರಿಂದಲೇ ತಮನ್ನಾಗೆ ಒತ್ತಡ? ಶೀಘ್ರವೇ ಜರುಗಲಿದೆ ವಿವಾಹ

ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಮೂಲಕ ಗೆಲುವು ಕಂಡರು. ಇವರು ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಶೂಟಿಂಗ್ ವೇಳೆ ಇವರ ಮಧ್ಯೆ ಪ್ರೀತಿ ಮೂಡಿದೆ.

ಮದುವೆ ಬಗ್ಗೆ ಪಾಲಕರಿಂದಲೇ ತಮನ್ನಾಗೆ ಒತ್ತಡ? ಶೀಘ್ರವೇ ಜರುಗಲಿದೆ ವಿವಾಹ
ತಮನ್ನಾ ಭಾಟಿಯಾ
ರಾಜೇಶ್ ದುಗ್ಗುಮನೆ
|

Updated on:Nov 15, 2023 | 1:55 PM

Share

ನಟಿ ತಮನ್ನಾ ಭಾಟಿಯಾ (Tamannaah Bhatia) ಹಾಗೂ ವಿಜಯ್ ವರ್ಮಾ ಅವರು ಪರಸ್ಪರ ಪ್ರೀತಿಸುತ್ತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಇದನ್ನು ಇಬ್ಬರೂ ಓಪನ್ ಆಗಿ ಹೇಳಿಕೊಂಡಿದ್ದಾರೆ. ಇವರ ಮದುವೆ ಯಾವಾಗ ಎನ್ನುವ ಪ್ರಶ್ನೆಗಳು ಅಭಿಮಾನಿಗಳಿಗೆ ಆಗಾಗ ಮೂಡುತ್ತಲೇ ಇರುತ್ತದೆ. ಇದಕ್ಕೆ ತಮನ್ನಾ ಕಡೆಯಿಂದಾಗಲೀ, ವಿಜಯ್ ಕಡೆಯಿಂದಾಗಲೀ ಮಾಹಿತಿ ಸಿಕ್ಕಿಲ್ಲ. ತಮನ್ನಾಗೆ ಮದುವೆ ಆಗುವ ಬಗ್ಗೆ ಕುಟುಂಬದ ಕಡೆಯಿಂದಲೇ ಒತ್ತಡ ಇದೆ ಎಂದು ಹೇಳಲಾಗುತ್ತಿದೆ.

ತಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಮೂಲಕ ಗೆಲುವು ಕಂಡರು. ಇವರು ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಶೂಟಿಂಗ್ ವೇಳೆ ಇವರ ಮಧ್ಯೆ ಪ್ರೀತಿ ಮೂಡಿದೆ. ಈಗ ಇವರು ಶೀಘ್ರವೇ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

‘ತಮನ್ನಾ ಹಾಗೂ ವಿಜಯ್ ಶೀಘ್ರವೇ ವಿವಾಹ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಮದುವೆ ವಿಚಾರದಲ್ಲಿ ತಮನ್ನಾಗೆ ಕುಟುಂಬದಿಂದ ಒತ್ತಡ ಬಂದಿದೆ’ ಎಂದು ಮೂಲಗಳು ಹೇಳಿರುವುದಾಗಿ ವರದಿ ಆಗಿದೆ. ಇನ್ನು, ತಮನ್ನಾ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇವರ ಮದುವೆ ಸುದ್ದಿ ಹುಟ್ಟಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಯಾವುದೇ ನಟಿ ಪ್ರೀತಿಯಲ್ಲಿದ್ದಾಗ ಸಿನಿಮಾ ಒಪ್ಪಿಕೊಳ್ಳದೇ ಇದ್ದರೆ ಮದುವೆ ಗಾಸಿಪ್ ಹುಟ್ಟಿಕೊಳ್ಳುತ್ತದೆ. ತಮನ್ನಾ ವಿಚಾರದಲ್ಲೂ ಹೀಗೆಯೇ ಆಗಿದೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳದೇ ಇರಲು ಬೇರೆ ಕಾರಣ ಇದೆಯೇ ಅಥವಾ ಮದುವೆಯೇ ಕಾರಣವೇ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ಇದನ್ನೂ ಓದಿ: ಹಬ್ಬದ ಸಮಯದಲ್ಲಿ ಸಖತ್ ಬೋಲ್ಡ್ ಆದ ತಮನ್ನಾ ಭಾಟಿಯಾ

ಈ ಮೊದಲು ತಮನ್ನಾ ಕರಿಯರ್ ಹಾಗೂ ಮದುವೆ ಬಗ್ಗೆ ಮಾತನಾಡಿದ್ದರು. ‘ನಾನು 18ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟೆ. 8-10 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿ ಉಳಿದುಕೊಳ್ಳಬಹುದು ಎಂದು ನಾನು ಭಾವಿಸಿದ್ದೆ. 30 ವರ್ಷಕ್ಕೆ ಮದುವೆ ಆಗಿ ಮಕ್ಕಳನ್ನು ಮಾಡಿಕೊಳ್ಳುವ ಆಲೋಚನೆ ಇತ್ತು. ಆದರೆ, ಜೀವನ ಬೇರೆಯದೇ ಪ್ಲಾನ್ ಮಾಡಿತು’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:54 pm, Wed, 15 November 23

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ