AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajith Kumar: ನಟ ಅಜಿತ್​ ಮನೆಗೆ ಬಾಂಬ್​ ಬೆದರಿಕೆ ಕರೆ; ಪೊಲೀಸ್​ ತಪಾಸಣೆಯಿಂದ ಬಯಲಾದ ಸತ್ಯವೇನು?

ಅಜಿತ್​ ಕುಮಾರ್​ ಮನೆಗೆ ಬಾಂಬ್​ ಇಡಲಾಗಿದೆ ಎಂದು ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿ ಘಟನೆ ನಡೆದಿತ್ತು.

Ajith Kumar: ನಟ ಅಜಿತ್​ ಮನೆಗೆ ಬಾಂಬ್​ ಬೆದರಿಕೆ ಕರೆ; ಪೊಲೀಸ್​ ತಪಾಸಣೆಯಿಂದ ಬಯಲಾದ ಸತ್ಯವೇನು?
ಅಜಿತ್​ ಕುಮಾರ್​
ಮದನ್​ ಕುಮಾರ್​
|

Updated on: Jun 01, 2021 | 12:00 PM

Share

ಕಾಲಿವುಡ್​ನ ಸ್ಟಾರ್​ ನಟ ಅಜಿತ್​ ಕುಮಾರ್​ ಅವರ ಮನೆಗೆ ಬಾಂಬ್​ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್​ ಠಾಣೆಗೆ ಕರೆ ಮಾಡಿ ತಿಳಿಸಿದ್ದಾನೆ. ಸೋಮವಾರ (ಮೇ 31) ಈ ಮಾಹಿತಿ ಕೇಳಿಬಂದ ಬಳಿಕ ಒಂದು ಕ್ಷಣ ಬೆಚ್ಚಿ ಬೀಳುವಂತಹ ವಾತಾವರಣ ನಿರ್ಮಾಣ ಆಯಿತು. ಸಿಕ್ಕ ಮಾಹಿತಿಯನ್ನು ನಿರ್ಲಕ್ಷಿಸದೇ ಪೊಲೀಸರು ಕೂಡಲೇ ಅಜಿತ್​ ಮನೆಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್​ ಕರೆ ಎಂಬುದು ಗೊತ್ತಾಗಿದೆ. ಒಟ್ಟಿನಲ್ಲಿ ಅಜಿತ್​ ಅವರಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಚಿತವಾದ ಬಳಿಕ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಅಂದಹಾಗೆ, ಅಜಿತ್​ ಕುಮಾರ್​ ಮನೆಗೆ ಬಾಂಬ್​ ಇಡಲಾಗಿದೆ ಎಂದು ಹುಸಿ ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿಯ ಘಟನೆ ನಡೆದಿತ್ತು. ಅದಕ್ಕೂ ಮುನ್ನ 2014ರಲ್ಲಿಯೂ ಬಾಂಬ್​ ಬೆದರಿಕೆ ಕರೆಬಂದಿರುವ ಬಗ್ಗೆ ಪೊಲೀಸ್​ ಠಾಣೆಗೆ ಕರೆ ಮಾಡಿ ಅಜಿತ್​ ಮನೆಯ ಸಿಬ್ಬಂದಿ ಮಾಹಿತಿ ನೀಡಿದ್ದರು. ಆಗಲೂ ಅದು ಹುಸಿ ಬಾಂಬ್​ ಕರೆ ಎಂಬುದು ಸಾಬೀತಾಗಿತ್ತು.

2017ರಲ್ಲಿಯೂ ಇದೇ ರೀತಿ ಆಗಿತ್ತು. ಅನಾಮಿಕ ವ್ಯಕ್ತಿಯಿಂದ ಬಾಂಬ್​ ಕರೆ ಬಂದಿದ್ದರಿಂದ 15 ಪೊಲೀಸರು ಅಜಿತ್​ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದರು. ಕಾಲಿವುಡ್ ನಟರಾದ ವಿಜಯ್​ ಮತ್ತು ರಜನಿಕಾಂತ್​ ಅವರ ಮನೆಗೂ ಈ ಹಿಂದೆ ಹುಸಿ ಬಾಂಬ್​ ಕರೆಗಳು ಬಂದಿದ್ದವು.

2019ರಲ್ಲಿ ಬಂದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ನಟನೆಯ ಯಾವುದೇ ಸಿನಿಮಾ ತೆರೆಕಂಡಿಲ್ಲ. ಆ ಚಿತ್ರಕ್ಕೆ ಬೋನಿ ಕಪೂರ್ ಬಂಡವಾಳ ಹೂಡಿದ್ದರು. ಎಚ್​. ವಿನೋದ್​ ನಿರ್ದೇಶನ ಮಾಡಿದ್ದರು. ಈಗ ಎಚ್​​. ವಿನೋದ್​, ಬೋನಿ ಕಪೂರ್​ ಮತ್ತು ಅಜಿತ್​ ಕುಮಾರ್​ ಕಾಂಬಿನೇಷನ್​ಲ್ಲಿ ‘ವಲಿಮೈ’ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಕೊಂಡಿವೆ. ಕೊರೊನಾ ವಿರುದ್ಧ ಹೋರಾಡಲು ಅಜಿತ್​ ಅವರು ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದರು.

ಇದನ್ನೂ ಓದಿ:

ಶ್ರೀದೇವಿ ಜೊತೆಗಿನ ಚಿತ್ರದ ಶೂಟಿಂಗ್​ಗೆ ಬರುವಾಗ ಐಷಾರಾಮಿ ಕಾರು ಬೇಡ ಎಂದಿದ್ದ ನಟ ಅಜಿತ್​

Viral Video: ಅಭಿಮಾನಿಯ ಫೋನ್ ಕಿತ್ತುಕೊಂಡ ನಟ ಅಜಿತ್; ಚುನಾವಣಾ ಮತಗಟ್ಟೆಯಲ್ಲಿ ನಡೆದಿದ್ದೇನು?

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?