Ajith Kumar: ನಟ ಅಜಿತ್​ ಮನೆಗೆ ಬಾಂಬ್​ ಬೆದರಿಕೆ ಕರೆ; ಪೊಲೀಸ್​ ತಪಾಸಣೆಯಿಂದ ಬಯಲಾದ ಸತ್ಯವೇನು?

ಅಜಿತ್​ ಕುಮಾರ್​ ಮನೆಗೆ ಬಾಂಬ್​ ಇಡಲಾಗಿದೆ ಎಂದು ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿ ಘಟನೆ ನಡೆದಿತ್ತು.

Ajith Kumar: ನಟ ಅಜಿತ್​ ಮನೆಗೆ ಬಾಂಬ್​ ಬೆದರಿಕೆ ಕರೆ; ಪೊಲೀಸ್​ ತಪಾಸಣೆಯಿಂದ ಬಯಲಾದ ಸತ್ಯವೇನು?
ಅಜಿತ್​ ಕುಮಾರ್​
Follow us
|

Updated on: Jun 01, 2021 | 12:00 PM

ಕಾಲಿವುಡ್​ನ ಸ್ಟಾರ್​ ನಟ ಅಜಿತ್​ ಕುಮಾರ್​ ಅವರ ಮನೆಗೆ ಬಾಂಬ್​ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್​ ಠಾಣೆಗೆ ಕರೆ ಮಾಡಿ ತಿಳಿಸಿದ್ದಾನೆ. ಸೋಮವಾರ (ಮೇ 31) ಈ ಮಾಹಿತಿ ಕೇಳಿಬಂದ ಬಳಿಕ ಒಂದು ಕ್ಷಣ ಬೆಚ್ಚಿ ಬೀಳುವಂತಹ ವಾತಾವರಣ ನಿರ್ಮಾಣ ಆಯಿತು. ಸಿಕ್ಕ ಮಾಹಿತಿಯನ್ನು ನಿರ್ಲಕ್ಷಿಸದೇ ಪೊಲೀಸರು ಕೂಡಲೇ ಅಜಿತ್​ ಮನೆಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್​ ಕರೆ ಎಂಬುದು ಗೊತ್ತಾಗಿದೆ. ಒಟ್ಟಿನಲ್ಲಿ ಅಜಿತ್​ ಅವರಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಚಿತವಾದ ಬಳಿಕ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಅಂದಹಾಗೆ, ಅಜಿತ್​ ಕುಮಾರ್​ ಮನೆಗೆ ಬಾಂಬ್​ ಇಡಲಾಗಿದೆ ಎಂದು ಹುಸಿ ಕರೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಕೂಡ ಇದೇ ರೀತಿಯ ಘಟನೆ ನಡೆದಿತ್ತು. ಅದಕ್ಕೂ ಮುನ್ನ 2014ರಲ್ಲಿಯೂ ಬಾಂಬ್​ ಬೆದರಿಕೆ ಕರೆಬಂದಿರುವ ಬಗ್ಗೆ ಪೊಲೀಸ್​ ಠಾಣೆಗೆ ಕರೆ ಮಾಡಿ ಅಜಿತ್​ ಮನೆಯ ಸಿಬ್ಬಂದಿ ಮಾಹಿತಿ ನೀಡಿದ್ದರು. ಆಗಲೂ ಅದು ಹುಸಿ ಬಾಂಬ್​ ಕರೆ ಎಂಬುದು ಸಾಬೀತಾಗಿತ್ತು.

2017ರಲ್ಲಿಯೂ ಇದೇ ರೀತಿ ಆಗಿತ್ತು. ಅನಾಮಿಕ ವ್ಯಕ್ತಿಯಿಂದ ಬಾಂಬ್​ ಕರೆ ಬಂದಿದ್ದರಿಂದ 15 ಪೊಲೀಸರು ಅಜಿತ್​ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದರು. ಕಾಲಿವುಡ್ ನಟರಾದ ವಿಜಯ್​ ಮತ್ತು ರಜನಿಕಾಂತ್​ ಅವರ ಮನೆಗೂ ಈ ಹಿಂದೆ ಹುಸಿ ಬಾಂಬ್​ ಕರೆಗಳು ಬಂದಿದ್ದವು.

2019ರಲ್ಲಿ ಬಂದ ‘ನೇರ್ಕೊಂಡ ಪಾರ್ವೈ’ ಬಳಿಕ ಅಜಿತ್​ ನಟನೆಯ ಯಾವುದೇ ಸಿನಿಮಾ ತೆರೆಕಂಡಿಲ್ಲ. ಆ ಚಿತ್ರಕ್ಕೆ ಬೋನಿ ಕಪೂರ್ ಬಂಡವಾಳ ಹೂಡಿದ್ದರು. ಎಚ್​. ವಿನೋದ್​ ನಿರ್ದೇಶನ ಮಾಡಿದ್ದರು. ಈಗ ಎಚ್​​. ವಿನೋದ್​, ಬೋನಿ ಕಪೂರ್​ ಮತ್ತು ಅಜಿತ್​ ಕುಮಾರ್​ ಕಾಂಬಿನೇಷನ್​ಲ್ಲಿ ‘ವಲಿಮೈ’ ಸಿನಿಮಾ ಮೂಡಿಬರುತ್ತಿದೆ. ಲಾಕ್​ಡೌನ್​ ಕಾರಣದಿಂದ ಚಿತ್ರದ ಕೆಲಸಗಳು ಸ್ಥಗಿತಕೊಂಡಿವೆ. ಕೊರೊನಾ ವಿರುದ್ಧ ಹೋರಾಡಲು ಅಜಿತ್​ ಅವರು ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದರು.

ಇದನ್ನೂ ಓದಿ:

ಶ್ರೀದೇವಿ ಜೊತೆಗಿನ ಚಿತ್ರದ ಶೂಟಿಂಗ್​ಗೆ ಬರುವಾಗ ಐಷಾರಾಮಿ ಕಾರು ಬೇಡ ಎಂದಿದ್ದ ನಟ ಅಜಿತ್​

Viral Video: ಅಭಿಮಾನಿಯ ಫೋನ್ ಕಿತ್ತುಕೊಂಡ ನಟ ಅಜಿತ್; ಚುನಾವಣಾ ಮತಗಟ್ಟೆಯಲ್ಲಿ ನಡೆದಿದ್ದೇನು?

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ