Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಸೆಲೆಬ್ರಿಟಿಗಳ ಸಾವಿನಿಂದಾಗಿ ಕಾಲಿವುಡ್​ಗೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ಅಸುನೀಗಿದ್ದಾರೆ.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ
ಅಯ್ಯಪ್ಪನ್ ಗೋಪಿ
Follow us
ಮದನ್​ ಕುಮಾರ್​
|

Updated on: May 17, 2021 | 7:56 AM

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಯ್ಯಪ್ಪನ್​ ಗೋಪಿ ನಿಧನರಾಗಿದ್ದಾರೆ. ಮೇ 15ರಂದು ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು ಎಂದು ವರದಿ ಆಗಿದೆ. ಅಯ್ಯಪ್ಪನ್​ ಗೋಪಿ ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಇತ್ತೀಚೆನ ದಿನಗಳಲ್ಲಿ ಕಾಲಿವುಡ್​ ಅನೇಕ ಸೆಲೆಬ್ರಿಟಿಗಳು ನಿಧನರಾದರು. ನಿರ್ದೇಶಕ ಕೆ.ವಿ. ಆನಂದ್​, ನಟ ವಿವೇಕ್​ ಮುಂತಾದವರ ಸಾವಿನ ಬಳಿಕ ಅಯ್ಯಪ್ಪನ್​ ಗೋಪಿ ಅಸುನೀಗಿರುವ ಸುದ್ದಿ ಕೇಳಿ ಕಾಲಿವುಡ್​ಗೆ ಆಘಾತ ಆಗಿದೆ.

ಶಿವಕಾರ್ತಿಕೇಯನ್​ ಮತ್ತು ಕೀರ್ತಿ ಸುರೇಶ್​ ನಟನೆಯ ‘ರಜನಿ ಮುರುಗನ್​’ ಸಿನಿಮಾದಲ್ಲಿ ಅಯ್ಯಪ್ಪನ್​ ಗೋಪಿ ಅಭಿನಯಿಸಿದ್ದರು. ‘ದಿಲ್ಲುಕು ದುಡ್ಡು’ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ನಟನೆಯ ಬಗ್ಗೆ ಅಯ್ಯಪ್ಪನ್​ ಗೋಪಿ ತೀವ್ರ ಒಲವು ಹೊಂದಿದ್ದರು. ನಾನು ಬಣ್ಣ ಹಚ್ಚಿ ಅಭಿನಯಿಸುತ್ತಿರುವಾಗಲೇ ಸಾಯಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಹಲವು ಸಿನಿಮಾಗಳಲ್ಲಿ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದ ಪವನ್​ ರಾಜ್​ ಕೂಡ ನಿಧನರಾದರು ಎಂಬ ಸುದ್ದಿಯನ್ನು ನಿರ್ದೇಶಕ ಪೋನ್​ ರಾಮ್​ ಶನಿವಾರವಷ್ಟೇ (ಮೇ 15) ತಿಳಿಸಿದ್ದರು. ‘ನನ್ನ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವನ್​ರಾಜ್​ ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ’ ಎಂದು ಪೋನ್​ರಾಮ್​ ಟ್ವೀಟ್​ ಮಾಡಿದ್ದರು. ಅದರ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ನಿಧನರಾಗಿರುವ ಶಾಕಿಂಗ್​ ಸುದ್ದಿ ಕೇಳಿಬಂದಿದೆ.

ತಮಿಳು ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ಸೇರಿದಂತೆ ಅನೇಕರು ಇತ್ತೀಚೆಗೆ ಮೃತರಾದರು. ಈಗ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ನಿಧನರಾಗಿದ್ದಾರೆ. ಇನ್ನೊಂದೆಡೆ ಕೊರೊನಾ ಹಾವಳಿಯಿಂದಲೂ ಅನೇಕ ಸೆಲೆಬ್ರಿಟಿಗಳು ಅಸುನೀಗುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ