AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಸೆಲೆಬ್ರಿಟಿಗಳ ಸಾವಿನಿಂದಾಗಿ ಕಾಲಿವುಡ್​ಗೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ಅಸುನೀಗಿದ್ದಾರೆ.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ
ಅಯ್ಯಪ್ಪನ್ ಗೋಪಿ
ಮದನ್​ ಕುಮಾರ್​
|

Updated on: May 17, 2021 | 7:56 AM

Share

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಯ್ಯಪ್ಪನ್​ ಗೋಪಿ ನಿಧನರಾಗಿದ್ದಾರೆ. ಮೇ 15ರಂದು ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು ಎಂದು ವರದಿ ಆಗಿದೆ. ಅಯ್ಯಪ್ಪನ್​ ಗೋಪಿ ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಇತ್ತೀಚೆನ ದಿನಗಳಲ್ಲಿ ಕಾಲಿವುಡ್​ ಅನೇಕ ಸೆಲೆಬ್ರಿಟಿಗಳು ನಿಧನರಾದರು. ನಿರ್ದೇಶಕ ಕೆ.ವಿ. ಆನಂದ್​, ನಟ ವಿವೇಕ್​ ಮುಂತಾದವರ ಸಾವಿನ ಬಳಿಕ ಅಯ್ಯಪ್ಪನ್​ ಗೋಪಿ ಅಸುನೀಗಿರುವ ಸುದ್ದಿ ಕೇಳಿ ಕಾಲಿವುಡ್​ಗೆ ಆಘಾತ ಆಗಿದೆ.

ಶಿವಕಾರ್ತಿಕೇಯನ್​ ಮತ್ತು ಕೀರ್ತಿ ಸುರೇಶ್​ ನಟನೆಯ ‘ರಜನಿ ಮುರುಗನ್​’ ಸಿನಿಮಾದಲ್ಲಿ ಅಯ್ಯಪ್ಪನ್​ ಗೋಪಿ ಅಭಿನಯಿಸಿದ್ದರು. ‘ದಿಲ್ಲುಕು ದುಡ್ಡು’ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ನಟನೆಯ ಬಗ್ಗೆ ಅಯ್ಯಪ್ಪನ್​ ಗೋಪಿ ತೀವ್ರ ಒಲವು ಹೊಂದಿದ್ದರು. ನಾನು ಬಣ್ಣ ಹಚ್ಚಿ ಅಭಿನಯಿಸುತ್ತಿರುವಾಗಲೇ ಸಾಯಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಹಲವು ಸಿನಿಮಾಗಳಲ್ಲಿ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದ ಪವನ್​ ರಾಜ್​ ಕೂಡ ನಿಧನರಾದರು ಎಂಬ ಸುದ್ದಿಯನ್ನು ನಿರ್ದೇಶಕ ಪೋನ್​ ರಾಮ್​ ಶನಿವಾರವಷ್ಟೇ (ಮೇ 15) ತಿಳಿಸಿದ್ದರು. ‘ನನ್ನ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವನ್​ರಾಜ್​ ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ’ ಎಂದು ಪೋನ್​ರಾಮ್​ ಟ್ವೀಟ್​ ಮಾಡಿದ್ದರು. ಅದರ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ನಿಧನರಾಗಿರುವ ಶಾಕಿಂಗ್​ ಸುದ್ದಿ ಕೇಳಿಬಂದಿದೆ.

ತಮಿಳು ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ಸೇರಿದಂತೆ ಅನೇಕರು ಇತ್ತೀಚೆಗೆ ಮೃತರಾದರು. ಈಗ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ನಿಧನರಾಗಿದ್ದಾರೆ. ಇನ್ನೊಂದೆಡೆ ಕೊರೊನಾ ಹಾವಳಿಯಿಂದಲೂ ಅನೇಕ ಸೆಲೆಬ್ರಿಟಿಗಳು ಅಸುನೀಗುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ