AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಸೆಲೆಬ್ರಿಟಿಗಳ ಸಾವಿನಿಂದಾಗಿ ಕಾಲಿವುಡ್​ಗೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ಅಸುನೀಗಿದ್ದಾರೆ.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ
ಅಯ್ಯಪ್ಪನ್ ಗೋಪಿ
Follow us
ಮದನ್​ ಕುಮಾರ್​
|

Updated on: May 17, 2021 | 7:56 AM

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಯ್ಯಪ್ಪನ್​ ಗೋಪಿ ನಿಧನರಾಗಿದ್ದಾರೆ. ಮೇ 15ರಂದು ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು ಎಂದು ವರದಿ ಆಗಿದೆ. ಅಯ್ಯಪ್ಪನ್​ ಗೋಪಿ ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಇತ್ತೀಚೆನ ದಿನಗಳಲ್ಲಿ ಕಾಲಿವುಡ್​ ಅನೇಕ ಸೆಲೆಬ್ರಿಟಿಗಳು ನಿಧನರಾದರು. ನಿರ್ದೇಶಕ ಕೆ.ವಿ. ಆನಂದ್​, ನಟ ವಿವೇಕ್​ ಮುಂತಾದವರ ಸಾವಿನ ಬಳಿಕ ಅಯ್ಯಪ್ಪನ್​ ಗೋಪಿ ಅಸುನೀಗಿರುವ ಸುದ್ದಿ ಕೇಳಿ ಕಾಲಿವುಡ್​ಗೆ ಆಘಾತ ಆಗಿದೆ.

ಶಿವಕಾರ್ತಿಕೇಯನ್​ ಮತ್ತು ಕೀರ್ತಿ ಸುರೇಶ್​ ನಟನೆಯ ‘ರಜನಿ ಮುರುಗನ್​’ ಸಿನಿಮಾದಲ್ಲಿ ಅಯ್ಯಪ್ಪನ್​ ಗೋಪಿ ಅಭಿನಯಿಸಿದ್ದರು. ‘ದಿಲ್ಲುಕು ದುಡ್ಡು’ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ನಟನೆಯ ಬಗ್ಗೆ ಅಯ್ಯಪ್ಪನ್​ ಗೋಪಿ ತೀವ್ರ ಒಲವು ಹೊಂದಿದ್ದರು. ನಾನು ಬಣ್ಣ ಹಚ್ಚಿ ಅಭಿನಯಿಸುತ್ತಿರುವಾಗಲೇ ಸಾಯಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಹಲವು ಸಿನಿಮಾಗಳಲ್ಲಿ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದ ಪವನ್​ ರಾಜ್​ ಕೂಡ ನಿಧನರಾದರು ಎಂಬ ಸುದ್ದಿಯನ್ನು ನಿರ್ದೇಶಕ ಪೋನ್​ ರಾಮ್​ ಶನಿವಾರವಷ್ಟೇ (ಮೇ 15) ತಿಳಿಸಿದ್ದರು. ‘ನನ್ನ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವನ್​ರಾಜ್​ ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ’ ಎಂದು ಪೋನ್​ರಾಮ್​ ಟ್ವೀಟ್​ ಮಾಡಿದ್ದರು. ಅದರ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ನಿಧನರಾಗಿರುವ ಶಾಕಿಂಗ್​ ಸುದ್ದಿ ಕೇಳಿಬಂದಿದೆ.

ತಮಿಳು ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ಸೇರಿದಂತೆ ಅನೇಕರು ಇತ್ತೀಚೆಗೆ ಮೃತರಾದರು. ಈಗ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ನಿಧನರಾಗಿದ್ದಾರೆ. ಇನ್ನೊಂದೆಡೆ ಕೊರೊನಾ ಹಾವಳಿಯಿಂದಲೂ ಅನೇಕ ಸೆಲೆಬ್ರಿಟಿಗಳು ಅಸುನೀಗುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ