ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ

ಸೆಲೆಬ್ರಿಟಿಗಳ ಸಾವಿನಿಂದಾಗಿ ಕಾಲಿವುಡ್​ಗೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ನಿಧನರಾದ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ಅಸುನೀಗಿದ್ದಾರೆ.

ಹಾಸ್ಯ ನಟ ಅಯ್ಯಪ್ಪನ್​ ಗೋಪಿ ಹೃದಯಾಘಾತದಿಂದ ನಿಧನ; ಚಿತ್ರರಂಗಕ್ಕೆ ಮತ್ತೊಂದು ಆಘಾತ
ಅಯ್ಯಪ್ಪನ್ ಗೋಪಿ

Updated on: May 17, 2021 | 7:56 AM

ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಯ್ಯಪ್ಪನ್​ ಗೋಪಿ ನಿಧನರಾಗಿದ್ದಾರೆ. ಮೇ 15ರಂದು ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು ಎಂದು ವರದಿ ಆಗಿದೆ. ಅಯ್ಯಪ್ಪನ್​ ಗೋಪಿ ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಇತ್ತೀಚೆನ ದಿನಗಳಲ್ಲಿ ಕಾಲಿವುಡ್​ ಅನೇಕ ಸೆಲೆಬ್ರಿಟಿಗಳು ನಿಧನರಾದರು. ನಿರ್ದೇಶಕ ಕೆ.ವಿ. ಆನಂದ್​, ನಟ ವಿವೇಕ್​ ಮುಂತಾದವರ ಸಾವಿನ ಬಳಿಕ ಅಯ್ಯಪ್ಪನ್​ ಗೋಪಿ ಅಸುನೀಗಿರುವ ಸುದ್ದಿ ಕೇಳಿ ಕಾಲಿವುಡ್​ಗೆ ಆಘಾತ ಆಗಿದೆ.

ಶಿವಕಾರ್ತಿಕೇಯನ್​ ಮತ್ತು ಕೀರ್ತಿ ಸುರೇಶ್​ ನಟನೆಯ ‘ರಜನಿ ಮುರುಗನ್​’ ಸಿನಿಮಾದಲ್ಲಿ ಅಯ್ಯಪ್ಪನ್​ ಗೋಪಿ ಅಭಿನಯಿಸಿದ್ದರು. ‘ದಿಲ್ಲುಕು ದುಡ್ಡು’ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ನಟನೆಯ ಬಗ್ಗೆ ಅಯ್ಯಪ್ಪನ್​ ಗೋಪಿ ತೀವ್ರ ಒಲವು ಹೊಂದಿದ್ದರು. ನಾನು ಬಣ್ಣ ಹಚ್ಚಿ ಅಭಿನಯಿಸುತ್ತಿರುವಾಗಲೇ ಸಾಯಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಹಲವು ಸಿನಿಮಾಗಳಲ್ಲಿ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ್ದ ಪವನ್​ ರಾಜ್​ ಕೂಡ ನಿಧನರಾದರು ಎಂಬ ಸುದ್ದಿಯನ್ನು ನಿರ್ದೇಶಕ ಪೋನ್​ ರಾಮ್​ ಶನಿವಾರವಷ್ಟೇ (ಮೇ 15) ತಿಳಿಸಿದ್ದರು. ‘ನನ್ನ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ಹಾಗೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವನ್​ರಾಜ್​ ಅವರು ಹೃದಯಾಘಾತದಿಂದ ಅಸುನೀಗಿದ್ದಾರೆ’ ಎಂದು ಪೋನ್​ರಾಮ್​ ಟ್ವೀಟ್​ ಮಾಡಿದ್ದರು. ಅದರ ಬೆನ್ನಲ್ಲೇ ಅಯ್ಯಪ್ಪನ್​ ಗೋಪಿ ನಿಧನರಾಗಿರುವ ಶಾಕಿಂಗ್​ ಸುದ್ದಿ ಕೇಳಿಬಂದಿದೆ.

ತಮಿಳು ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ ಆಗುತ್ತಲೇ ಇದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆವಿ ಆನಂದ್​, ಖ್ಯಾತ ನಟ ವಿವೇಕ್, ಹಾಸ್ಯ ನಟ ಪಾಂಡು ಸೇರಿದಂತೆ ಅನೇಕರು ಇತ್ತೀಚೆಗೆ ಮೃತರಾದರು. ಈಗ ಅಯ್ಯಪ್ಪನ್​ ಗೋಪಿ ಮತ್ತು ಪವನ್​ರಾಜ್​ ನಿಧನರಾಗಿದ್ದಾರೆ. ಇನ್ನೊಂದೆಡೆ ಕೊರೊನಾ ಹಾವಳಿಯಿಂದಲೂ ಅನೇಕ ಸೆಲೆಬ್ರಿಟಿಗಳು ಅಸುನೀಗುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us