AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿತದ ಚಟಕ್ಕೆ ಬಲಿಯಾದ ನಟ; ಸಹಾಯಕ್ಕೆ ಬರಲಿಲ್ಲ ಹಣ  

ತಮಿಳು ಕಲಾವಿದ ಬಿಜಿಲಿ ರಮೇಶ್ ಅವರು ನಿಧನ ಹೊಂದಿದ್ದಾರೆ. ಬಿಜಿಲಿ ರಮೇಶ್ ಅವರು ಯೂಟ್ಯೂಬ್​ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆದರು. ಈ ವಿಡಿಯೋಗಳು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದ್ದವು. ಆ ಬಳಿಕ ಅವರು ನಟನೆಗೆ ಕಾಲಿಟ್ಟರು.

ಕುಡಿತದ ಚಟಕ್ಕೆ ಬಲಿಯಾದ ನಟ; ಸಹಾಯಕ್ಕೆ ಬರಲಿಲ್ಲ ಹಣ  
ರಮೇಶ್
ರಾಜೇಶ್ ದುಗ್ಗುಮನೆ
|

Updated on: Aug 27, 2024 | 9:02 AM

Share

ತಮಿಳು ನಟ ಬಿಜಿಲಿ ರಮೇಶ್ ಅವರು ಇಂದು (ಆಗಸ್ಟ್ 27) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ರಮೇಶ್ ಕುಡಿತದ ಚಟಕ್ಕೆ ಒಳಗಾಗಿದ್ದರು. ಹೀಗಾಗಿ ಯಕೃತ್ತಿಗೆ (ಲಿವರ್) ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಆರ್ಥಿಕವಾಗಿಯೂ ಸಾಕಷ್ಟು ತೊಂದರೆ ಅನುಭವಿಸಿದ್ದರು. ಹೀಗಾಗಿ, ಚಿತ್ರರಂಗದವರು ಅವರ ಸಹಾಯಕ್ಕೆ ಮುಂದಾಗಿದ್ದರು. ಆದರೆ, ಈ ಹಣ ಅವರನ್ನು ಉಳಿಸಿಲ್ಲ.

ಬಿಜಿಲಿ ರಮೇಶ್ ಅವರು ಯೂಟ್ಯೂಬ್​ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆದರು. ಈ ವಿಡಿಯೋಗಳು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದ್ದವು. 2018ರಲ್ಲಿ ಅವರನ್ನು ‘ಕೊಲಮಾವು ಕೋಕಿಲ’ ಸಿನಿಮಾದ ಪ್ರಮೋಷನಲ್ ಸಾಂಗ್​ಗೆ ಬಳಕೆ ಮಾಡಿಕೊಳ್ಳಲಾಯಿತು. ಆ ಬಳಿಕ ಅವರು ನಟನೆಗೆ ಕಾಲಿಟ್ಟರು. ಕೆಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

‘ನಪ್ಟೆ ತುನೈ’, ‘ಆಡೈ’, ‘ಪೊನ್ಮಗಲ್ ವಂದಲ್’, ‘ಕೋಮಲಿ’ ಸಿನಿಮಾಗಳಲ್ಲಿ ಬಿಜಿಲಿ ರಮೇಶ್ ಅವರು ನಟಿಸಿದ್ದಾರೆ. ಅವರು ರಿಯಾಲಿಟಿ ಶೋ ಮೂಲಕವೂ ಗಮನ ಸೆಳೆದಿದ್ದರು. ‘ಕುಕ್ಕೂ ವಿತ್ ಕೋಮಲಿ’ ಹೆಸರಿನ ರಿಯಾಲಿಟಿ ಶೋನಲ್ಲಿ ರಮೇಶ್ ಅವರು ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಶ್ರೀದೇವಿ ನಿಧನದ ಬಗ್ಗೆ ಇರೋ ಅನುಮಾನ ದೂರವಾಗುವಂಥದ್ದಲ್ಲ; ಕಾರಣ?

ಬಿಜಿಲಿ ರಮೇಶ್ ಅವರು ರಜನಿಕಾಂತ್ ಅವರ ಅಭಿಮಾನಿ. ರಮೇಶ್ ಅವರು ತಮ್ಮ ವೃತ್ತಿ ಜೀವನದಲ್ಲಿ ಹಾಸ್ಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಕಳೆದ ಕೆಲ ತಿಂಗಳಿಂದ ಅವರು ಚಿತ್ರರಂಗದಿಂದ ದೂರವೇ ಇದ್ದರು. ಅವರು ಮದ್ಯದ ದಾಸನಾಗಿದ್ದರು. ಅಲ್ಲದೆ, ಅವರು ಮದ್ಯದ ಚಟ ಹತ್ತಿಸಿಕೊಳ್ಳದಂತೆ ಅನೇಕ ಸಂದರ್ಶನಗಳಲ್ಲಿ ಕೇಳಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರ ಸಾವಿಗೆ ಸಂತಾಪ ಸೂಚಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?