AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ಆಪ್ತ, ಹಿರಿಯ ನಟ ರಾಜೇಶ್ ನಿಧನ

Rajinikanth-Kamal Haasan: ತಮಿಳು ಚಿತ್ರರಂಗದ ಹಿರಿಯ ನಟ ರಾಜೇಶ್ ನಿಧನ ಹೊಂದಿದ್ದಾರೆ. ರಜನೀಕಾಂತ್-ಕಮಲ್ ಹಾಸನ್ ಕಾಲಘಟ್ಟದಲ್ಲಿಯೇ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ರಾಜೇಶ್, ಇಬ್ಬರು ಮೇರು ನಟರ ನಡುವೆ ತಮ್ಮದೇ ಆದ ಭಿನ್ನ ದಾರಿಯನ್ನು ಕಂಡುಕೊಂಡು, ಹಲವು ಅದ್ಭುತ ಸಿನಿಮಾ ಹಾಗೂ ಪಾತ್ರಗಳನ್ನು ನೀಡಿದ್ದಾರೆ.

ರಜನೀಕಾಂತ್ ಆಪ್ತ, ಹಿರಿಯ ನಟ ರಾಜೇಶ್ ನಿಧನ
Rajesh1
ಮಂಜುನಾಥ ಸಿ.
|

Updated on: May 30, 2025 | 10:31 AM

Share

ತಮಿಳು ಚಿತ್ರರಂಗದ ಹಿರಿಯ ನಟ, ರಜನೀಕಾಂತ್ (Rajinikanth) ಅವರ ಆಪ್ತ ರಾಜೇಶ್ ಮೇ 29 ರಂದು ಚೆನ್ನೈನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ರಾಜೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಮಿಳು ಚಿತ್ರರಂಗದಲ್ಲಿ ಶಿವಾಜಿ ಗಣೇಶನ್-ಎಂಜಿಆರ್ ಕಾಲಘಟ್ಟದ ಬಳಿಕ ಬಂದ ರಜನೀಕಾಂತ್-ಕಮಲ್ ಹಾಸನ್ ಕಾಲಘಟ್ಟದಲ್ಲಿಯೇ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ರಾಜೇಶ್, ಇಬ್ಬರು ಮೇರು ನಟರ ನಡುವೆ ತಮ್ಮದೇ ಆದ ಭಿನ್ನ ದಾರಿಯನ್ನು ಕಂಡುಕೊಂಡು, ಹಲವು ಅದ್ಭುತ ಸಿನಿಮಾ ಹಾಗೂ ಪಾತ್ರಗಳನ್ನು ನೀಡಿದ್ದಾರೆ.

1974 ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟ ರಾಜೇಶ್ ಅವರು ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಜನೀಕಾಂತ್ ಆಕ್ಷನ್ ಹೀರೋ ಆಗಿ, ಕಮಲ್ ಹಾಸನ್ ರೊಮ್ಯಾಂಟಿಕ್ ಹೀರೋ ಆಗಿ ಮಿಂಚುತ್ತಿದ್ದ ಕಾಲದಲ್ಲಿ ರಾಜೇಶ್ ಸಾಮಾನ್ಯ ವ್ಯಕ್ತಿಯ ಪಾತ್ರಗಳಿಂದಲೇ ಬಹುವಾಗಿ ಗಮನ ಸೆಳೆದಿದ್ದರು. ಅವರ ಸಿನಿಮಾಗಳಲ್ಲಿ ಸಾಮಾಜಿಕ ಸಂದೇಶಗಳು ಇರುತ್ತಿದ್ದವು. ತಮ್ಮ ಸಿನಿಮಾಗಳಲ್ಲಿ ಅವರು ಜನ ಸ್ನೇಹಿ ವ್ಯಕ್ತಿಯ ಪಾತ್ರಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು.

ತಮಿಳು ಮಾತ್ರವೇ ಅಲ್ಲದೆ ಮಲಯಾಳಂ ತೆಲುಗು ಸಿನಿಮಾಗಳಲ್ಲಿಯೂ ರಾಜೇಶ್ ನಟಿಸಿದ್ದರು. ರಾಜೇಶ್ ಅವರು ನಟನಾಗಿ ಮಾತ್ರವೇ ಅಲ್ಲದೆ ಲೇಖಕನಾಗಿ, ಯೂಟ್ಯೂಬರ್ ಆಗಿ ಯಶಸ್ವಿ ಉದ್ಯಮಿಯಾಗಿ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದರು. ಯಾವುದೇ ವಿವಾದಗಳಿಗೆ ಅತೀತರಾಗಿ ಎಲ್ಲರೊಟ್ಟಿಗೆ ಆತ್ಮೀಯ ಬಂಧ ಹೊಂದಿದ್ದ ರಾಜೇಶ್ ತಮಿಳಿನವರ ಮೆಚ್ಚಿನ ನಟರಾಗಿದ್ದರು.

ರಿಯಲ್ ಎಸ್ಟೇಟ್ ಉದ್ಯಮಿ, ಬಿಲ್ಡರ್ ಸಹ ಆಗಿದ್ದ ರಾಜೇಶ್ ಅವರು 1985 ರಲ್ಲಿಯೇ ಸಿನಿಮಾ ಚಿತ್ರೀಕರಣಕ್ಕಾಗಿ ಎಂದೇ ದೊಡ್ಡ ಬಂಗ್ಲೆ ಕಟ್ಟಿಸಿದ್ದರು. ಆ ಬಂಗ್ಲೆಯಲ್ಲಿ ತಮಿಳಿನ ಹಲವಾರು ಸಿನಿಮಾಗಳ ಚಿತ್ರೀಕರಣ ನಡೆದಿದೆ. ಆ ಬಳಿಕ 1993 ರಲ್ಲಿ ಅದನ್ನು ಮಾರಾಟ ಮಾಡಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಇಳಿದರು. ಹೋಟೆಲ್, ಅಪಾರ್ಟ್​ಮೆಂಟ್​ಗಳನ್ನು ಅವರು ಕಟ್ಟಿಸಿದ್ದಾರೆ.

ರಾಜೇಶ್ ನಿಧನಕ್ಕೆ ತಮಿಳು ಚಿತ್ರರಂಗದ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ರಜನೀಕಾಂತ್ ಟ್ವೀಟ್ ಮಾಡಿ, ‘ರಾಜೇಶ್ ನನ್ನ ಅತ್ಯಂತ ಆಪ್ತ ನಟ, ಅವರು ಹೃದಯವಂತ ವ್ಯಕ್ತಿಯಾಗಿದ್ದರು. ಅವರ ಸಾವು ನನಗೆ ಆಘಾತ ತಂದಿದೆ’ ಎಂದಿದ್ದಾರೆ. ನಟ ಕಮಲ್ ಹಾಸನ್ ಟ್ವೀಟ್ ಮಾಡಿ, ‘ರಾಜೇಶ್ ಅವರು ಪರಿಪೂರ್ಣ ನಟ, ಅವರು ಜ್ಞಾನಕ್ಕಾಗಿ ಹಾತೊರೆಯುತ್ತಿದ್ದರು. ಓದುವುದು ಅವರ ಬಹು ಮುಖ್ಯ ಹವ್ಯಾಸವಾಗಿತ್ತು. ಅಂತಿಮ ದಿನಗಳ ವರೆಗೂ ಅವರು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!