AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿಗಾಗಿ ಮರ್ಯಾದಾ ಹತ್ಯೆ ನಡೆದರೆ ಅದು ಹಿಂಸೆ ಅಲ್ಲ’: ನಟನ ಶಾಕಿಂಗ್​ ಹೇಳಿಕೆ ವೈರಲ್​

ಮರ್ಯಾದಾ ಹತ್ಯೆ ಬಗ್ಗೆ ತಮಿಳು ಚಿತ್ರರಂಗದ ನಟ, ನಿರ್ದೇಶಕ ರಂಜಿತ್​ ಹೇಳಿಕೆ ನೀಡಿದ್ದು, ಅದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ‘ಅದು ಹಿಂದೆ ಅಲ್ಲ. ಪಾಲಕರು ತೋರಿಸುವ ಕಾಳಜಿ’ ಎಂದು ರಂಜಿತ್​ ಅವರು ನಾಚಿಕೆಗೇಡಿನ ಹೇಳಿಕೆ ನೀಡಿದ್ದಾರೆ. ರಂಜಿತ್​ ಮನಸ್ಥಿತಿ ಎಷ್ಟು ಕೊಳಕಾಗಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

‘ಜಾತಿಗಾಗಿ ಮರ್ಯಾದಾ ಹತ್ಯೆ ನಡೆದರೆ ಅದು ಹಿಂಸೆ ಅಲ್ಲ’: ನಟನ ಶಾಕಿಂಗ್​ ಹೇಳಿಕೆ ವೈರಲ್​
ರಂಜಿತ್​
ಮದನ್​ ಕುಮಾರ್​
|

Updated on: Aug 10, 2024 | 5:25 PM

Share

ತಮಿಳಿನ ನಟ, ನಿರ್ದೇಶಕ ರಂಜಿತ್​ ಒಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿ ಮಾಡಿದ್ದಾರೆ. ಅಂತರ್​ಜಾತಿ ಪ್ರೇಮ/ವಿವಾಹ ನಡೆದರೆ ಪಾಲಕರು ನಡೆಸುವ ಮರ್ಯಾದಾ ಹತ್ಯೆ ಬಗ್ಗೆ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸುವ ಕಾಲದಲ್ಲಿ ರಂಜಿತ್​ ಅವರು ಇಂಥ ಹತ್ಯೆವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆ ಎಲ್ಲರಿಗೂ ಶಾಕಿಂಗ್​ ಎನಿಸಿದೆ. ದೇಶಾದ್ಯಂತ ಈ ಬಗ್ಗೆ ಚರ್ಚೆ ಆಗುತ್ತಿದೆ. ರಂಜಿತ್​ ಅವರ ಮನಸ್ಥಿತಿ ತುಂಬ ಕೀಳುಮಟ್ಟದಲ್ಲಿ ಇದೆ ಎಂದು ನೆಟ್ಟಿಗರು ಚಾಟಿ ಬೀಸುತ್ತಿದ್ದಾರೆ. ರಂಜಿತ್​ ಹೇಳಿಕೆ ನೀಡಿರುವ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಕಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ರಂಜಿತ್​ ಅವರು ‘ಕವುಂದಂಪಾಲಾಯಂ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್​ 9ರಂದು ತಮಿಳುನಾಡಿನ ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಪ್ರೇಕ್ಷಕರ ಜೊತೆ ಚಿತ್ರಮಂದಿರದಲ್ಲಿ ಕುಳಿತು ಸಿನಿಮಾ ವೀಕ್ಷಿಸಿದ ಬಳಿಕ ರಂಜಿತ್​ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮರ್ಯಾದಾ ಹತ್ಯೆಯ ಪರವಾಗಿ ರಂಜಿತ್​ ಮಾತನಾಡಿದ್ದಾರೆ.

ಇದನ್ನೂ ಓದಿ: ಮರ್ಯಾದಾ ಹತ್ಯೆ; ಅಂತರ್ಜಾತಿ ವಿವಾಹವಾದ ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

‘ತಂದೆ-ತಾಯಿಗೆ ಮಾತ್ರ ಆ ನೋವು ಏನು ಎಂಬುದು ಗೊತ್ತು. ಒಂದು ಬೈಕ್​ ಕಳೆದುಹೋದರೆ ಏನಾಯಿತು ಅಂತ ನಾವು ನೋಡಲು ಹೋಗುವುದಿಲ್ಲವೇ? ಅದೇ ರೀತಿ ಮಕ್ಕಳನ್ನೇ ಜೀವನ ಎಂದುಕೊಂಡ ಪಾಲಕರು ಕೂಡ ಸಿಟ್ಟು ತೋರಿಸುತ್ತಾರೆ. ಅದು ಹಿಂಸೆ ಅಲ್ಲವೇ ಅಲ್ಲ. ಮಕ್ಕಳ ಬಗ್ಗೆ ಅವರು ತೋರಿಸುವ ಕಾಳಜಿ ಅದು’ ಎಂದು ರಂಜಿತ್ ಹೇಳಿದ್ದಾರೆ. ಈ ಹೇಳಿಕೆಗೆ ಸೋಶಿಯಲ್​ ಮೀಡಿಯಾದಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಈ ಮೊದಲು ಕೂಡ ರಂಜಿತ್​ ಅವರು ವಿವಾದ ಸೃಷ್ಟಿಸುವಂತಹ ಹೇಳಿಕೆಗಳನ್ನು ನೀಡಿದ್ದರು. ಮಹಿಳೆಯರನ್ನು ಅವಹೇಳನ ಮಾಡುವ ರೀತಿಯಲ್ಲಿ ಅವರು ಮಾತನಾಡಿದ್ದರು. ಈಗ ಅವರು ಮರ್ಯಾದಾ ಹತ್ಯೆ ಬಗ್ಗೆ ಮಾತನಾಡಿರುವುದಕ್ಕೆ ನೆಟ್ಟಿಗರು ಕ್ಲಾಸ್​ ತೆಗೆದುಕೊಳ್ಳುತ್ತಿದ್ದಾರೆ. ‘ನೀವು ಕೇವಲ ತಪ್ಪಾದ ಹೇಳಿಕೆಗಳನ್ನು ನೀಡುತ್ತಿಲ್ಲ, ಇಡೀ ಸಮಾಜಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದೀರಿ. ಇದು ಅಪಾಯಕಾರಿ. ಮರ್ಯಾದಾ ಹತ್ಯೆ ಎಂದರೆ ಪಾಲಕರು ತೋರಿಸುವ ಪ್ರೀತಿ ಅಲ್ಲ. ಅದು ಮರ್ಡರ್​’ ಎಂದು ಜನರು ರಂಜಿತ್​ಗೆ ಪಾಠ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್