AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ರಾಜಕೀಯದ ನಿಲುವುಗಳ ಕಾರಣಕ್ಕೆ ಕಾಲಿವುಡ್​ ನಟ ಸಿದ್ದಾರ್ಥ್ ಅವರು ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಹಾಗಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ.

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?
ಸಿದ್ದಾರ್ಥ್​ ಶುಕ್ಲಾ, ಕಾಲಿವುಡ್​ ನಟ ಸಿದ್ದಾರ್ಥ್
TV9 Web
| Edited By: |

Updated on: Sep 04, 2021 | 9:19 AM

Share

ಜನಪ್ರಿಯ ನಟ ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ನಿಧನರಾಗಿರುವುದು ನೋವಿನ ಸಂಗತಿ. ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಗುರುವಾರ (ಸೆ.2) ಸಿದ್ದಾರ್ಥ್​ ಕೊನೆಯುಸಿರೆಳೆದ ಬಳಿಕ ಇಡೀ ಚಿತ್ರೋದ್ಯಮಕ್ಕೆ ಶಾಕ್​ ಆಯಿತು. ಕೋಟ್ಯಂತರ ಅಭಿಮಾನಿಗಳಿಗೆ ಈ ಕಹಿ ಸುದ್ದಿಯನ್ನು ನಂಬಲು ಸಾಧ್ಯವಾಗಲಿಲ್ಲ. ಎಲ್ಲರೂ ಸಿದ್ದಾರ್ಥ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ಇದರ ನಡುವೆ ಕೆಲವರು ವಿಕೃತಿ ಮೆರೆಯುತ್ತಿದ್ದಾರೆ. ತಮಿಳು ನಟ ಸಿದ್ದಾರ್ಥ್​ ಅವರನ್ನು ಟಾರ್ಗೆಟ್​ ಮಾಡಿಕೊಂಡು ದ್ವೇಷ ಕಾರುವ ಟ್ವೀಟ್​ಗಳನ್ನು ಮಾಡುತ್ತಿದ್ದಾರೆ ಕೆಲವು ಕಿಡಿಗೇಡಿಗಳು. ಸಿದ್ದಾರ್ಥ್​ ಅವರು ಅದನ್ನೆಲ್ಲ ಸಾಕ್ಷಿ ಸಮೇತ ಬಯಲು ಮಾಡಿದ್ದಾರೆ.

ಒಂದೇ ಹೆಸರಿನ ನಟರು ಹಲವರು ಇದ್ದಾಗ ಜನರಿಗೆ ಗೊಂದಲ ಆಗುವುದು ಸಹಜ. ಹಿಂದಿ ನಟ ಸಿದ್ದಾರ್ಥ್​ ನಿಧನರಾದಾಗ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವವರು ಕಣ್ತಪ್ಪಿನಿಂದ ಕಾಲಿವುಡ್​ ನಟ ಸಿದ್ದಾರ್ಥ್​ ಅವರ ಫೋಟೋವನ್ನು ಅಪ್​ಲೋಡ್​ ಮಾಡಿಬಿಟ್ಟರೆ ಹೇಗೋ ಕ್ಷಮಿಸಬಹುದು. ಆದರೆ ಇದು ಕಣ್ತಪ್ಪಿನಿಂದ ಆದ ಪ್ರಮಾದ ಅಲ್ಲ. ಬೇಕಂತಲೇ ತಮಿಳಿನ​ ಸಿದ್ದಾರ್ಥ್​ರ ಫೋಟೋವನ್ನು ಕೆಲವು ಕಿಡಿಗೇಡಿಗಳು ಅಪ್​ಲೋಡ್​ ಮಾಡುತ್ತಾ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಆ ಮೂಲಕ ತಮ್ಮ ಹೀನ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ.

ರಾಜಕೀಯದ ನಿಲುವುಗಳ ಕಾರಣಕ್ಕೆ ಸಿದ್ದಾರ್ಥ್ ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಸರ್ಕಾರದ ಕೆಲವು ವಿಚಾರಗಳನ್ನು ಅವರು ನೇರವಾಗಿ ಟೀಕಿಸುತ್ತಾರೆ. ಆ ಕಾರಣಕ್ಕಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ. ಕೆಲವರಂತೂ ಮಿತಿಮೀರಿ ಕಮೆಂಟ್​ ಮಾಡುತ್ತಿದ್ದಾರೆ. ‘ಆ ಸಿದ್ದಾರ್ಥ್​ ಬದಲಿಗೆ ದೇವರು ಈ ಸಿದ್ದಾರ್ಥ್​ಗೆ ಸಾವು ನೀಡಬಹುದಾಗಿತ್ತು’ ಎಂದು ನಿರ್ಲಜ್ಜೆಯಿಂದ ಕೆಲವರು ಕಮೆಂಟ್​ ಮಾಡಿದ್ದಾರೆ!

ಇಂಥ ಕೆಲವು ಟ್ವೀಟ್​ ಮತ್ತು ಕಮೆಂಟ್​ಗಳನ್ನು ಸಿದ್ದಾರ್ಥ್​ ಅವರು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ವಿಕೃತರ ಬಣ್ಣ ಬಯಲು ಮಾಡಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

ಮುಂಬೈನಲ್ಲಿ ಸಿದ್ದಾರ್ಥ್​ ಅಂತ್ಯಕ್ರಿಯೆ:

ಮುಂಬೈನ ಓಶಿವರ ಚಿತಾಗಾರದಲ್ಲಿ ಸಿದ್ದಾರ್ಥ್​ ಶುಕ್ಲಾ ಅಂತ್ಯ ಸಂಸ್ಕಾರ ನೆರವೇರಿದೆ. ಬ್ರಹ್ಮಕುಮಾರಿ ನಿಯಮಗಳ ಪ್ರಕಾರ ಅಂತ್ಯಕ್ರಿಯೆ ನಡೆದಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಕೊವಿಡ್​ ನಿಯಮಗಳನ್ನು ಸಂಪೂರ್ಣವಾಗಿ ಸಡಿಲ ಮಾಡಿಲ್ಲ. ಹೀಗಾಗಿ, ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಈ ಕಾರ್ಯಗಳು ನಡೆದಿವೆ. ಸಿದ್ಧಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದು ಖಚಿತವಾಗಿತ್ತು. ಇದರ ಮಧ್ಯೆ, ಅವರು ಔಷಧ ಸೇವಿಸಿದ್ದಾರೆ ಎಂಬಿತ್ಯಾದಿ ವಿಚಾರಗಳು ವೈರಲ್​ ಆಗಿತ್ತು. ಈ ಕಾರಣಕ್ಕೆ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ನಂತರ ಆಸ್ಪತ್ರೆಯಿಂದ ಅವರ ಶವವನ್ನು ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು