AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ರಾಜಕೀಯದ ನಿಲುವುಗಳ ಕಾರಣಕ್ಕೆ ಕಾಲಿವುಡ್​ ನಟ ಸಿದ್ದಾರ್ಥ್ ಅವರು ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಹಾಗಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ.

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?
ಸಿದ್ದಾರ್ಥ್​ ಶುಕ್ಲಾ, ಕಾಲಿವುಡ್​ ನಟ ಸಿದ್ದಾರ್ಥ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 04, 2021 | 9:19 AM

ಜನಪ್ರಿಯ ನಟ ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ನಿಧನರಾಗಿರುವುದು ನೋವಿನ ಸಂಗತಿ. ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಗುರುವಾರ (ಸೆ.2) ಸಿದ್ದಾರ್ಥ್​ ಕೊನೆಯುಸಿರೆಳೆದ ಬಳಿಕ ಇಡೀ ಚಿತ್ರೋದ್ಯಮಕ್ಕೆ ಶಾಕ್​ ಆಯಿತು. ಕೋಟ್ಯಂತರ ಅಭಿಮಾನಿಗಳಿಗೆ ಈ ಕಹಿ ಸುದ್ದಿಯನ್ನು ನಂಬಲು ಸಾಧ್ಯವಾಗಲಿಲ್ಲ. ಎಲ್ಲರೂ ಸಿದ್ದಾರ್ಥ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ಇದರ ನಡುವೆ ಕೆಲವರು ವಿಕೃತಿ ಮೆರೆಯುತ್ತಿದ್ದಾರೆ. ತಮಿಳು ನಟ ಸಿದ್ದಾರ್ಥ್​ ಅವರನ್ನು ಟಾರ್ಗೆಟ್​ ಮಾಡಿಕೊಂಡು ದ್ವೇಷ ಕಾರುವ ಟ್ವೀಟ್​ಗಳನ್ನು ಮಾಡುತ್ತಿದ್ದಾರೆ ಕೆಲವು ಕಿಡಿಗೇಡಿಗಳು. ಸಿದ್ದಾರ್ಥ್​ ಅವರು ಅದನ್ನೆಲ್ಲ ಸಾಕ್ಷಿ ಸಮೇತ ಬಯಲು ಮಾಡಿದ್ದಾರೆ.

ಒಂದೇ ಹೆಸರಿನ ನಟರು ಹಲವರು ಇದ್ದಾಗ ಜನರಿಗೆ ಗೊಂದಲ ಆಗುವುದು ಸಹಜ. ಹಿಂದಿ ನಟ ಸಿದ್ದಾರ್ಥ್​ ನಿಧನರಾದಾಗ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವವರು ಕಣ್ತಪ್ಪಿನಿಂದ ಕಾಲಿವುಡ್​ ನಟ ಸಿದ್ದಾರ್ಥ್​ ಅವರ ಫೋಟೋವನ್ನು ಅಪ್​ಲೋಡ್​ ಮಾಡಿಬಿಟ್ಟರೆ ಹೇಗೋ ಕ್ಷಮಿಸಬಹುದು. ಆದರೆ ಇದು ಕಣ್ತಪ್ಪಿನಿಂದ ಆದ ಪ್ರಮಾದ ಅಲ್ಲ. ಬೇಕಂತಲೇ ತಮಿಳಿನ​ ಸಿದ್ದಾರ್ಥ್​ರ ಫೋಟೋವನ್ನು ಕೆಲವು ಕಿಡಿಗೇಡಿಗಳು ಅಪ್​ಲೋಡ್​ ಮಾಡುತ್ತಾ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಆ ಮೂಲಕ ತಮ್ಮ ಹೀನ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ.

ರಾಜಕೀಯದ ನಿಲುವುಗಳ ಕಾರಣಕ್ಕೆ ಸಿದ್ದಾರ್ಥ್ ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಸರ್ಕಾರದ ಕೆಲವು ವಿಚಾರಗಳನ್ನು ಅವರು ನೇರವಾಗಿ ಟೀಕಿಸುತ್ತಾರೆ. ಆ ಕಾರಣಕ್ಕಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ. ಕೆಲವರಂತೂ ಮಿತಿಮೀರಿ ಕಮೆಂಟ್​ ಮಾಡುತ್ತಿದ್ದಾರೆ. ‘ಆ ಸಿದ್ದಾರ್ಥ್​ ಬದಲಿಗೆ ದೇವರು ಈ ಸಿದ್ದಾರ್ಥ್​ಗೆ ಸಾವು ನೀಡಬಹುದಾಗಿತ್ತು’ ಎಂದು ನಿರ್ಲಜ್ಜೆಯಿಂದ ಕೆಲವರು ಕಮೆಂಟ್​ ಮಾಡಿದ್ದಾರೆ!

ಇಂಥ ಕೆಲವು ಟ್ವೀಟ್​ ಮತ್ತು ಕಮೆಂಟ್​ಗಳನ್ನು ಸಿದ್ದಾರ್ಥ್​ ಅವರು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ವಿಕೃತರ ಬಣ್ಣ ಬಯಲು ಮಾಡಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

ಮುಂಬೈನಲ್ಲಿ ಸಿದ್ದಾರ್ಥ್​ ಅಂತ್ಯಕ್ರಿಯೆ:

ಮುಂಬೈನ ಓಶಿವರ ಚಿತಾಗಾರದಲ್ಲಿ ಸಿದ್ದಾರ್ಥ್​ ಶುಕ್ಲಾ ಅಂತ್ಯ ಸಂಸ್ಕಾರ ನೆರವೇರಿದೆ. ಬ್ರಹ್ಮಕುಮಾರಿ ನಿಯಮಗಳ ಪ್ರಕಾರ ಅಂತ್ಯಕ್ರಿಯೆ ನಡೆದಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಕೊವಿಡ್​ ನಿಯಮಗಳನ್ನು ಸಂಪೂರ್ಣವಾಗಿ ಸಡಿಲ ಮಾಡಿಲ್ಲ. ಹೀಗಾಗಿ, ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಈ ಕಾರ್ಯಗಳು ನಡೆದಿವೆ. ಸಿದ್ಧಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದು ಖಚಿತವಾಗಿತ್ತು. ಇದರ ಮಧ್ಯೆ, ಅವರು ಔಷಧ ಸೇವಿಸಿದ್ದಾರೆ ಎಂಬಿತ್ಯಾದಿ ವಿಚಾರಗಳು ವೈರಲ್​ ಆಗಿತ್ತು. ಈ ಕಾರಣಕ್ಕೆ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ನಂತರ ಆಸ್ಪತ್ರೆಯಿಂದ ಅವರ ಶವವನ್ನು ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ