‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ರಾಜಕೀಯದ ನಿಲುವುಗಳ ಕಾರಣಕ್ಕೆ ಕಾಲಿವುಡ್​ ನಟ ಸಿದ್ದಾರ್ಥ್ ಅವರು ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಹಾಗಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ.

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?
ಸಿದ್ದಾರ್ಥ್​ ಶುಕ್ಲಾ, ಕಾಲಿವುಡ್​ ನಟ ಸಿದ್ದಾರ್ಥ್
Follow us
| Updated By: ಮದನ್​ ಕುಮಾರ್​

Updated on: Sep 04, 2021 | 9:19 AM

ಜನಪ್ರಿಯ ನಟ ಸಿದ್ದಾರ್ಥ್​ ಶುಕ್ಲಾ ಅವರು ಹೃದಯಾಘಾತದಿಂದ ನಿಧನರಾಗಿರುವುದು ನೋವಿನ ಸಂಗತಿ. ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಗುರುವಾರ (ಸೆ.2) ಸಿದ್ದಾರ್ಥ್​ ಕೊನೆಯುಸಿರೆಳೆದ ಬಳಿಕ ಇಡೀ ಚಿತ್ರೋದ್ಯಮಕ್ಕೆ ಶಾಕ್​ ಆಯಿತು. ಕೋಟ್ಯಂತರ ಅಭಿಮಾನಿಗಳಿಗೆ ಈ ಕಹಿ ಸುದ್ದಿಯನ್ನು ನಂಬಲು ಸಾಧ್ಯವಾಗಲಿಲ್ಲ. ಎಲ್ಲರೂ ಸಿದ್ದಾರ್ಥ್​ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ. ಇದರ ನಡುವೆ ಕೆಲವರು ವಿಕೃತಿ ಮೆರೆಯುತ್ತಿದ್ದಾರೆ. ತಮಿಳು ನಟ ಸಿದ್ದಾರ್ಥ್​ ಅವರನ್ನು ಟಾರ್ಗೆಟ್​ ಮಾಡಿಕೊಂಡು ದ್ವೇಷ ಕಾರುವ ಟ್ವೀಟ್​ಗಳನ್ನು ಮಾಡುತ್ತಿದ್ದಾರೆ ಕೆಲವು ಕಿಡಿಗೇಡಿಗಳು. ಸಿದ್ದಾರ್ಥ್​ ಅವರು ಅದನ್ನೆಲ್ಲ ಸಾಕ್ಷಿ ಸಮೇತ ಬಯಲು ಮಾಡಿದ್ದಾರೆ.

ಒಂದೇ ಹೆಸರಿನ ನಟರು ಹಲವರು ಇದ್ದಾಗ ಜನರಿಗೆ ಗೊಂದಲ ಆಗುವುದು ಸಹಜ. ಹಿಂದಿ ನಟ ಸಿದ್ದಾರ್ಥ್​ ನಿಧನರಾದಾಗ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವವರು ಕಣ್ತಪ್ಪಿನಿಂದ ಕಾಲಿವುಡ್​ ನಟ ಸಿದ್ದಾರ್ಥ್​ ಅವರ ಫೋಟೋವನ್ನು ಅಪ್​ಲೋಡ್​ ಮಾಡಿಬಿಟ್ಟರೆ ಹೇಗೋ ಕ್ಷಮಿಸಬಹುದು. ಆದರೆ ಇದು ಕಣ್ತಪ್ಪಿನಿಂದ ಆದ ಪ್ರಮಾದ ಅಲ್ಲ. ಬೇಕಂತಲೇ ತಮಿಳಿನ​ ಸಿದ್ದಾರ್ಥ್​ರ ಫೋಟೋವನ್ನು ಕೆಲವು ಕಿಡಿಗೇಡಿಗಳು ಅಪ್​ಲೋಡ್​ ಮಾಡುತ್ತಾ, ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಆ ಮೂಲಕ ತಮ್ಮ ಹೀನ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದ್ದಾರೆ.

ರಾಜಕೀಯದ ನಿಲುವುಗಳ ಕಾರಣಕ್ಕೆ ಸಿದ್ದಾರ್ಥ್ ಅನೇಕರ ವಿರೋಧವನ್ನು ಕಟ್ಟಿಕೊಂಡಿದ್ದಾರೆ. ಸರ್ಕಾರದ ಕೆಲವು ವಿಚಾರಗಳನ್ನು ಅವರು ನೇರವಾಗಿ ಟೀಕಿಸುತ್ತಾರೆ. ಆ ಕಾರಣಕ್ಕಾಗಿ ಅವರನ್ನು ಈಗ ಟಾರ್ಗೆಟ್​ ಮಾಡಲಾಗುತ್ತಿದೆ. ಕೆಲವರಂತೂ ಮಿತಿಮೀರಿ ಕಮೆಂಟ್​ ಮಾಡುತ್ತಿದ್ದಾರೆ. ‘ಆ ಸಿದ್ದಾರ್ಥ್​ ಬದಲಿಗೆ ದೇವರು ಈ ಸಿದ್ದಾರ್ಥ್​ಗೆ ಸಾವು ನೀಡಬಹುದಾಗಿತ್ತು’ ಎಂದು ನಿರ್ಲಜ್ಜೆಯಿಂದ ಕೆಲವರು ಕಮೆಂಟ್​ ಮಾಡಿದ್ದಾರೆ!

ಇಂಥ ಕೆಲವು ಟ್ವೀಟ್​ ಮತ್ತು ಕಮೆಂಟ್​ಗಳನ್ನು ಸಿದ್ದಾರ್ಥ್​ ಅವರು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ವಿಕೃತರ ಬಣ್ಣ ಬಯಲು ಮಾಡಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

ಮುಂಬೈನಲ್ಲಿ ಸಿದ್ದಾರ್ಥ್​ ಅಂತ್ಯಕ್ರಿಯೆ:

ಮುಂಬೈನ ಓಶಿವರ ಚಿತಾಗಾರದಲ್ಲಿ ಸಿದ್ದಾರ್ಥ್​ ಶುಕ್ಲಾ ಅಂತ್ಯ ಸಂಸ್ಕಾರ ನೆರವೇರಿದೆ. ಬ್ರಹ್ಮಕುಮಾರಿ ನಿಯಮಗಳ ಪ್ರಕಾರ ಅಂತ್ಯಕ್ರಿಯೆ ನಡೆದಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ಕೊವಿಡ್​ ನಿಯಮಗಳನ್ನು ಸಂಪೂರ್ಣವಾಗಿ ಸಡಿಲ ಮಾಡಿಲ್ಲ. ಹೀಗಾಗಿ, ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಈ ಕಾರ್ಯಗಳು ನಡೆದಿವೆ. ಸಿದ್ಧಾರ್ಥ್​ ಹೃದಯಾಘಾತದಿಂದ ಮೃತಪಟ್ಟಿದ್ದು ಖಚಿತವಾಗಿತ್ತು. ಇದರ ಮಧ್ಯೆ, ಅವರು ಔಷಧ ಸೇವಿಸಿದ್ದಾರೆ ಎಂಬಿತ್ಯಾದಿ ವಿಚಾರಗಳು ವೈರಲ್​ ಆಗಿತ್ತು. ಈ ಕಾರಣಕ್ಕೆ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ನಂತರ ಆಸ್ಪತ್ರೆಯಿಂದ ಅವರ ಶವವನ್ನು ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ