AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿನ ಖ್ಯಾತ ನಟ ಸಿಂಬು ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ

ಸಿಂಬು ಅವರಿಗೆ ಇಂದು ಅನಾರೋಗ್ಯ ಕಾಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊವಿಡ್​ ಕಾಣಿಸಿಕೊಂಡಿರಬಹುದು ಎಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವರದಿ ನೆಗೆಟಿವ್​ ಬಂದಿದೆ.

ತಮಿಳಿನ ಖ್ಯಾತ ನಟ ಸಿಂಬು ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ
ಸಿಂಬು
TV9 Web
| Edited By: |

Updated on:Dec 11, 2021 | 7:49 PM

Share

ತಮಿಳಿನ ಖ್ಯಾತ ನಟ ಸಿಂಬು ಅವರು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಡಿಸೆಂಬರ್ 11) ಅವರನ್ನು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಕೊವಿಡ್​ ಅಂಟಿದೆಯೇ ಎನ್ನುವ ಭಯ ಅವರ ಅಭಿಮಾನಿಗಳಲ್ಲಿ ಕಾಡಿತ್ತು. ಆದರೆ, ಕೊವಿಡ್​ ಪರೀಕ್ಷೆಯಲ್ಲಿ ಅವರ ವರದಿ ನೆಗೆಟಿವ್​ ಬಂದಿದೆ. ಅವರಿಗೆ ವೈರಲ್​ ಇನ್​ಫೆಕ್ಷನ್​ ಆಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಕಡೆಯಿಂದ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಸಿಂಬು ಅವರಿಗೆ ಇಂದು ಅನಾರೋಗ್ಯ ಕಾಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊವಿಡ್​ ಕಾಣಿಸಿಕೊಂಡಿರಬಹುದು ಎಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವರದಿ ನೆಗೆಟಿವ್​ ಬಂದಿದೆ. ಆ ಬಳಿಕ ಅವರಿಗೆ ವೈರಲ್​ ಇನ್​ಫೆಕ್ಷನ್​ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಕಣ್ಣೀರು ಹಾಕಿದ್ದ ಸಿಂಬು..

ಇತ್ತೀಚೆಗೆ ‘ಮಾನಾಡು’ ಸಿನಿಮಾ ರಿಲೀಸ್​ ಆಗಿತ್ತು. ಇದಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾ ರಿಲೀಸ್​ ಆಗುವುದಕ್ಕೂ ಮೊದಲೇ ಅವರು ಕಣ್ಣೀರು ಹಾಕಿದ್ದರು. ವೇದಿಕೆಯಲ್ಲಿ ಮಾತು ಆರಂಭಿಸುವಾಗಲೇ ಸಿಂಬು ಎಮೋಷನಲ್​ ಆಗಿದ್ದರು. ‘ನಾನು ತುಂಬ ಸಮಸ್ಯೆ ಎದುರಿಸಿದ್ದೇನೆ. ಅವರು ತೊಂದರೆ ಕೊಡುತ್ತಲೇ ಇದ್ದಾರೆ. ಅವೆಲ್ಲವನ್ನೂ ನಾನು ಪರಿಹರಿಸಿಕೊಳ್ಳುತ್ತೇನೆ. ನೀವು ನನ್ನ ಕಾಳಜಿ ವಹಿಸಿ’ ಎಂದು ಅಭಿಮಾನಿಗಳಲ್ಲಿ ಸಿಂಬು ಮನವಿ ಮಾಡಿಕೊಂಡಿದ್ದರು.

ಸಿಂಬು ನಟಿಸಿರುವ ‘ಮಾನಾಡು’ ಚಿತ್ರದಲ್ಲಿ ಟೈಮ್ ಟ್ರಾವೆಲಿಂಗ್​ ಕಥೆ ಇದೆ. ಜೊತೆಗೆ ಇಂದಿನ ಕಾಲಘಟ್ಟದ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಕೂಡ ಈ ಚಿತ್ರದಲ್ಲಿ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕಲ್ಯಾಣಿ ಪ್ರಿಯದರ್ಶನ್​, ಎಸ್​.ಜೆ. ಸೂರ್ಯ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Puneeth Rajkumar: ಪುನೀತ್ ಮುಂದಿನ ಚಿತ್ರದ ವಿಡಿಯೋ ತುಣುಕು ರಿಲೀಸ್; ಭಾವುಕರಾದ ಫ್ಯಾನ್ಸ್

Published On - 7:32 pm, Sat, 11 December 21

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!