‘ಎಲ್ಲರೂ ತೊಂದರೆ ಕೊಡ್ತಿದ್ದಾರೆ’ ಎಂದು ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಟಾರ್​ ನಟ ಸಿಂಬು

Maanaadu press meet: ವೇದಿಕೆಯಲ್ಲಿ ಮಾತು ಆರಂಭಿಸುವಾಗಲೇ ಸಿಂಬು ಎಮೋಷನಲ್​ ಆಗಿದ್ದರು. ಚಿತ್ರರಂಗದಲ್ಲಿ ತಮಗೆ ಅನೇಕರು ತೊಂದರೆ ಕೊಡುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.

‘ಎಲ್ಲರೂ ತೊಂದರೆ ಕೊಡ್ತಿದ್ದಾರೆ’ ಎಂದು ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಟಾರ್​ ನಟ ಸಿಂಬು
ಸಿಂಬು
Follow us
| Updated By: ಮದನ್​ ಕುಮಾರ್​

Updated on: Nov 19, 2021 | 9:42 AM

ಸಿನಿಮಾ ಎಂದರೆ ಮೋಜು ಮಸ್ತಿಯ ಜಗತ್ತು ಎಂಬ ಭಾವನೆ ಹಲವರಲ್ಲಿದೆ. ಆದರೆ ಪರದೆ ಮೇಲೆ ಕಾಣುವ ಕಲರ್​ಫುಲ್​ ಜಗತ್ತು ಪರದೆ ಹಿಂದೆ ಇರುವುದಿಲ್ಲ. ತೆರೆ ಹಿಂದೆ ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲಿ ಇರುವ ಹಾಗೆಯೇ ಚಿತ್ರರಂಗದಲ್ಲೂ ಕೆಟ್ಟ ರಾಜಕೀಯ ಇದೆ. ಒಬ್ಬರನ್ನು ತುಳಿಯಲು ಇನ್ನೊಬ್ಬರು ಕಾಯುತ್ತಾ ಇರುತ್ತಾರೆ ಎಂಬುದಕ್ಕೆ ಈಗಾಗಲೇ ಹಲವು ಉದಾಹರಣೆಗಳು ಸಿಕ್ಕಿವೆ. ನಟ ಸುಶಾಂತ್​ ಸಿಂಗ್​ ರಜಪೂತ್​ ಅವರು ಹಲವರಿಂದ ತಿರಸ್ಕಾರಕ್ಕೆ ಒಳಪಟ್ಟಿದ್ದರು. ಇತ್ತೀಚೆಗೆ ನಟ ಕಾರ್ತಿಕ್​ ಆರ್ಯನ್​ ಅವರನ್ನೂ ಒಂದು ಪ್ರಭಾವಿ ಗುಂಪು ಟಾರ್ಗೆಟ್​ ಮಾಡುತ್ತಿರುವ ಬಗ್ಗೆ ಸುದ್ದಿ ಆಗಿತ್ತು. ಅದೇ ರೀತಿ ಈಗ ಕಾಲಿವುಡ್ (Kollywood)​ ಸ್ಟಾರ್​ ನಟ ಸಿಂಬು (Simbu) ಅವರು ಕಷ್ಟ ಅನುಭವಿಸುತ್ತಿದ್ದಾರೆ. ಹಾಗಂತ ಇದು ಗಾಸಿಪ್​ ಅಲ್ಲ. ಸ್ವತಃ ಸಿಂಬು ಅವರೇ ಈ ವಿಚಾರವನ್ನು ಬಹಿರಂಗವಾಗಿ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ಬಾಲನಟ ಆಗಿದ್ದಾಗಿನಿಂದಲೂ ಚಿತ್ರರಂಗದಲ್ಲಿ ಸಕ್ರಿಯ ಆಗಿರುವವರು ಸಿಂಬು. ಸಿನಿಮಾ ಕ್ಷೇತ್ರದ ಆಳ-ಅಗಲವನ್ನು ಅವರು ತಿಳಿದಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಕಾಂಟ್ರವರ್ಸಿ ಮಾಡಿಕೊಂಡಿದ್ದೇ ಹೆಚ್ಚು ಎಂಬಂತಾಗಿದೆ. ಬಹುನಿರೀಕ್ಷಿತ ‘ಮಾನಾಡು’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಆರಂಭದಲ್ಲಿ ಈ ಚಿತ್ರದ ನಿರ್ಮಾಪಕರ ಜೊತೆಗೂ ಸಿಂಬು ಕಿರಿಕ್​ ಮಾಡಿಕೊಂಡು ಚಿತ್ರತಂಡದಿಂದ ಹೊರನಡೆದಿದ್ದರು. ಮತ್ತೆ ಸಂಧಾನ ಮಾಡಿಕೊಂಡು ಚಿತ್ರತಂಡವನ್ನು ಸೇರಿಕೊಂಡರು. ಈಗ ಈ ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ ನಡೆದಿದೆ. ಆ ವೇದಿಕೆಯಲ್ಲಿ ಸಿಂಬು ಕಣ್ಣೀರು ಹಾಕಿದ್ದಾರೆ.

ವೇದಿಕೆಯಲ್ಲಿ ಮಾತು ಆರಂಭಿಸುವಾಗಲೇ ಸಿಂಬು ಎಮೋಷನಲ್​ ಆಗಿದ್ದರು. ಚಿತ್ರರಂಗದಲ್ಲಿ ಸಿಂಬುಗೆ ಅನೇಕರು ತೊಂದರೆ ಕೊಡುತ್ತಿದ್ದಾರಂತೆ. ಆದರೆ ಯಾರ ಹೆಸರನ್ನೂ ಅವರು ಬಹಿರಂಗ ಪಡಿಸಿಲ್ಲ. ‘ನಾನು ತುಂಬ ಸಮಸ್ಯೆ ಎದುರಿಸಿದ್ದೇನೆ. ಅವರು ತೊಂದರೆ ಕೊಡುತ್ತಲೇ ಇದ್ದಾರೆ. ಅವೆಲ್ಲವನ್ನೂ ನಾನು ಪರಿಹರಿಸಿಕೊಳ್ಳುತ್ತೇನೆ. ನೀವು ನನ್ನ ಕಾಳಜಿ ವಹಿಸಿ’ ಎಂದು ಅಭಿಮಾನಿಗಳಲ್ಲಿ ಸಿಂಬು ಮನವಿ ಮಾಡಿಕೊಂಡಿದ್ದಾರೆ.

ಸಿಂಬು ನಟಿಸಿರುವ ‘ಮಾನಾಡು’ ಚಿತ್ರದಲ್ಲಿ ಟೈಮ್ ಟ್ರಾವೆಲಿಂಗ್​ ಕಥೆ ಇದೆ. ಜೊತೆಗೆ ಇಂದಿನ ಕಾಲಘಟ್ಟದ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಕೂಡ ಈ ಚಿತ್ರದಲ್ಲಿ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ನ.25ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕಲ್ಯಾಣಿ ಪ್ರಿಯದರ್ಶನ್​, ಎಸ್​.ಜೆ. ಸೂರ್ಯ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ:

ಮದುವೆಗೂ ಮುನ್ನ ಬುರ್ಕಾ ಧರಿಸುತ್ತಿದ್ದ ದೀಪಿಕಾ; ಯಾರಿಗೂ ತಿಳಿದಿರದ ರಹಸ್ಯ ಈಗ ಬಯಲಾಯ್ತು

ಬಹುನಿರೀಕ್ಷಿತ 3 ಕನ್ನಡ ಸಿನಿಮಾಗಳು ರಿಲೀಸ್​; ಈ ಚಿತ್ರಗಳ ವಿಶೇಷತೆ ಏನು?

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ