Simbu Health Update: ಈಗ ಹೇಗಿದೆ ಸಿಂಬು ಆರೋಗ್ಯ? ಹೆಲ್ತ್​​ ಅಪ್​ಡೇಟ್​ ನೀಡಿದ ನಟ

ಸಿಂಬು ಅವರಿಗೆ ಡಿಸೆಂಬರ್​ 11ರಂದು ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊವಿಡ್​ ಕಾಣಿಸಿಕೊಂಡಿರಬಹುದು ಎಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವರದಿ ನೆಗೆಟಿವ್​ ಬಂದಿತ್ತು.

Simbu Health Update: ಈಗ ಹೇಗಿದೆ ಸಿಂಬು ಆರೋಗ್ಯ? ಹೆಲ್ತ್​​ ಅಪ್​ಡೇಟ್​ ನೀಡಿದ ನಟ
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 13, 2021 | 7:38 PM

ತಮಿಳಿನ ಖ್ಯಾತ ನಟ ಸಿಂಬು ಅವರು ಡಿಸೆಂಬರ್ 11ರಂದು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈರಲ್​ ಇನ್​ಫೆಕ್ಷನ್​ ಆಗಿದೆ ಎಂದು ವೈದ್ಯರು ತಿಳಿಸಿದ್ದರು. ಅವರ ಆರೋಗ್ಯದ ಬಗ್ಗೆ ಈಗ ಹೊಸ ಅಪ್​ಡೇಟ್​ ಸಿಕ್ಕಿದೆ. ಈ ಬಗ್ಗೆ ಖುದ್ದು ಸಿಂಬು ಅವರೇ ಮಾಹಿತಿ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಮನೆಗೆ ಮರಳಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಂಬು ಅವರಿಗೆ ಡಿಸೆಂಬರ್​ 11ರಂದು ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊವಿಡ್​ ಕಾಣಿಸಿಕೊಂಡಿರಬಹುದು ಎಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವರದಿ ನೆಗೆಟಿವ್​ ಬಂದಿತ್ತು. ಆ ಬಳಿಕ ಅವರಿಗೆ ವೈರಲ್​ ಇನ್​ಫೆಕ್ಷನ್​ ಆಗಿರುವ ವಿಚಾರ ಬೆಳಕಿಗೆ ಬಂದಿತ್ತು. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದರು. ಈ ಪ್ರಾರ್ಥನೆ ಈಗ ಫಲಿಸಿದೆ. ಸಿಂಬು ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಮನೆಗೆ ಮರಳಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ನಿಮ್ಮೆಲ್ಲರ ಆಶೀರ್ವಾದಕ್ಕೆ ಧನ್ಯವಾದಗಳು. ನಾನು ಮನೆಗೆ ಮರಳಿದ್ದೇನೆ ಮತ್ತು ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ನಂತರದಲ್ಲಿ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ಕಣ್ಣೀರು ಹಾಕಿದ್ದ ಸಿಂಬು..

ಇತ್ತೀಚೆಗೆ ‘ಮಾನಾಡು’ ಸಿನಿಮಾ ರಿಲೀಸ್​ ಆಗಿತ್ತು. ಇದಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾ ರಿಲೀಸ್​ ಆಗುವುದಕ್ಕೂ ಮೊದಲೇ ಅವರು ಕಣ್ಣೀರು ಹಾಕಿದ್ದರು. ವೇದಿಕೆಯಲ್ಲಿ ಮಾತು ಆರಂಭಿಸುವಾಗಲೇ ಸಿಂಬು ಎಮೋಷನಲ್​ ಆಗಿದ್ದರು. ‘ನಾನು ತುಂಬ ಸಮಸ್ಯೆ ಎದುರಿಸಿದ್ದೇನೆ. ಅವರು ತೊಂದರೆ ಕೊಡುತ್ತಲೇ ಇದ್ದಾರೆ. ಅವೆಲ್ಲವನ್ನೂ ನಾನು ಪರಿಹರಿಸಿಕೊಳ್ಳುತ್ತೇನೆ. ನೀವು ನನ್ನ ಕಾಳಜಿ ವಹಿಸಿ’ ಎಂದು ಅಭಿಮಾನಿಗಳಲ್ಲಿ ಸಿಂಬು ಮನವಿ ಮಾಡಿಕೊಂಡಿದ್ದರು.

ಸಿಂಬು ನಟಿಸಿರುವ ‘ಮಾನಾಡು’ ಚಿತ್ರದಲ್ಲಿ ಟೈಮ್ ಟ್ರಾವೆಲಿಂಗ್​ ಕಥೆ ಇದೆ. ಜೊತೆಗೆ ಇಂದಿನ ಕಾಲಘಟ್ಟದ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಕೂಡ ಈ ಚಿತ್ರದಲ್ಲಿ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕಲ್ಯಾಣಿ ಪ್ರಿಯದರ್ಶನ್​, ಎಸ್​.ಜೆ. ಸೂರ್ಯ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: Trisha Krishnan Birthday: 38ನೇ ವಸಂತಕ್ಕೆ ಕಾಲಿಟ್ಟ ತ್ರಿಶಾ; ದಕ್ಷಿಣದ ಸ್ಟಾರ್​ ನಟಿಯ 5 ದಿ ಬೆಸ್ಟ್​ ಪಾತ್ರಗಳು ಇಲ್ಲಿವೆ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ