AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸಮಿತಿಯಲ್ಲಿ ಭಾರತದ ಇಬ್ಬರಿಗೆ ಸ್ಥಾನ; ಸೂರ್ಯ, ಕಾಜೋಲ್​ಗೆ ಸಿಕ್ತು ವಿಶೇಷ ಗೌರವ

ಸೂರ್ಯ ನಟನೆಯ ‘ಸೂರರೈ ಪೊಟ್ರು’ ಹಾಗೂ ‘ಜೈ ಭೀಮ್’ ಚಿತ್ರಗಳು ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದವು. ಈ ಸಿನಿಮಾಗಳಿಂದ ಅವರು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡರು. ಈ ಹಿನ್ನೆಲೆಯಲ್ಲಿ ಆಸ್ಕರ್ ಸಮಿತಿಗೆ ಅವರನ್ನು ಆಮಂತ್ರಿಸಲಾಗಿದೆ. ಆ

ಆಸ್ಕರ್ ಸಮಿತಿಯಲ್ಲಿ ಭಾರತದ ಇಬ್ಬರಿಗೆ ಸ್ಥಾನ; ಸೂರ್ಯ, ಕಾಜೋಲ್​ಗೆ ಸಿಕ್ತು ವಿಶೇಷ ಗೌರವ
TV9 Web
| Edited By: |

Updated on:Jun 29, 2022 | 6:08 PM

Share

ತಮಿಳು ನಟ ಸೂರ್ಯ (Suriya) ಹಾಗೂ ಬಾಲಿವುಡ್ ನಟಿ ಕಾಜೋಲ್​​ಗೆ (Kajol) ವಿಶೇಷ ಗೌರವ ದೊರೆತಿದೆ. ಆಸ್ಕರ್ ಸಮಿತಿಯಲ್ಲಿ (Oscars Committee ) ಇವರಿಬ್ಬರಿಗೆ ಸ್ಥಾನ ಸಿಕ್ಕಿದ್ದು, ಫ್ಯಾನ್ಸ್ ಖುಷಿಪಟ್ಟಿದ್ದಾರೆ. ವಿಶ್ವಾದ್ಯಂತ 397 ಸಿನಿಮಾ ಮಂದಿಗೆ ಆಮಂತ್ರಣ ನೀಡಲಾಗಿದ್ದು, ಆ ಪಟ್ಟಿಯಲ್ಲಿ ಸೂರ್ಯ ಹಾಗೂ ಕಾಜೋಲ್ ಕೂಡ ಇದ್ದಾರೆ ಅನ್ನೋದು ಹೆಮ್ಮೆಯ ವಿಚಾರ. ‘ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆ್ಯಂಡ್ ಸೈನ್ಸ್’ ಸೋಶಿಯಲ್ ಮೀಡಿಯಾದಲ್ಲಿ 397 ಜನರ ಹೆಸರನ್ನು ಬಿಡುಗಡೆ ಮಾಡಿದೆ.

ಸೂರ್ಯ ನಟನೆಯ ‘ಸೂರರೈ ಪೊಟ್ರು’ ಹಾಗೂ ‘ಜೈ ಭೀಮ್’ ಚಿತ್ರಗಳು ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದವು. ಈ ಸಿನಿಮಾಗಳಿಂದ ಅವರು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡರು. ಈ ಹಿನ್ನೆಲೆಯಲ್ಲಿ ಆಸ್ಕರ್ ಸಮಿತಿಗೆ ಅವರನ್ನು ಆಮಂತ್ರಿಸಲಾಗಿದೆ. ಆಸ್ಕರ್ ಸಮಿತಿಯಲ್ಲಿ ಸ್ಥಾನ ಪಡೆಯುತ್ತಿರುವ ಮೊದಲ ದಕ್ಷಿಣ ಭಾರತದ ನಟ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

ಇದನ್ನೂ ಓದಿ
Image
Sai Pallavi: ಸಾಯಿ ಪಲ್ಲವಿಗೆ ಬಂತು ಮತ್ತಷ್ಟು ಬಲ; ಕನ್ನಡದಲ್ಲೂ ಬರುವ ಹೊಸ ಚಿತ್ರಕ್ಕೆ ಕೈ ಜೋಡಿಸಿದ ಸೂರ್ಯ-ಜ್ಯೋತಿಕಾ
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
Suriya in Vikram: ಹೊಸ ಟ್ವಿಸ್ಟ್​​ ನೀಡಿದ ‘ವಿಕ್ರಮ್’ ಚಿತ್ರತಂಡ; ಕಮಲ್, ವಿಜಯ್ ಸೇತುಪತಿ​, ಫಹಾದ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಸ್ಟಾರ್ ನಟ 
Image
Akshay Kumar: ಅಭಿಮಾನಿಗಳಲ್ಲಿ ಸಿನಿಮಾ ಟೈಟಲ್ ಸೂಚಿಸಿ ಎಂದ ಅಕ್ಷಯ್ ಕುಮಾರ್; ಯಾವ ಚಿತ್ರಕ್ಕೆ?

ಟ್ವಿಟರ್ ಖಾತೆಯಲ್ಲಿ ಅಕಾಡೆಮಿಯವರು ಈ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. 397ರಲ್ಲಿ 71 ಸದಸ್ಯರು ಆಸ್ಕರ್ ನಾಮಿನಿಗಳಾಗಿದ್ದು, 15 ಮಂದಿ ವಿಜೇತರು ಇದ್ದಾರೆ. ಒಟ್ಟೂ ಸಂಖ್ಯೆಯಲ್ಲಿ ಶೇ.37 ಮಹಿಳೆಯರಿದ್ದಾರೆ.  ಇದರ ಜತೆಗೆ ಬಾಲಿವುಡ್ ನಟಿ, ಅಜಯ್ ದೇವಗನ್ ಪತ್ನಿ ಕಾಜೋಲ್​, ನಿರ್ದೇಶಕಿ ರೀಮಾ ಕಗ್ತಿ ಕೂಡ ಆಸ್ಕರ್ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಸೂರ್ಯ ಅವರು ಶೀಘ್ರವೇ ನಿರ್ಮಾಪಕನಾಗಿ ಬಾಲಿವುಡ್​ಗೆ ಕಾಲಿಡಲಿದ್ದಾರೆ. 2ಡಿ ಎಂಟರ್​ಟೇನ್​ಮೆಂಟ್​ ಮೂಲಕ ಅವರು ‘ಸೂರರೈ ಪೊಟ್ರು’ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡುತ್ತಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ಭೂಮಿ ಪಡ್ನೇಕರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೂರ್ಯ ಅವರು ಹಿಂದಿ ರಿಮೇಕ್​ನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೊವಿಡ್ ಇದ್ದ ಕಾರಣ ತಮಿಳಿನ ‘ಸೂರರೈ ಪೊಟ್ರು’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿತ್ತು.

‘ಸೂರರೈ ಪೊಟ್ರು’ ಸಿನಿಮಾ ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಅವರ ಜೀವನ ಕಥೆಯನ್ನು ಆಧರಿಸಿದೆ. ಗೋಪಿನಾಥ್ ಅವರು ಏರ್​ ಡೆಕ್ಕನ್ ಸಂಸ್ಥೆಯನ್ನು ಆರಂಭಿಸಿದ್ದರು. ಸಾಮಾನ್ಯರಿಗೂ ವಿಮಾನಯಾನ ಕಡಿಮೆ ದರದಲ್ಲಿ ಆಗಬೇಕು ಎಂಬುದು ಅವರ ಕನಸಾಗಿತ್ತು.

ಇದನ್ನೂ ಓದಿ: ಕನ್ನಡಿಗನ ಕಥೆಯಲ್ಲಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​? ಅಕ್ಕಿ ಪಾಲಿಗೆ ಮತ್ತೊಂದು ಬಯೋಪಿಕ್

Akshay Kumar: ಅಭಿಮಾನಿಗಳಲ್ಲಿ ಸಿನಿಮಾ ಟೈಟಲ್ ಸೂಚಿಸಿ ಎಂದ ಅಕ್ಷಯ್ ಕುಮಾರ್; ಯಾವ ಚಿತ್ರಕ್ಕೆ?

Published On - 4:37 pm, Wed, 29 June 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ