AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈ ಭೀಮ್​… ಸೂರ್ಯ ನಟನೆಯ ಹೊಸ ಚಿತ್ರದ ಕಥೆ ಬಗ್ಗೆ ಸಿಕ್ತು ಮಹತ್ವದ ಸುಳಿವು; ಪಾತ್ರ ರಿವೀಲ್

‘ಜೈ ಭೀಮ್​’ ಸಿನಿಮಾದ ಕಥೆ ಏನಿರಬಹುದು ಎಂದು ಅಭಿಮಾನಿಗಳೆಲ್ಲ ತಲೆಗೆ ಹುಳ ಬಿಟ್ಟುಕೊಂಡಿದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಚಿತ್ರಕ್ಕೆ ಜ್ಞಾನವೇಲ್​ ನಿರ್ದೇಶನ ಮಾಡಲಿದ್ದಾರೆ.

ಜೈ ಭೀಮ್​... ಸೂರ್ಯ ನಟನೆಯ ಹೊಸ ಚಿತ್ರದ ಕಥೆ ಬಗ್ಗೆ ಸಿಕ್ತು ಮಹತ್ವದ ಸುಳಿವು; ಪಾತ್ರ ರಿವೀಲ್
‘ಜೈ ಭೀಮ್​’ ಚಿತ್ರದಲ್ಲಿ ನಟ ಸೂರ್ಯ
TV9 Web
| Edited By: |

Updated on: Aug 02, 2021 | 4:50 PM

Share

ಕಾಲಿವುಡ್​ನ ಖ್ಯಾತ ನಟ ಸೂರ್ಯ (Suriya) ಅಭಿನಯಿಸಲಿರುವ ಹೊಸ ಸಿನಿಮಾಗೆ ‘ಜೈ ಭೀಮ್​’ (Jai Bheem) ಎಂದು ಶೀರ್ಷಿಕೆ ಇಟ್ಟಿರುವ ವಿಚಾರ ಇತ್ತೀಚೆಗಷ್ಟೇ ಬಹಿರಂಗ ಆಗಿತ್ತು. ಇಂಥ ಪವರ್​ಫುಲ್​ ಶೀರ್ಷಿಕೆಯ ಜೊತೆಗೆ ಕೌತುಕ ಮೂಡಿಸುವಂತಹ ಫಸ್ಟ್​ಲುಕ್​ ಕೂಡ ಬಹಿರಂಗ ಆಗಿತ್ತು. ಕಪ್ಪು ಕೋಟು ಧರಿಸಿ ಲಾಯರ್​ ಗೆಟಪ್​ನಲ್ಲಿ ಸೂರ್ಯ ಕಾಣಿಸಿಕೊಂಡಿದ್ದರು. ಹಾಗಾದರೆ ಈ ಸಿನಿಮಾದ ಕಥೆ ಏನಿರಬಹುದು ಎಂದು ಅಭಿಮಾನಿಗಳೆಲ್ಲ ತಲೆಗೆ ಹುಳ ಬಿಟ್ಟುಕೊಂಡಿದ್ದರು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಈ ಸಿನಿಮಾ ಕಥೆಯ ಕುರಿತು ಒಂದು ಮಹತ್ವದ ಸುಳಿವು ಸಿಕ್ಕಿದೆ.

ಈ ಸಿನಿಮಾದ ಪೋಸ್ಟರ್​ ನೋಡಿದಾಗಲೇ ಕೆಲವು ಅನುಮಾನ ಮೂಡುವಂತಿತ್ತು. ಪೋಸ್ಟರ್​ನ ಹಿನ್ನೆಲೆಯಲ್ಲಿ ನ್ಯಾಯಾಲಯ ಕಟ್ಟಡ, ಮುನ್ನೆಲೆಯಲ್ಲಿ ಬುಡಕಟ್ಟು ಜನರು ನಿಂತಿರುವುದು ಹೈಲೈಟ್ ಆಗಿತ್ತು. ಅದರಲ್ಲೂ ಜೈ ಭೀಮ್​ ಎಂಬ ಶೀರ್ಷಿಕೆ ಗಮನಿಸಿದರೆ, ಈ ಚಿತ್ರದಲ್ಲಿ ದೀನ ದಲಿತರ ಪರವಾಗಿ ಕಥಾನಾಯಕ ಹೋರಾಡುತ್ತಾನೆ ಎಂಬುದು ಖಚಿತವಾಗುವಂತಿತ್ತು. ಆ ಊಹೆಗೆ ಈಗ ಪುಷ್ಠಿ ಸಿಕ್ಕಿದೆ. ಆ ಬಗ್ಗೆ ಕಾಲಿವುಡ್​ ಅಂಗಳದಲ್ಲಿ ಗುಸುಗುಸು ಕೇಳಿಬರುತ್ತಿದೆ.

ಚಂದ್ರು ಎಂಬ ಹಿರಿಯ ಲಾಯರ್​ ಪಾತ್ರದಲ್ಲಿ ಸೂರ್ಯ ಕಾಣಿಸಿಕೊಳ್ಳಲಿದ್ದಾರಂತೆ. ಬುಡಕಟ್ಟು ಮಹಿಳೆಯೊಬ್ಬರಿಗೆ ಚಂದ್ರು ನ್ಯಾಯ ಕೊಡಿಸಿದ ರೋಚಕ ಕಥೆಯನ್ನು ಈ ಸಿನಿಮಾ ವಿವರಿಸಲಿದೆ. ಅದು 1993ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಸೂರ್ಯ ಅವರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳಿದ್ದಾರೆ. ಮನಸೆಳೆಯುವ ಸಿನಿಮಾಗಳ ಮೂಲಕ ಅವರು ದೇಶಾದ್ಯಂತ ತಮ್ಮ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಕಳೆದ ವರ್ಷ ತೆರೆಕಂಡ ‘ಸೂರರೈ ಪೋಟ್ರು’ ಸಿನಿಮಾ ಮೂಲಕ ಅವರು ಕನ್ನಡದ ಸಿನಿಪ್ರಿಯರಿಗೆ ಹೆಚ್ಚು ಹತ್ತಿರ ಆಗಿದ್ದರು. ಈಗ ನಿರ್ಮಾಣ ಆಗುತ್ತಿರುವ ‘ಜೈ ಭೀಮ್​’ ಚಿತ್ರ ಕೂಡ ಕನ್ನಡಕ್ಕೆ ಡಬ್​ ಆಗಿ ತೆರೆಕಾಣಲಿದೆ. ಹಾಗಾಗಿ ಕನ್ನಡದಲ್ಲೂ ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ಜ್ಞಾನವೇಲ್​ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ:

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?