AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ.

1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು
ಕಾರ್ತಿ - ಸೂರ್ಯ
ಮದನ್​ ಕುಮಾರ್​
|

Updated on: May 13, 2021 | 8:14 AM

Share

ಮಹಾಮಾರಿ ಕೊರೊನಾ ವೈರಸ್ ಕಾಟಕ್ಕೆ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಗದೇ, ಆಕ್ಸಿಜನ್​ ಕೊರತೆಯಿಂದ ಕೊವಿಡ್​ ಸೋಂಕಿತರು ಪ್ರಾಣ ಬಿಡುವಂತಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಅನೇಕರು ಸಹಾಯ ಮಾಡುತ್ತಿದ್ದಾರೆ. ಎನ್​ಜಿಓಗಳು, ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಕಾಲಿವುಡ್​ ನಟರಾದ ಸೂರ್ಯ ಮತ್ತು ಕಾರ್ತಿ ಕೂಡ ಈಗ ದೊಡ್ಡ ಮೊತ್ತದ ದೇಣಿಗೆ ನೀಡಿದ್ದಾರೆ. ಒಂದು ಕೋಟಿ ರೂ. ನೀಡುವ ಮೂಲಕ ಅವರು ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ. ಕೊವಿಡ್​ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಅವರು ದೇಣಿಗೆ ನೀಡಿದ್ದಾರೆ. ಈ ವೇಳೆ 2ಡಿ ಎಂಟರ್​ಟೇನ್​ಮೆಂಟ್​ನ ರಾಜಶೇಖರ್​ ಪಾಂಡಿಯನ್​ ಕೂಡ ಜೊತೆಯಿದ್ದರು.

ಇಡೀ ದೇಶಕವೇ ಕೊರೊನಾದಿಂದ ಕಷ್ಟ ಪಡುತ್ತಿರುವ ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆ ಬಂದು ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅಲ್ಲದೆ, ಜನರಿಂದ ಹತ್ತಾರು ಕೋಟಿ ರೂ. ಸಂಗ್ರಹ ಆಗುವಂತೆ ಮಾಡಿದ್ದಾರೆ. ಅಕ್ಷಯ್ ಕುಮಾರ್​, ಅಮಿತಾಭ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ನಿಕ್​ ಜೋನಸ್​ ಮುಂತಾದ ಸ್ಟಾರ್​ಗಳು ಕೂಡ ಜನರ ಸಹಾಯಕ್ಕೆ ಧಾವಿಸಿದ್ದಾರೆ.

ಇನ್ನು, ನಟ ಸೋನು ಸೂದ್​ ಮಾಡುತ್ತಿರುವ ಕಾರ್ಯವಂತೂ ವಿಶ್ವಾದ್ಯಂತ ಸುದ್ದಿ ಆಗುತ್ತಿದೆ. ವಿದೇಶದಿಂದ ಆಕ್ಸಿಜನ್​ ಪ್ಲಾಂಟ್​ಗಳನ್ನು ತರಿಸಿ, ಜನರಿಗೆ ಆಕ್ಸಿಜನ್​ ನೀಡುವಷ್ಟರ ಮಟ್ಟಿಗೆ ಅವರ ಸಮಾಜಸೇವೆ ನಡೆಯುತ್ತಿದೆ. ಕನ್ನಡದಲ್ಲಿಯೂ ಅನೇಕ ಸ್ಟಾರ್​ಗಳ ದೇಣಿಗೆ ನೀಡುತ್ತಿದ್ದಾರೆ. ಚಿತ್ರರಂಗದ ಕಾರ್ಮಿಕರಿಗೆ, ಬಡ ಕಲಾವಿದರಿಗೆ ನೆರವಾಗಲು ಉಪೇಂದ್ರ ಮುಂದೆ ಬಂದಿದ್ದಾರೆ. ಅವರ ಕಾರ್ಯಕ್ಕೆ ಅನೇಕರು ಕೈ ಜೋಡಿಸಿದ್ದಾರೆ. ನಟಿ ಮಾನ್ಯಾ, ಸಾಧುಕೋಕಿಲ, ಬಿ, ಸರೋಜಾದೇವಿ, ಶೋಭರಾಜ್​, ಪವನ್​ ಒಡೆಯರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾಗುವಷ್ಟು ದೇಣಿಗೆ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ ಜನಸೇವೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್