AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ.

1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು
ಕಾರ್ತಿ - ಸೂರ್ಯ
ಮದನ್​ ಕುಮಾರ್​
|

Updated on: May 13, 2021 | 8:14 AM

Share

ಮಹಾಮಾರಿ ಕೊರೊನಾ ವೈರಸ್ ಕಾಟಕ್ಕೆ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಗದೇ, ಆಕ್ಸಿಜನ್​ ಕೊರತೆಯಿಂದ ಕೊವಿಡ್​ ಸೋಂಕಿತರು ಪ್ರಾಣ ಬಿಡುವಂತಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಅನೇಕರು ಸಹಾಯ ಮಾಡುತ್ತಿದ್ದಾರೆ. ಎನ್​ಜಿಓಗಳು, ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಕಾಲಿವುಡ್​ ನಟರಾದ ಸೂರ್ಯ ಮತ್ತು ಕಾರ್ತಿ ಕೂಡ ಈಗ ದೊಡ್ಡ ಮೊತ್ತದ ದೇಣಿಗೆ ನೀಡಿದ್ದಾರೆ. ಒಂದು ಕೋಟಿ ರೂ. ನೀಡುವ ಮೂಲಕ ಅವರು ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ. ಕೊವಿಡ್​ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಅವರು ದೇಣಿಗೆ ನೀಡಿದ್ದಾರೆ. ಈ ವೇಳೆ 2ಡಿ ಎಂಟರ್​ಟೇನ್​ಮೆಂಟ್​ನ ರಾಜಶೇಖರ್​ ಪಾಂಡಿಯನ್​ ಕೂಡ ಜೊತೆಯಿದ್ದರು.

ಇಡೀ ದೇಶಕವೇ ಕೊರೊನಾದಿಂದ ಕಷ್ಟ ಪಡುತ್ತಿರುವ ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆ ಬಂದು ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅಲ್ಲದೆ, ಜನರಿಂದ ಹತ್ತಾರು ಕೋಟಿ ರೂ. ಸಂಗ್ರಹ ಆಗುವಂತೆ ಮಾಡಿದ್ದಾರೆ. ಅಕ್ಷಯ್ ಕುಮಾರ್​, ಅಮಿತಾಭ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ನಿಕ್​ ಜೋನಸ್​ ಮುಂತಾದ ಸ್ಟಾರ್​ಗಳು ಕೂಡ ಜನರ ಸಹಾಯಕ್ಕೆ ಧಾವಿಸಿದ್ದಾರೆ.

ಇನ್ನು, ನಟ ಸೋನು ಸೂದ್​ ಮಾಡುತ್ತಿರುವ ಕಾರ್ಯವಂತೂ ವಿಶ್ವಾದ್ಯಂತ ಸುದ್ದಿ ಆಗುತ್ತಿದೆ. ವಿದೇಶದಿಂದ ಆಕ್ಸಿಜನ್​ ಪ್ಲಾಂಟ್​ಗಳನ್ನು ತರಿಸಿ, ಜನರಿಗೆ ಆಕ್ಸಿಜನ್​ ನೀಡುವಷ್ಟರ ಮಟ್ಟಿಗೆ ಅವರ ಸಮಾಜಸೇವೆ ನಡೆಯುತ್ತಿದೆ. ಕನ್ನಡದಲ್ಲಿಯೂ ಅನೇಕ ಸ್ಟಾರ್​ಗಳ ದೇಣಿಗೆ ನೀಡುತ್ತಿದ್ದಾರೆ. ಚಿತ್ರರಂಗದ ಕಾರ್ಮಿಕರಿಗೆ, ಬಡ ಕಲಾವಿದರಿಗೆ ನೆರವಾಗಲು ಉಪೇಂದ್ರ ಮುಂದೆ ಬಂದಿದ್ದಾರೆ. ಅವರ ಕಾರ್ಯಕ್ಕೆ ಅನೇಕರು ಕೈ ಜೋಡಿಸಿದ್ದಾರೆ. ನಟಿ ಮಾನ್ಯಾ, ಸಾಧುಕೋಕಿಲ, ಬಿ, ಸರೋಜಾದೇವಿ, ಶೋಭರಾಜ್​, ಪವನ್​ ಒಡೆಯರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾಗುವಷ್ಟು ದೇಣಿಗೆ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ ಜನಸೇವೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ