1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ.

1 ಕೋಟಿ ರೂ. ದೇಣಿಗೆ ನೀಡಿದ ಸೂರ್ಯ-ಕಾರ್ತಿ; ಕೊವಿಡ್​ ಸಂಕಷ್ಟದಲ್ಲಿ ನೆರವಾದ ಸ್ಟಾರ್​ ಕಲಾವಿದರು
ಕಾರ್ತಿ - ಸೂರ್ಯ

Updated on: May 13, 2021 | 8:14 AM

ಮಹಾಮಾರಿ ಕೊರೊನಾ ವೈರಸ್ ಕಾಟಕ್ಕೆ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಗದೇ, ಆಕ್ಸಿಜನ್​ ಕೊರತೆಯಿಂದ ಕೊವಿಡ್​ ಸೋಂಕಿತರು ಪ್ರಾಣ ಬಿಡುವಂತಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಅನೇಕರು ಸಹಾಯ ಮಾಡುತ್ತಿದ್ದಾರೆ. ಎನ್​ಜಿಓಗಳು, ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಕಾಲಿವುಡ್​ ನಟರಾದ ಸೂರ್ಯ ಮತ್ತು ಕಾರ್ತಿ ಕೂಡ ಈಗ ದೊಡ್ಡ ಮೊತ್ತದ ದೇಣಿಗೆ ನೀಡಿದ್ದಾರೆ. ಒಂದು ಕೋಟಿ ರೂ. ನೀಡುವ ಮೂಲಕ ಅವರು ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ಅವರನ್ನು ಸೂರ್ಯ ಮತ್ತು ಕಾರ್ತಿ ಬುಧವಾರ (ಮೇ 12) ಭೇಟಿ ಆಗಿದ್ದಾರೆ. ಈ ವೇಳೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅವರು ಈ ಹಣವನ್ನು ಕೊಟ್ಟಿದ್ದಾರೆ. ಕೊವಿಡ್​ನಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಅವರು ದೇಣಿಗೆ ನೀಡಿದ್ದಾರೆ. ಈ ವೇಳೆ 2ಡಿ ಎಂಟರ್​ಟೇನ್​ಮೆಂಟ್​ನ ರಾಜಶೇಖರ್​ ಪಾಂಡಿಯನ್​ ಕೂಡ ಜೊತೆಯಿದ್ದರು.

ಇಡೀ ದೇಶಕವೇ ಕೊರೊನಾದಿಂದ ಕಷ್ಟ ಪಡುತ್ತಿರುವ ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆ ಬಂದು ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅಲ್ಲದೆ, ಜನರಿಂದ ಹತ್ತಾರು ಕೋಟಿ ರೂ. ಸಂಗ್ರಹ ಆಗುವಂತೆ ಮಾಡಿದ್ದಾರೆ. ಅಕ್ಷಯ್ ಕುಮಾರ್​, ಅಮಿತಾಭ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ನಿಕ್​ ಜೋನಸ್​ ಮುಂತಾದ ಸ್ಟಾರ್​ಗಳು ಕೂಡ ಜನರ ಸಹಾಯಕ್ಕೆ ಧಾವಿಸಿದ್ದಾರೆ.

ಇನ್ನು, ನಟ ಸೋನು ಸೂದ್​ ಮಾಡುತ್ತಿರುವ ಕಾರ್ಯವಂತೂ ವಿಶ್ವಾದ್ಯಂತ ಸುದ್ದಿ ಆಗುತ್ತಿದೆ. ವಿದೇಶದಿಂದ ಆಕ್ಸಿಜನ್​ ಪ್ಲಾಂಟ್​ಗಳನ್ನು ತರಿಸಿ, ಜನರಿಗೆ ಆಕ್ಸಿಜನ್​ ನೀಡುವಷ್ಟರ ಮಟ್ಟಿಗೆ ಅವರ ಸಮಾಜಸೇವೆ ನಡೆಯುತ್ತಿದೆ. ಕನ್ನಡದಲ್ಲಿಯೂ ಅನೇಕ ಸ್ಟಾರ್​ಗಳ ದೇಣಿಗೆ ನೀಡುತ್ತಿದ್ದಾರೆ. ಚಿತ್ರರಂಗದ ಕಾರ್ಮಿಕರಿಗೆ, ಬಡ ಕಲಾವಿದರಿಗೆ ನೆರವಾಗಲು ಉಪೇಂದ್ರ ಮುಂದೆ ಬಂದಿದ್ದಾರೆ. ಅವರ ಕಾರ್ಯಕ್ಕೆ ಅನೇಕರು ಕೈ ಜೋಡಿಸಿದ್ದಾರೆ. ನಟಿ ಮಾನ್ಯಾ, ಸಾಧುಕೋಕಿಲ, ಬಿ, ಸರೋಜಾದೇವಿ, ಶೋಭರಾಜ್​, ಪವನ್​ ಒಡೆಯರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾಗುವಷ್ಟು ದೇಣಿಗೆ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ತಮ್ಮದೇ ಹೆಲ್ಪ್​ಲೈನ್​ ಆರಂಭಿಸಿ ಜನಸೇವೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us