AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಲಕ್ಷ ಹಣ ನೀಡಿ ಮೋಸ ಹೋದ ಖ್ಯಾತ ನಟಿ; ಕೂಡಿಟ್ಟ ಹಣವೆಲ್ಲವೂ ವಂಚಕರ ಪಾಲು

ಕನ್ನಡದ ‘ರವಿ ಶಾಸ್ತ್ರಿ’, ‘ಕುರುಕ್ಷೇತ್ರ’ ಸಿನಿಮಾಗಳಲ್ಲಿ ನಟಿಸಿದ್ದ ಸ್ನೇಹಾ ಈ ರೀತಿ ಮೋಸಕ್ಕೆ ಒಳಗಾಗಿದ್ದಾರೆ. ಸಿನಿಮಾಗಳಲ್ಲಿ ಸಂಭಾವನೆ ರೂಪದಲ್ಲಿ ಬಂದ ಹಣವನ್ನು ಅವರು ಹೂಡಿಕೆ ಮಾಡಿದ್ದರು.

ಲಕ್ಷಲಕ್ಷ ಹಣ ನೀಡಿ ಮೋಸ ಹೋದ ಖ್ಯಾತ ನಟಿ; ಕೂಡಿಟ್ಟ ಹಣವೆಲ್ಲವೂ ವಂಚಕರ ಪಾಲು
ಸ್ನೇಹಾ
TV9 Web
| Edited By: |

Updated on: Nov 18, 2021 | 7:05 PM

Share

ನಟ-ನಟಿಯರು ಪ್ರತಿ ಸಿನಿಮಾಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಳ್ಳುತ್ತಾರೆ. ಇದರ ಜತೆಗೆ ಕೆಲ ಕಾರ್ಯಕ್ರಮಕ್ಕೆ ಅತಿಥಿಯಾಗಿ ತೆರಳಿ ಹಣ ಗಳಿಕೆ ಮಾಡಿಕೊಳ್ಳುತ್ತಾರೆ. ಹೀಗೆ ಗಳಿಸಿದ ಹಣವನ್ನು ಹೂಡಿಕೆ ಮಾಡೋಕೆ ಇಷ್ಟಪಡುತ್ತಾರೆ. ಇದೇ ರೀತಿ ಹೂಡಿಕೆ ಮಾಡೋಕೆ ಹೋಗಿ ನಟಿಯೊಬ್ಬರು ಮೋಸ ಹೋಗಿದ್ದಾರೆ. ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅವರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲು ಮಾಡಿದ್ದಾರೆ. ಹಾಗಾದರೆ ಯಾರು ಆ ನಟಿ? ಬಹುಭಾಷೆ ನಟಿ ಸ್ನೇಹ.

ಕನ್ನಡದ ‘ರವಿ ಶಾಸ್ತ್ರಿ’, ‘ಕುರುಕ್ಷೇತ್ರ’ ಸಿನಿಮಾಗಳಲ್ಲಿ ನಟಿಸಿದ್ದ ಸ್ನೇಹಾ ಈ ರೀತಿ ಮೋಸಕ್ಕೆ ಒಳಗಾಗಿದ್ದಾರೆ. ಸಿನಿಮಾಗಳಲ್ಲಿ ಸಂಭಾವನೆ ರೂಪದಲ್ಲಿ ಬಂದ ಹಣವನ್ನು ಅವರು ಹೂಡಿಕೆ ಮಾಡಿದ್ದರು. ಹಣ ಮರಳಿ ಬರುತ್ತದೆ ಎನ್ನುವ ನಂಬಿಕೆ ಅವರದ್ದಾಗಿತ್ತು. ಈಗ ಅಸಲು ಹಣವೂ ಇಲ್ಲ, ಲಾಭವೂ ಇಲ್ಲ ಎಂಬಂತಾಗಿದೆ. ಈ ಬಗ್ಗೆ ಅವರು ಚೆನ್ನೈ ಪೊಲೀಸ್​ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸ್ನೇಹಾಗೆ ಇಬ್ಬರು ಉದ್ಯಮಿಗಳ ಪರಿಚಯವಾಗಿತ್ತು. ಎಕ್ಸ್​​ಪೋರ್ಟ್​ ಉದ್ಯಮವನ್ನು ಇವರು ಹೊಂದಿದ್ದರು. ಇವರನ್ನು ನಂಬಿ ಸ್ನೇಹಾ ಲಕ್ಷಾಂತರ ರೂಪಾಯಿ ನೀಡಿದ್ದರು. ಸಮಯಕ್ಕೆ ಸರಿಯಾಗಿ ಲಾಭದ ಮೊತ್ತವನ್ನು ನೀಡುವುದಾಗಿ ಉದ್ಯಮಿಗಳು ನಂಬಿಸಿದ್ದರು. ಆದರೆ, ಈಗ ಈ ಪ್ರಾಮಿಸ್​ ಸುಳ್ಳಾಗಿದೆ. ನಟಿಗೆ ಮೋಸ ಮಾಡಲಾಗಿದೆ. ಈ ಬಗ್ಗೆ ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೆ, ಉದ್ಯಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಸ್ನೇಹಾ ಅವರು ಹಣ ಹಿಂದಿರುಗಿಸುವಂತೆ ಕೇಳಿದ್ದಾರೆ. ಹಣ ಕೊಡುವುದಿಲ್ಲ ಎಂದು ಹೇಳಿದ್ದು ಮಾತ್ರವಲ್ಲದೆ ಕೊಲೆ ಬೆದರಿಕೆಯನ್ನು ಕೂಡ ಹಾಕಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಮಿಳಿನ ‘ಶಾಟ್​ ಬೂತ್​ 3’ ಸಿನಿಮಾದಲ್ಲಿ ಸ್ನೇಹಾ ನಟಿಸುತ್ತಿದ್ದಾರೆ. ಅವರು ಮತ್ತಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಇತ್ತೀಚಿನ ದಿನಗಳಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಚಿತ್ರದ ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಸಮಂತಾ ಕೇಳಿದ ಸಂಬಳ ಎಷ್ಟು ಕೋಟಿ?

Samantha: ಮದುವೆ ಹೆಣ್ಣಿಗೆ ಮೇಕಪ್​ ಮಾಡ್ತಾರೆ ಸಮಂತಾ; ಬುಕಿಂಗ್​ ಓಪನ್​ ಆಗಿದೆ ಎಂದ ನಟಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ