AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

550ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಪಾಂಡು ಅವರಿಗೆ ಸಲ್ಲುತ್ತದೆ. ಅವರ ನಿಧನದಿಂದ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಸೋಶಿಯಲ್​ ಮೀಡಿಯಾ ಮೂಲಕ ಅನೇಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ
ಹಾಸ್ಯ ನಟ ಪಾಂಡು
ಮದನ್​ ಕುಮಾರ್​
|

Updated on: May 06, 2021 | 12:22 PM

Share

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿ ಆಗುತ್ತಿದ್ದಾರೆ. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಪಾಂಡು ಅವರು ಇಂದು (ಮೇ 6) ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಚೆನ್ನೈನಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಬೆಳಗ್ಗೆ ಮೃತರಾದರು. ಪತ್ನಿ ಮತ್ತು ಮೂವರು ಮಕ್ಕಳನ್ನು ಪಾಂಡು ಅಗಲಿದ್ದಾರೆ.

1981ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪಾಂಡು ಅವರು ಕಾಮಿಡಿ ಪಾತ್ರಗಳ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. 550ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಪಾಂಡು ನಿಧನದಿಂದ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಅವರಿಗೆ ಸೋಶಿಯಲ್​ ಮೀಡಿಯಾ ಮೂಲಕ ಅನೇಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ನಿರ್ದೇಶಕ ಕೆ.ವಿ. ಆನಂದ್​ ಅವರು ಕೊರೊನಾದಿಂದ ನಿಧನರಾದರು. ಅದಕ್ಕೂ ಮುನ್ನ ನಟ ವಿವೇಕ್​ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಕಾಲಿವುಡ್​ಗೆ ಬ್ಯಾಕ್​ ಟು ಬ್ಯಾಕ್​ ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕೊರೊನಾ ಎರಡನೇ ಅಲೆಗೆ ದೇಶದ ಜನರು ತತ್ತರಿಸಿದ್ದಾರೆ. ಕನ್ನಡದಲ್ಲೂ ಅನೇಕ ಸೆಲೆಬ್ರಿಟಿಗಳು ಸಾವಿನ ಮನೆಯ ಹಾದಿ ಹಿಡಿದಿರುವುದು ಬೇಸರದ ಸಂಗತಿ.

ನಟ ಕೋಮಲ್​ ಕುಮಾರ್​ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸಾವು-ಬದುಕಿನ ನಡುವೆ ಹೋರಾಡಿ ಬಂದಿದ್ದಾರೆ. ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್​. ಮಂಜುನಾಥ್​, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​, ಪೋಸ್ಟರ್​ ಡಿಸೈನರ್​ ಮಸ್ತಾನ್​, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮಹಾಮಾರಿ ಕೊವಿಡ್​ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕಾಟ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: 

Renuka Sharma Death: ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ