AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಚ್ಚಿದ ಕೊವಿಡ್​ ಭಯ; ಖ್ಯಾತ ಹಾಸ್ಯನಟ ಆಸ್ಪತ್ರೆಗೆ ದಾಖಲು

ವಡಿವೇಲು ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಲಂಡನ್​ಗೆ ತೆರಳಿದ್ದರು. ಗುರುವಾರ ಅವರು ಚೆನ್ನೈಗೆ ಆಗಮಿಸಿದ್ದರು. ಅವರು ಆಗಮಿಸಿದ ನಂತರದಲ್ಲಿ ಅನಾರೋಗ್ಯ ಕಾಡಿತ್ತು. ಪರೀಕ್ಷೆಗೆ ಒಳಪಡಿಸಿದ ನಂತರದಲ್ಲಿ ಅವರಿಗೆ ಕೊವಿಡ್​ ಇರುವ ವಿಚಾರ ತಿಳಿದು ಬಂದಿತ್ತು.

ಮತ್ತೆ ಹೆಚ್ಚಿದ ಕೊವಿಡ್​ ಭಯ; ಖ್ಯಾತ ಹಾಸ್ಯನಟ ಆಸ್ಪತ್ರೆಗೆ ದಾಖಲು
ವಡಿವೇಲು
TV9 Web
| Edited By: |

Updated on:Dec 25, 2021 | 8:19 PM

Share

ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಕೊರೊನಾದಿಂದಾಗಿ ದೇಶದಲ್ಲಿ ಸಾವು-ನೋವು ಹೆಚ್ಚುವ ಭಯ ಮತ್ತೆ ಆವರಿಸಿದೆ. ಒಮಿಕ್ರಾನ್​ ರೂಪಾಂತರಿ ಪ್ರಕರಣಗಳಂತೂ ನಿತ್ಯವೂ ಹೆಚ್ಚುತ್ತಲೇ ಇದ್ದು ಇದರಿಂದ ಜನರಲ್ಲಿ ಮತ್ತೆ ಆತಂಕ ಮೂಡಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬಂದಿದೆ. ಈ ಮಧ್ಯೆ ಚಿತ್ರರಂಗದಲ್ಲಿರುವ ಅನೇಕರಿಗೆ ಕೊವಿಡ್​ ಕಾಣಿಸಿಕೊಳ್ಳುತ್ತಿದೆ. ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಅವರಿಗೂ ಕೊರೊನಾ ಪಾಸಿಟಿವ್​ ಆಗಿದೆ. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಡಿವೇಲು ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಲಂಡನ್​ಗೆ ತೆರಳಿದ್ದರು. ಗುರುವಾರ ಅವರು ಚೆನ್ನೈಗೆ ಆಗಮಿಸಿದ್ದರು. ಅವರು ಆಗಮಿಸಿದ ನಂತರದಲ್ಲಿ ಅನಾರೋಗ್ಯ ಕಾಡಿತ್ತು. ಪರೀಕ್ಷೆಗೆ ಒಳಪಡಿಸಿದ ನಂತರದಲ್ಲಿ ಅವರಿಗೆ ಕೊವಿಡ್​ ಇರುವ ವಿಚಾರ ತಿಳಿದು ಬಂದಿತ್ತು. ಇದು ಸಾಮಾನ್ಯ ಕೊರೊನಾ ಪ್ರಕರಣ ಆಗಿದ್ದು, ಒಮಿಕ್ರಾನ್​ ಅಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಸದ್ಯ, ವಡಿವೇಲು ಅವರನ್ನು ಆಸ್ಪತ್ರೆಯಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರು ವೇಗವಾಗಿ ಗುಣಮುಖರಾಗುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೊವಿಡ್​ಗೆ ತುತ್ತಾಗಿದ್ದಾರೆ. ಕರೀನಾ ಕಪೂರ್​ ಖಾನ್​, ಅಮೃತಾ ಅರೋರಾ, ನಕುಲ್​ ಮೆಹ್ತಾ, ಶಯಾನಾ ಕಪೂರ್​, ಮಹೀಪ್​ ಕಪೈರ್​ ಮತ್ತು ಸೀಮಾ ಖಾನ್​ ಮೊದಲಾದವರು ಕೊವಿಡ್​ಗೆ ತುತ್ತಾಗಿದ್ದರು. ಇತ್ತೀಚೆಗೆ ಕರೀನಾ ಕೊವಿಡ್​ಗೆ ತುತ್ತಾಗಿದ್ದರು. ಈಗ ಅವರು ಮತ್ತೆ ಪರೀಕ್ಷೆಗೆ ಒಳಪಟ್ಟಿದ್ದು, ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದೆ.

ಕೊವಿಡ್​ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇಂಗ್ಲೆಂಡ್​ನಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಭಾರತದಲ್ಲೂ ದಿನ ಕಳೆದಂತೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಕೈಮೀರಿದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ

ಈ ಏಳು ಸ್ಟಾರ್​ ನಟರ ಬಳಿ ಇದೆ ಪ್ರೈವೇಟ್​ ಜೆಟ್​; ಯಾರ್ಯಾರು? ಇಲ್ಲಿದೆ ಮಾಹಿತಿ

Published On - 6:59 pm, Sat, 25 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ