AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಹಾಸ್ಯ ನಟನ ಮೃತದೇಹ ಪತ್ತೆ! ಅನುಮಾನ ಹುಟ್ಟುಹಾಕಿದ ಸಾವು

ವಿ. ಬಾಬು ಅವರಿಗೆ ಚಿತ್ರರಂಗದಲ್ಲಿ ಸೂಕ್ತ ಅವಕಾಶಗಳು ಇರಲಿಲ್ಲ. ಸರಿಯಾದ ಕೆಲಸವೂ ಸಿಗದ ಕಾರಣ ಆಟೋರಿಕ್ಷಾಗಳಲ್ಲಿ ಮಲಗುತ್ತಿದ್ದರು. ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

ಆಟೋದಲ್ಲಿ ಹಾಸ್ಯ ನಟನ ಮೃತದೇಹ ಪತ್ತೆ! ಅನುಮಾನ ಹುಟ್ಟುಹಾಕಿದ ಸಾವು
ವಿ. ಬಾಬು
Follow us
ಮದನ್​ ಕುಮಾರ್​
| Updated By: Praveen Sahu

Updated on:Mar 25, 2021 | 1:31 PM

ಕಳೆದ ವರ್ಷ ಲಾಕ್​ಡೌನ್​ನಲ್ಲಿ ಅನೇಕ ಸೆಲೆಬ್ರಿಟಿಗಳು ಅಕಾಲಿಕವಾಗಿ ಕೊನೆಯುಸಿರೆಳೆದಿದ್ದರು. 2021ನೇ ವರ್ಷದಲ್ಲಾದರೂ ಅಂಥ ಘಟನೆಗಳು ನಡೆಯದಿರಲಿ ಎಂಬುದು ಎಲ್ಲರ ಪ್ರಾರ್ಥನೆ ಆಗಿತ್ತು. ಆದರೆ ಕಾಲಿವುಡ್​ಯಿಂದ ಈಗೊಂದು ಕಹಿ ಸುದ್ದಿ ಕೇಳಿಬಂದಿದೆ. ತಮಿಳು ಚಿತ್ರರಂಗದ ಹಾಸ್ಯ ಕಲಾವಿದ ವಿ. ಬಾಬು ಅವರು ಮೃತರಾಗಿದ್ದಾರೆ. ಅವರ ಸಾವು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ!

ಸೂಪರ್​ ಹಿಟ್​ ‘ಕಾದಲ್​’ ಸಿನಿಮಾದಲ್ಲಿ ವಿ. ಬಾಬು ಅವರು ಒಂದು ಚಿಕ್ಕ ಪಾತ್ರ ಮಾಡಿದ್ದರು. ಚೆನ್ನೈನಲ್ಲಿ ಅವರು ನಿಧನರಾಗಿದ್ದು, ಆಟೋರಿಕ್ಷಾದಲ್ಲಿ ಮೃತದೇಹ ಪತ್ತೆ ಆಗಿದೆ. ಮಾ.23ರ ರಾತ್ರಿಯೇ ಅವರು ಕೊನೆಯುರೆಳೆದಿದ್ದಾರೆ ಎಂದು ವರದಿ ಆಗಿದೆ. ಬಾಬು ಸಾವಿಗೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಕೆಲವು ವರ್ಷಗಳ ಹಿಂದೆ ವಿ. ಬಾಬು ತಂದೆ-ತಾಯಿ ನಿಧನರಾಗಿದ್ದರು. ಅದರಿಂದ ಅವರು ತೀವ್ರ ವಿಚಲಿತರಾಗಿದ್ದರು. ಚಿತ್ರರಂಗದಲ್ಲಿ ಸೂಕ್ತ ಅವಕಾಶಗಳು ಇರಲಿಲ್ಲ. ಸರಿಯಾದ ಕೆಲಸವೂ ಸಿಗದ ಕಾರಣ ಆಟೋರಿಕ್ಷಾಗಳಲ್ಲಿ ಮಲಗುತ್ತಿದ್ದರು. ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ತಂದೆ-ತಾಯಿ ನಿಧನದ ನಂತರ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರು ಎಂದೆಲ್ಲ ವರದಿ ಆಗಿತ್ತು.

ಭರತ್​ ಮತ್ತು ಸಂಧ್ಯಾ ನಟಿಸಿದ್ದ 2004ರ ಸೂಪರ್​ ಹಿಟ್​ ಸಿನಿಮಾ ‘ಕಾದಲ್​’ನಲ್ಲಿ ಬಾಬು ಮಾಡಿದ ಚಿಕ್ಕ ಪಾತ್ರ ಗಮನ ಸೆಳೆದಿತ್ತು. ಸಿನಿಮಾ ಹೀರೋ ಆಗಬೇಕು ಎಂಬ ಆಸೆ ಇಟ್ಟುಕೊಂಡು ಆಡಿಷನ್​ಗೆ ಬರುವ ಯುವಕನ ಪಾತ್ರದ ಮೂಲಕ ಅವರು ಸಿಕ್ಕಾಪಟ್ಟೆ ನಗು ಉಕ್ಕಿಸಿದ್ದರು. ಆದರೆ ಈಗ ಅವರು ಅನುಮಾನಾಸ್ಪದವಾಗಿ ನಿಧನರಾಗಿರುವುದು ಇಡೀ ಚಿತ್ರರಂಗಕ್ಕೆ ಶಾಕ್​ ನೀಡಿದೆ.

ಕಾದಲ್​ ಸಿನಿಮಾ ಬಳಿಕ ಬಾಬು ಅವರಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅದರಿಂದ ಅವರು ಆರ್ಥಿಕವಾಗಿ ತೊಂದರೆಗೆ ಸಿಲುಕಿದರು. ಅವರು ದೇವಸ್ಥಾನದಲ್ಲಿ ಕಾಣಿಸಿಕೊಂಡ ವಿಡಿಯೋ ಕೂಡ ಈ ಹಿಂದೆ ವೈರಲ್​ ಆಗಿತ್ತು.

ಇದನ್ನೂ ಓದಿ: ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

Published On - 1:03 pm, Thu, 25 March 21

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ