AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

KV Anand Heart Attack: ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ
ನಿರ್ದೇಶಕ ಕೆ.ವಿ. ಆನಂದ್
ಮದನ್​ ಕುಮಾರ್​
| Edited By: |

Updated on:Apr 30, 2021 | 2:45 PM

Share

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು. ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

ಕೆ.ವಿ. ಆನಂದ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರ​ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೂರ್ಯ ನಟನೆಯ ಅಯನ್​, ಕಾಪ್ಪನ್​, ಮಾಟ್ರಾನ್, ಧನುಶ್​ ನಟನೆಯ ಅನೇಗನ್​, ವಿಜಯ್ ಸೇತುಪತಿ ಅಭಿನಯದ ಕವನ್​ ಮುಂತಾದ ಸಿನಿಮಾಗಳಿಗೆ ಕೆ.ವಿ. ಆನಂದ್​ ನಿರ್ದೇಶನ ಮಾಡಿದ್ದರು. ಮೂಲತಃ ಛಾಯಾಗ್ರಾಹಕರಾಗಿದ್ದ ಅವರು ಮುದಲ್ವನ್​, ಶಿವಾಜಿ: ದ ಬಾಸ್​ ಮುಂತಾದ ಹಿಟ್​ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಕೆ.ವಿ. ಆನಂದ್​ ಅವರು ಮೊದಲು ತಮ್ಮ ವೃತ್ತಿಜೀವನವನ್ನು ಫೋಟೋ ಜರ್ನಲಿಸ್ಟ್​ ಆಗಿ ಆರಂಭಿಸಿದರು. ಸಿನಿಮಾಗಳಿಗೆ ಕ್ಯಾಮರಾಮ್ಯಾನ್​ ಆಗಬೇಕು ಎಂಬ ಆಸೆ ಅವರಲ್ಲಿತ್ತು. ಛಾಯಾಗ್ರಾಹಕ ಪಿಸಿ ಶ್ರೀರಾಮ್​ ಬಳಿ ತಮ್ಮ ಹಂಬಲವನ್ನು ತೋಡಿಕೊಂಡರು. ನಂತರ ಶ್ರೀರಾಮ್​ ಜೊತೆ ಅನೇಕ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದರು.

1994ರಲ್ಲಿ ಪ್ರಿಯದರ್ಶನ್​ ನಿರ್ದೇಶನದ ಮಲಯಾಳಂನ ‘ತೆನ್​ಮಾವಿನ್​ ಕೊಂಬತ್’ ಚಿತ್ರದ ಮೂಲಕ ಕೆ.ವಿ. ಆನಂದ್​ ಸ್ವತಂತ್ರ ಛಾಯಾಗ್ರಾಹಕರಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. 1996ರಲ್ಲಿ ಕಾದಲ್​ ದೇಸಂ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಛಾಯಾಗ್ರಾಹಕನಾಗಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನೇ ಇಟ್ಟುಕೊಂಡು 2005ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದರು.

ಇದನ್ನೂ ಓದಿ: Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Koti Ramu Death : ನಟಿ ಮಾಲಾಶ್ರೀ ಗಂಡ, ನಿರ್ಮಾಪಕ ರಾಮು ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ

Published On - 8:54 am, Fri, 30 April 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ