AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

KV Anand Heart Attack: ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ
ನಿರ್ದೇಶಕ ಕೆ.ವಿ. ಆನಂದ್
ಮದನ್​ ಕುಮಾರ್​
| Edited By: |

Updated on:Apr 30, 2021 | 2:45 PM

Share

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು. ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

ಕೆ.ವಿ. ಆನಂದ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರ​ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೂರ್ಯ ನಟನೆಯ ಅಯನ್​, ಕಾಪ್ಪನ್​, ಮಾಟ್ರಾನ್, ಧನುಶ್​ ನಟನೆಯ ಅನೇಗನ್​, ವಿಜಯ್ ಸೇತುಪತಿ ಅಭಿನಯದ ಕವನ್​ ಮುಂತಾದ ಸಿನಿಮಾಗಳಿಗೆ ಕೆ.ವಿ. ಆನಂದ್​ ನಿರ್ದೇಶನ ಮಾಡಿದ್ದರು. ಮೂಲತಃ ಛಾಯಾಗ್ರಾಹಕರಾಗಿದ್ದ ಅವರು ಮುದಲ್ವನ್​, ಶಿವಾಜಿ: ದ ಬಾಸ್​ ಮುಂತಾದ ಹಿಟ್​ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಕೆ.ವಿ. ಆನಂದ್​ ಅವರು ಮೊದಲು ತಮ್ಮ ವೃತ್ತಿಜೀವನವನ್ನು ಫೋಟೋ ಜರ್ನಲಿಸ್ಟ್​ ಆಗಿ ಆರಂಭಿಸಿದರು. ಸಿನಿಮಾಗಳಿಗೆ ಕ್ಯಾಮರಾಮ್ಯಾನ್​ ಆಗಬೇಕು ಎಂಬ ಆಸೆ ಅವರಲ್ಲಿತ್ತು. ಛಾಯಾಗ್ರಾಹಕ ಪಿಸಿ ಶ್ರೀರಾಮ್​ ಬಳಿ ತಮ್ಮ ಹಂಬಲವನ್ನು ತೋಡಿಕೊಂಡರು. ನಂತರ ಶ್ರೀರಾಮ್​ ಜೊತೆ ಅನೇಕ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದರು.

1994ರಲ್ಲಿ ಪ್ರಿಯದರ್ಶನ್​ ನಿರ್ದೇಶನದ ಮಲಯಾಳಂನ ‘ತೆನ್​ಮಾವಿನ್​ ಕೊಂಬತ್’ ಚಿತ್ರದ ಮೂಲಕ ಕೆ.ವಿ. ಆನಂದ್​ ಸ್ವತಂತ್ರ ಛಾಯಾಗ್ರಾಹಕರಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. 1996ರಲ್ಲಿ ಕಾದಲ್​ ದೇಸಂ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಛಾಯಾಗ್ರಾಹಕನಾಗಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನೇ ಇಟ್ಟುಕೊಂಡು 2005ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದರು.

ಇದನ್ನೂ ಓದಿ: Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Koti Ramu Death : ನಟಿ ಮಾಲಾಶ್ರೀ ಗಂಡ, ನಿರ್ಮಾಪಕ ರಾಮು ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ

Published On - 8:54 am, Fri, 30 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ