AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

KV Anand Heart Attack: ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ
ನಿರ್ದೇಶಕ ಕೆ.ವಿ. ಆನಂದ್
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Apr 30, 2021 | 2:45 PM

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು. ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

ಕೆ.ವಿ. ಆನಂದ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರ​ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೂರ್ಯ ನಟನೆಯ ಅಯನ್​, ಕಾಪ್ಪನ್​, ಮಾಟ್ರಾನ್, ಧನುಶ್​ ನಟನೆಯ ಅನೇಗನ್​, ವಿಜಯ್ ಸೇತುಪತಿ ಅಭಿನಯದ ಕವನ್​ ಮುಂತಾದ ಸಿನಿಮಾಗಳಿಗೆ ಕೆ.ವಿ. ಆನಂದ್​ ನಿರ್ದೇಶನ ಮಾಡಿದ್ದರು. ಮೂಲತಃ ಛಾಯಾಗ್ರಾಹಕರಾಗಿದ್ದ ಅವರು ಮುದಲ್ವನ್​, ಶಿವಾಜಿ: ದ ಬಾಸ್​ ಮುಂತಾದ ಹಿಟ್​ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಕೆ.ವಿ. ಆನಂದ್​ ಅವರು ಮೊದಲು ತಮ್ಮ ವೃತ್ತಿಜೀವನವನ್ನು ಫೋಟೋ ಜರ್ನಲಿಸ್ಟ್​ ಆಗಿ ಆರಂಭಿಸಿದರು. ಸಿನಿಮಾಗಳಿಗೆ ಕ್ಯಾಮರಾಮ್ಯಾನ್​ ಆಗಬೇಕು ಎಂಬ ಆಸೆ ಅವರಲ್ಲಿತ್ತು. ಛಾಯಾಗ್ರಾಹಕ ಪಿಸಿ ಶ್ರೀರಾಮ್​ ಬಳಿ ತಮ್ಮ ಹಂಬಲವನ್ನು ತೋಡಿಕೊಂಡರು. ನಂತರ ಶ್ರೀರಾಮ್​ ಜೊತೆ ಅನೇಕ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದರು.

1994ರಲ್ಲಿ ಪ್ರಿಯದರ್ಶನ್​ ನಿರ್ದೇಶನದ ಮಲಯಾಳಂನ ‘ತೆನ್​ಮಾವಿನ್​ ಕೊಂಬತ್’ ಚಿತ್ರದ ಮೂಲಕ ಕೆ.ವಿ. ಆನಂದ್​ ಸ್ವತಂತ್ರ ಛಾಯಾಗ್ರಾಹಕರಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. 1996ರಲ್ಲಿ ಕಾದಲ್​ ದೇಸಂ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಛಾಯಾಗ್ರಾಹಕನಾಗಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನೇ ಇಟ್ಟುಕೊಂಡು 2005ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದರು.

ಇದನ್ನೂ ಓದಿ: Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Koti Ramu Death : ನಟಿ ಮಾಲಾಶ್ರೀ ಗಂಡ, ನಿರ್ಮಾಪಕ ರಾಮು ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ

Published On - 8:54 am, Fri, 30 April 21

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ