KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

KV Anand Heart Attack: ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ
ನಿರ್ದೇಶಕ ಕೆ.ವಿ. ಆನಂದ್
Edited By:

Updated on: Apr 30, 2021 | 2:45 PM

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು. ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

ಕೆ.ವಿ. ಆನಂದ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರ​ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೂರ್ಯ ನಟನೆಯ ಅಯನ್​, ಕಾಪ್ಪನ್​, ಮಾಟ್ರಾನ್, ಧನುಶ್​ ನಟನೆಯ ಅನೇಗನ್​, ವಿಜಯ್ ಸೇತುಪತಿ ಅಭಿನಯದ ಕವನ್​ ಮುಂತಾದ ಸಿನಿಮಾಗಳಿಗೆ ಕೆ.ವಿ. ಆನಂದ್​ ನಿರ್ದೇಶನ ಮಾಡಿದ್ದರು. ಮೂಲತಃ ಛಾಯಾಗ್ರಾಹಕರಾಗಿದ್ದ ಅವರು ಮುದಲ್ವನ್​, ಶಿವಾಜಿ: ದ ಬಾಸ್​ ಮುಂತಾದ ಹಿಟ್​ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಕೆ.ವಿ. ಆನಂದ್​ ಅವರು ಮೊದಲು ತಮ್ಮ ವೃತ್ತಿಜೀವನವನ್ನು ಫೋಟೋ ಜರ್ನಲಿಸ್ಟ್​ ಆಗಿ ಆರಂಭಿಸಿದರು. ಸಿನಿಮಾಗಳಿಗೆ ಕ್ಯಾಮರಾಮ್ಯಾನ್​ ಆಗಬೇಕು ಎಂಬ ಆಸೆ ಅವರಲ್ಲಿತ್ತು. ಛಾಯಾಗ್ರಾಹಕ ಪಿಸಿ ಶ್ರೀರಾಮ್​ ಬಳಿ ತಮ್ಮ ಹಂಬಲವನ್ನು ತೋಡಿಕೊಂಡರು. ನಂತರ ಶ್ರೀರಾಮ್​ ಜೊತೆ ಅನೇಕ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದರು.

1994ರಲ್ಲಿ ಪ್ರಿಯದರ್ಶನ್​ ನಿರ್ದೇಶನದ ಮಲಯಾಳಂನ ‘ತೆನ್​ಮಾವಿನ್​ ಕೊಂಬತ್’ ಚಿತ್ರದ ಮೂಲಕ ಕೆ.ವಿ. ಆನಂದ್​ ಸ್ವತಂತ್ರ ಛಾಯಾಗ್ರಾಹಕರಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. 1996ರಲ್ಲಿ ಕಾದಲ್​ ದೇಸಂ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಛಾಯಾಗ್ರಾಹಕನಾಗಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನೇ ಇಟ್ಟುಕೊಂಡು 2005ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದರು.

ಇದನ್ನೂ ಓದಿ: Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Koti Ramu Death : ನಟಿ ಮಾಲಾಶ್ರೀ ಗಂಡ, ನಿರ್ಮಾಪಕ ರಾಮು ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ

Published On - 8:54 am, Fri, 30 April 21

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us