AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

SP Jananathan Death: ನಿರ್ದೇಶಿಸಿದ ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ ಎಸ್​.ಪಿ. ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಭಾನುವಾರ ಅವರು ಹೃದಯಾಘಾತದಿಂದ ನಿಧನರಾದರು.

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ
ಎಸ್​.ಪಿ. ಜನನಾಥನ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 14, 2021 | 3:21 PM

Share

ವಿಶೇಷ ಸಿನಿಮಾಗಳ ಮೂಲಕ ತಮಿಳು ಚಿತ್ರರಂಗಕ್ಕೆ ಕೊಡುಗೆ ನೀಡಿದ್ದ ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಅವರು ಭಾನುವಾರ (ಮಾ.14) ನಿಧನರಾದರು. ಅವರ ಅಗಲಿಕೆಗೆ ಕಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜನನಾಥನ್ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ.

ಕಳೆದ ಗುರುವಾರವೇ (ಮಾ.11) ಎಸ್​.ಪಿ. ಜನನಾಥನ್​ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತ ಆಯಿತು ಎಂದು ವರದಿ ಆಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಎಸ್​.ಪಿ. ಜನನಾಥನ್ ನಿರ್ದೇಶಿಸಿದ್ದ ಮೊದಲ ಸಿನಿಮಾ ‘ಇಯರ್​ಕೈ’ (2003) ಬಾಕ್ಸ್​ ಆಫೀಸ್​ನಲ್ಲಿ ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಿರಲಿಲ್ಲ. ಆದರೆ ಅತ್ಯುತ್ತಮ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿತ್ತು.

‘ಇಯರ್​ಕೈ’ ಬಳಿಕ ಕಾಲಿವುಡ್​ನಲ್ಲಿ ಜನನಾಥನ್​ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಮಾಡಿದ್ದು ಬೆರಳೆಣಿಕೆಯ ಸಿನಿಮಾಗಳಾದರೂ ಅಪಾರ ಮನ್ನಣೆ ಗಳಿಸಿದ್ದರು. ನಿಧನರಾಗುವುದಕ್ಕೂ ಮುನ್ನ ಅವರು ‘ಲಾಭಂ’ ಸಿನಿಮಾ ನಿರ್ದೇಶಿಸುತ್ತಿದ್ದರು. ಆ ಚಿತ್ರಕ್ಕೆ ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ನಾಯಕಿ. ಜನನಾಥನ್​ ನಿಧನಕ್ಕೆ ಟ್ವಿಟರ್​ ಮೂಲಕ ಶ್ರುತಿ ಅವರು ಸಂತಾಪ ಸೂಚಿಸಿದ್ದಾರೆ.

‘ಭಾರವಾದ ಹೃದಯದಿಂದ ನಿಮಗೆ ನಾವು ವಿದಾಯ ಹೇಳುತ್ತಿದ್ದೇವೆ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ನಿಮ್ಮನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ನಿಮ್ಮ ಕುಟುಂಬದವರಿಗೆ ನನ್ನ ಸಂತಾಪಗಳು’ ಎಂದು ಶ್ರುತಿ ಹಾಸನ್​ ಟ್ವೀಟ್​ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಡಿ. ಇಮ್ಮಾನ್​, ನಟ ಮೋಹನ್​ ರಾಜ ಮುಂತಾದವರು ಜನನಾಥನ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ವಿಜಯ್​ ಸೇತುಪತಿ, ಜಗಪತಿ ಬಾಬು, ಶ್ರುತಿ ಹಾಸನ್ ನಟನೆಯ ‘ಲಾಭಂ’ ಚಿತ್ರಕ್ಕೆ ಜನನಾಥನ್​ ನಿರ್ದೇಶನ ಮಾಡುತ್ತಿದ್ದರು. ಆ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿದ್ದವು. ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್