AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್: ಬ್ಯಾನ್ ಮಾಡುವ ಎಚ್ಚರಿಕೆ

Dhanush: ನಟ ಧನುಶ್​ಗೆ ತಮಿಳು ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ನಿಷೇಧದ ಎಚ್ಚರಿಕೆ ನೀಡಿದೆ ಎನ್ನಲಾಗುತ್ತಿದೆ. ಕಾರಣವೇನು?

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್: ಬ್ಯಾನ್ ಮಾಡುವ ಎಚ್ಚರಿಕೆ
ಧನುಶ್
ಮಂಜುನಾಥ ಸಿ.
|

Updated on: Jul 02, 2023 | 3:36 PM

Share

ನಟ ಧನುಶ್ (Dhanush), ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ (Bollywood) ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲೂ (Hollywood) ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.

ಇದನ್ನೂ ಓದಿ:ಶಂಕರನಾಗಿ ಮತ್ತೆ ಬಾಲಿವುಡ್​ಗೆ ಕಾಲಿಟ್ಟ ಧನುಶ್, ಟೀಸರ್ ನೋಡಿ ಅತ್ಯದ್ಭುತ ಎಂದ ಅಭಿಮಾನಿಗಳು

ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್