AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಸಿಂಭು ವಿರುದ್ಧ ದೂರು, ಚಿತ್ರರಂಗದಿಂದ ನಿಷೇಧಿಸುವಂತೆ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಲಂಬರಸನ್ ಅಲಿಯಾಸ್ ಸಿಂಭು ವಿರುದ್ಧ ನಿರ್ಮಾಪಕರೊಬ್ಬರು ದೂರು ನೀಡಿದ್ದಾರೆ. ಈ ಕೂಡಲೇ ಸಿಂಭುವನ್ನು ತಮಿಳು ಚಿತ್ರರಂಗದಿಂದ ಉಚ್ಛಾಟನೆ ಮಾಡಬೇಕೆಂದಿದ್ದಾರೆ.

ತಮಿಳು ನಟ ಸಿಂಭು ವಿರುದ್ಧ ದೂರು, ಚಿತ್ರರಂಗದಿಂದ ನಿಷೇಧಿಸುವಂತೆ ಒತ್ತಾಯ
ಮಂಜುನಾಥ ಸಿ.
|

Updated on:May 12, 2024 | 9:45 AM

Share

ತಮಿಳು ಚಿತ್ರರಂಗದ (Kollywood) ಜನಪ್ರಿಯ ನಟ ಸಿಂಭು ಹೆಸರು ಆಗಾಗ್ಗೆ ಯಾವುದಾದರೂ ವಿವಾದಗಳಲ್ಲಿ ಕೇಳಿ ಬರುತ್ತಲೇ ಇರುತ್ತದೆ. ಇದೀಗ ಸಿಂಭು ವಿರುದ್ಧ ನಿರ್ಮಾಪಕರೊಬ್ಬರು ದೂರು ನೀಡಿದ್ದು, ಈ ಕೂಡಲೇ ನಟ ಸಿಂಭು ಅನ್ನು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು ಒತ್ತಾಯಿಸಿದ್ದಾರೆ. ಸಿಂಭು, ಪ್ರಸ್ತುತ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

ಕನ್ನಡದ ‘ಮಫ್ತಿ’ ಸಿನಿಮಾದ ರೀಮೇಕ್ ‘ಪತ್ತು ತಲ’ ಸಿನಿಮಾದಲ್ಲಿ ಸಿಂಭು ನಟಿಸಿದ್ದರು. ಅದಕ್ಕೂ ಮುನ್ನ ‘ವೆಂದು ತನಿದಿತ್ತು ಕಾಡು’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಬಳಿಕ ‘ಕೊರೊನಾ ಕಿಂಗ್’ ಹೆಸರಿನ ಸಿನಿಮಾನಲ್ಲಿ ಸಿಂಭು ನಟಿಸಬೇಕಿತ್ತು. ‘ಕೊರೊನಾ ಕಿಂಗ್’ ಸಿನಿಮಾವನ್ನು ಗೋಕುಲ್ ಎನ್ ಕೃಷ್ಣ ನಿರ್ದೇಶನ ಮಾಡಿ, ಇಶಾರಿ ಕೆ ಗಣೇಶ್ ನಿರ್ಮಾಣ ಮಾಡಬೇಕಿತ್ತು. ಆದರೆ ಆ ಸಿನಿಮಾದಿಂದ ಸಿಂಭು ಹೊರ ಬಂದರು.

ಇದನ್ನೂ ಓದಿ:ರಿಷಬ್ ಶೆಟ್ಟಿ ತಮಿಳು ಚಿತ್ರರಂಗಕ್ಕೆ ಹೊರಟು ಹೋಗಲು ನಿರ್ಧರಿಸಿದ್ದ: ರಕ್ಷಿತ್ ಶೆಟ್ಟಿ

ಕೆಲವು ಆಂತರಿಕ ಸಮಸ್ಯೆಗಳಿಂದಾಗಿ ‘ಕೊರೊನಾ ಕಿಂಗ್’ ಸಿನಿಮಾದಿಂದ ಸಿಂಭು ಹೊರಬಂದರು. ಬಳಿಕ ‘ಪತ್ತು ತಲ’ ಸಿನಿಮಾ ಪ್ರಾರಂಭಿಸಿದರು. ಆದರೆ ಈಗ ‘ಕೊರೊನಾ ಕಿಂಗ್’ ನಿರ್ಮಾಪಕ ಇಶಾರಿ ಕೆ ಗಣೇಶ್ ಸಿಂಭು ವಿರುದ್ಧ ನಿರ್ಮಾಪಕರ ಸಂಘಕ್ಕೆ ದೂರು ನೀಡಿದ್ದಾರೆ. ಸಿಂಭು ಶೂಟಿಂಗ್ ಪ್ರಾರಂಭವಾಗುವ ಮುನ್ನವೇ ನಮ್ಮಿಂದ ಅಡ್ವಾನ್ಸ್ ಪಡೆದು ಬಳಿಕ ಸಿನಿಮಾದಿಂದ ಹೊರಗೆ ಹೋಗಿದ್ದಾರೆ. ಅವರನ್ನು ಈ ಕೂಡಲೇ ತಮಿಳು ಚಿತ್ರರಂಗದಿಂದ ಉಚ್ಛಾಟನೆ ಮಾಡಬೇಕು. ಈಗ ನಟಿಸುತ್ತಿರುವ ಸಿನಿಮಾ ಸೇರಿದಂತೆ ಇನ್ಯಾವ ಸಿನಿಮಾದಲ್ಲಿಯೂ ನಟಿಸಲು ಅವಕಾಶ ಮಾಡಿಕೊಡಬಾರದು ಎಂದಿದ್ದಾರೆ.

ಸಿಲಂಬರಸನ್ ಅಲಿಯಾಸ್ ಸಿಂಭುಗೆ ಇದೆಲ್ಲ ಹೊಸದಲ್ಲ. ಸಿನಿಮಾ ಶೂಟಿಂಗ್ ವಿಚಾರವಾಗಿ ಸಿಂಭು ಅಶಿಸ್ತು ತೋರಿಸಿದ ಹಲವು ಆರೋಪಗಳು ಅವರ ಮೇಲೆ ಈಗಾಗಲೇ ಇವೆ. ನಿರ್ದೇಶಕ ಕೆಲಸದಲ್ಲಿ ಮೂಗು ತೂರಿಸುವುದು, ಶೂಟಿಂಗ್ ಸೆಟ್​ನಲ್ಲಿ ಅಶಿಸ್ತಿನಿಂದ ನಡೆದುಕೊಳ್ಳುವುದು. ನಿರ್ಮಾಪಕರ ಜೊತೆಗೆ ಹಣ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಹೀಗೆ ಹಲವು ವಿವಾದಗಳನ್ನು ಸಿಂಭು ಈ ಹಿಂದೆಯೂ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಸಹ ಸಿಂಭು ವಿರುದ್ಧ ನಿರ್ಮಾಪಕರ ಸಂಘ, ನಿರ್ದೇಶಕರ ಸಂಘಗಳಿಗೆ ದೂರು ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:17 am, Sun, 12 May 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ