‘ಇದು ಅತ್ಯುತ್ತಮ ನಿರ್ಧಾರ’; ಖ್ಯಾತ ಮ್ಯೂಸಿಕ್ ಡೈರೆಕ್ಟರ್ ವಿಚ್ಛೇದನ
‘ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ’ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತಿ-ಪತ್ನಿ ಮಧ್ಯೆ ಯಾವುದೂ ಸರಿ ಇರಲಿಲ್ಲ ಎನ್ನುವ ವಿಚಾರ ಫ್ಯಾನ್ಸ್ಗೆ ಪಕ್ಕಾ ಆಗಿದೆ.

ತಮಿಳು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿ ಗಮನ ಸೆಳೆದಿರೋ ಜಿವಿ ಪ್ರಕಾಶ್ ಕುಮಾರ್ ಹಾಗೂ ಅವರ ಪತ್ನಿ ಸೈಂಧವಿ ಅವರು ದೂರ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಮೂಲಕ 11 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದೆ. ವಿಚ್ಛೇದನ (Divorce) ಪಡೆಯುತ್ತಿರುವ ವಿಚಾರವನ್ನು ಈ ದಂಪತಿ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ.
‘ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ’ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತಿ-ಪತ್ನಿ ಮಧ್ಯೆ ಯಾವುದೂ ಸರಿ ಇರಲಿಲ್ಲ ಎನ್ನುವ ವಿಚಾರ ಫ್ಯಾನ್ಸ್ಗೆ ಪಕ್ಕಾ ಆಗಿದೆ.
‘ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ’ ಎಂದಿದ್ದಾರೆ ಪ್ರಕಾಶ್.
ಪ್ರಕಾಶ್ ಕುಮಾರ್ ಅವರು ಆಸ್ಕರ್ ವಿಜೇತ ಮ್ಯೂಸಿಕ್ ಡೈರೆಕ್ಟರ್ ಎಆರ್ ರೆಹಮಾನ್ ಅವರ ಸೋದರಳಿಯ. ಪ್ರಕಾಶ್ ಅವರು ಬಾಲ್ಯದ ಗೆಳೆತಿ ಸೈಂಧವಿ ಅವರನ್ನು 2013ರಲ್ಲಿ ಮದುವೆ ಆದರು. 2020ರಲ್ಲಿ ಈ ದಂಪತಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದರು. ಈಗ ಮಗು ನಾಲ್ಕನೇ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಇವರು ಬೇರೆ ಆಗಿದ್ದಾರೆ.
ಇದನ್ನೂ ಓದಿ: ‘ಬಾಲಿವುಡ್ ಮೇಲೆ ಸ್ಯಾಂಡಲ್ವುಡ್ ಎಸೆದ ಅಣುಬಾಂಬ್ ಇದು’: ಯಶ್ ಗೆಲುವನ್ನು ಹೀಗೆ ವರ್ಣಿಸಿದ ಆರ್ಜಿವಿ
ಕಳೆದ ವರ್ಷ ಸೈಂಧವಿ ಅವರು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಪರಸ್ಪರ ವಿಶ್ ಮಾಡಿದ್ದರು. ಈಗ ಇಬ್ಬರೂ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿರೋದು ಫ್ಯಾನ್ಸ್ಗೆ ಶಾಕಿಂಗ್ ಎನಿಸಿದೆ. ‘ಸೊರರೈ ಪೋಟ್ರು’, ‘ತಲೈವಿ’, ‘ಸೆಲ್ಫೀ’, ‘ಕ್ಯಾಪ್ಟನ್ ಮಿಲ್ಲರ್’, ‘ತೇರಿ’ ಸೇರಿ ಹಲವು ಸಿನಿಮಾಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




