AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ: ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ

The Kashmir Files: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ನರ್ಗಿಸ್ ದತ್ ರಾಷ್ಟ್ರೀಯ ಐಕ್ಯತೆ ವಿಭಾಗದ ಪ್ರಶಸ್ತಿ ಲಭಿಸಿರುವ ಬಗ್ಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ: ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧ
MK Stalin
Follow us
ಮಂಜುನಾಥ ಸಿ.
|

Updated on:Aug 26, 2023 | 4:19 PM

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (National Film Award) ಘೋಷಣೆ ಆಗಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳು ಬೇರೆ-ಬೇರೆ ವಿಭಾಗಗಳಲ್ಲಿ ಪ್ರಶಸ್ತಿ ಜಯಿಸಿದೆ. ತಮಿಳಿನ ರಾಕೆಟ್ರಿ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾ ರಾಷ್ಟ್ರಪ್ರಶಸ್ತಿ ಲಭಿಸಿದರೆ. ತೆಲುಗಿನ ‘ಆರ್​ಆರ್​ಆರ್’ ಸಿನಿಮಾಕ್ಕೆ ಅತ್ಯುತ್ತಮ ಮನೊರಂಜನಾ ಸಿನಿಮಾ ಪ್ರಶಸ್ತಿ ಲಭಿಸಿದೆ. ಬಿಡುಗಡೆ ಆದಾಗ ವಿವಾದ ಎಬ್ಬಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್‘ (The Kashmir Files) ಸಿನಿಮಾಕ್ಕೆ ನರ್ಗಿಸ್ ದತ್ ರಾಷ್ಟ್ರೀಯ ಐಕ್ಯತೆ ಸಿನಿಮಾ ಪ್ರಶಸ್ತಿ ಲಭಿಸಿದೆ. ಆದರೆ ತೀರ್ಪುಗಾರರ ಈ ಆಯ್ಕೆಯನ್ನು ತಮಿಳುನಾಡು ಸಿಎಂ ಸ್ಟಾಲಿನ್ ಸೇರಿದಂತೆ ಇನ್ನೂ ಕೆಲವರು ವಿರೋಧಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಗೌರವವನ್ನು ಕಳಪೆ ರಾಜಕೀಯಕ್ಕಾಗಿ ಹಾಳು ಮಾಡಬಾರದು. ವಿಮರ್ಶಕರಿಂದ ಪ್ರೇಕ್ಷಕರಿಂದ ವಿವಾದಾತ್ಮಕ ಸಿನಿಮಾ ಎಂದು ತಿರಸ್ಕಾರಕ್ಕೆ ಒಳಪಟ್ಟಿರುವ ಸಿನಿಮಾಕ್ಕೆ ನ್ಯಾಷನಲ್ ಇಂಟಿಗ್ರಿಟಿ ನರ್ಗಿಸ್ ದತ್ ಪ್ರಶಸ್ತಿ ನೀಡಲಾಗಿರುವುದು ಆಘಾತಕಾರಿ” ಎಂದಿದ್ದಾರೆ.

ಮುಂದುವರೆದು, ”ಕಲೆ, ಸಾಹಿತ್ಯದಲ್ಲಿ ರಾಜಕೀಯ ಇಲ್ಲದಿರುವುದರಿಂದಲೇ ಅದಕ್ಕೆ ಸಂಬಂಧಿತ ಪ್ರಶಸ್ತಿಗಳಿಗೆ ಕಾಲಾತೀತವಾಗಿ ಗೌರವ, ಮನ್ನಣೆ ಸಿಗುತ್ತಿದೆ. ಈಗ ಆಗಿರುವುದು ಸರಿಯಲ್ಲ” ಎಂದಿರುವ ಸ್ಟಾಲಿನ್, ಪ್ರಶಸ್ತಿ ಪಡೆದ ಇತರ ಸಿನಿಮಾ ಹಾಗೂ ತಂತ್ರಜ್ಞರಿಗೆ ಅಭಿನಂದನೆ ತಿಳಿಸಿದರು ಹಾಗೂ ಪ್ರಶಸ್ತಿ ಪಡೆದ ತಮಿಳುನಾಡಿನ ಕಲಾವಿದರಿಗೆ, ತಂತ್ರಜ್ಞರಿಗೆ ವಿಶೇಷ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ:‘ರಾಜಕೀಯ ಒತ್ತಡದಿಂದ ದಿ ಕಾಶ್ಮೀರ್ ಫೈಲ್ಸ್​ ಸಿನಿಮೋತ್ಸವಕ್ಕೆ ಬಂತು’; ಇಸ್ರೇಲ್ ನಿರ್ದೇಶಕ ನಡಾವ್

ಎಂಕೆ ಸ್ಟಾಲಿನ್ ಮಾತ್ರವೇ ಅಲ್ಲದೆ ಜಮ್ಮು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲ ಸಹ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಷ್ಟ್ರೀಯ ಐಕ್ಯತೆ ವಿಭಾಗದಲ್ಲಿ ಪ್ರಶಸ್ತಿ ನೀಡಿರುವುದನ್ನು ವ್ಯಂಗ್ಯ ಮಾಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು 1990 ರಲ್ಲಿ ಕಾಶ್ಮೀರದಲ್ಲಿ ನಡೆದಿದೆ ಎನ್ನಲಾದ ಪಂಡಿತರ ಮೇಲಿನ ದೌರ್ಜನ್ಯದ ಕತೆಯನ್ನು ಒಳಗೊಂಡಿದೆ. ಸಿನಿಮಾವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದು, ಅನುಪಮ್ ಖೇರ್, ಪಲ್ಲವಿ ಜೋಷಿ, ದರ್ಶನ್ ಕುಮಾರ್ ಇನ್ನೂ ಹಲವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ನಟಿಸಿರುವ ಪಲ್ಲವಿ ಜೋಷಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಹ ಲಭ್ಯವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Sat, 26 August 23

ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ