AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್ ಅನ್ನು ಭೇಟಿಯಾದ ಸಿನಿಮಾ ನಿರ್ದೇಶಕರ ತಂಡ: ಕಾರಣ?

Thalapathy Vijay movie: ಇತ್ತೀಚೆಗಷ್ಟೆ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್, ಸಿಎಂ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು, ಮನವಿಗಳನ್ನು ಮಾಡಿದ್ದರು. ಅದರ ಬೆನ್ನಲ್ಲೆ ಇದೀಗ ತಮಿಳುನಾಡು ಚಿತ್ರರಂಗದ ನಿರ್ದೇಶಕ ಸಂಘದ ಸದಸ್ಯರು ವಿಜಯ್ ಅವರನ್ನು ಭೇಟಿ ಆಗಿದ್ದಾರೆ. ಅದರಲ್ಲಿ ಕೆಲವಾರು ಮಂದಿ ಈಗಾಗಲೇ ವಿಜಯ್ ಜೊತೆಗೆ ಕೆಲಸ ಮಾಡಿರುವವರೇ ಆಗಿರುವುದು ವಿಶೇಷ.

ಸಿಎಂ ವಿಜಯ್ ಅನ್ನು ಭೇಟಿಯಾದ ಸಿನಿಮಾ ನಿರ್ದೇಶಕರ ತಂಡ: ಕಾರಣ?
Thalapathy Vijay1
ಮಂಜುನಾಥ ಸಿ.
|

Updated on: May 20, 2026 | 6:22 PM

Share

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ವಾರವಾಗುತ್ತಾ ಬಂದಿದೆ. ಸಿಎಂ ಆದ ಬಳಿಕ ಕೆಲವು ಪ್ರಮುಖ ನಿರ್ಧಾರಗಳನ್ನು ವಿಜಯ್ ಪ್ರಕಟಿಸಿರುವ ಜೊತೆಗೆ ಮಂತ್ರಿ ಮಂಡಲದ ರಚನೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್, ಸಿಎಂ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು, ಮನವಿಗಳನ್ನು ಮಾಡಿದ್ದರು. ಅದರ ಬೆನ್ನಲ್ಲೆ ಇದೀಗ ತಮಿಳುನಾಡು ಚಿತ್ರರಂಗದ ನಿರ್ದೇಶಕ ಸಂಘದ ಸದಸ್ಯರು ವಿಜಯ್ ಅವರನ್ನು ಭೇಟಿ ಆಗಿದ್ದಾರೆ. ಅದರಲ್ಲಿ ಕೆಲವಾರು ಮಂದಿ ಈಗಾಗಲೇ ವಿಜಯ್ ಜೊತೆಗೆ ಕೆಲಸ ಮಾಡಿರುವವರೇ ಆಗಿರುವುದು ವಿಶೇಷ.

ತಮಿಳು ಚಿತ್ರರಂಗದಲ್ಲಿ ನಟ, ನಿರ್ದೇಶಕ, ಟಿವಿ ಆಂಕರ್ ಆಗಿ ಗುರುತಿಸಿಕೊಂಡಿರುವ ರಾಜ್‌ಮೋಹನ್ ಅವರನ್ನು ವಿಜಯ್ ಸಿನಿಮಾಟೊಗ್ರಫಿ ಸೇರಿದಂತೆ ಶಾಲಾ ಶಿಕ್ಷಣ, ತಮಿಳು ಅಭಿವೃದ್ಧಿ, ಮಾಹಿತಿ ಮತ್ತು ಪ್ರಚಾರ ಇಲಾಖೆಯ ಸಚಿವರನ್ನಾಗಿ ನೇಮಿಸಿದರು. ಇದೇ ಕಾರಣಕ್ಕೆ ತಮಿಳು ಚಿತ್ರರಂಗದ ನಿರ್ದೇಶಕರ ಸಂಘದವರು ವಿಜಯ್ ಅವರನ್ನು ಭೇಟಿಯಾಗಿ ಅವರನ್ನು ಅಭಿನಂದಿಸಿದ್ದಾರೆ. ಮೇ 19 ರಂದು, ತಮಿಳು ಚಿತ್ರೋದ್ಯಮದ ನಿರ್ದೇಶಕರ ಸಂಘದ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ವಿಜಯ್ ಅವರನ್ನು ಭೇಟಿ ಮಾಡಿದ ನಿರ್ದೇಶಕರಲ್ಲಿ ಅವರ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ (ಗೋಟ್) ಸಿನಿಮಾದ ನಿರ್ದೇಶಕ ವೆಂಕಟ್ ಪ್ರಭು ಕೂಡ ಇದ್ದರು. ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ‘ನನ್ನ ನಿರ್ದೇಶಕರ ಸಂಘದ ಕುಟುಂಬಕ್ಕೆ ಧನ್ಯವಾದಗಳು. ನಮ್ಮ ಸಚಿವಾಲಯದಲ್ಲಿ ಗೌರವಾನ್ವಿತ ಮುಖ್ಯಮಂತ್ರಿ ಅಣ್ಣನ ಜೊತೆ ಎರಡನೇ ಸುತ್ತಿನ ಭೇಟಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:‘ದಳಪತಿ’ ರಾಜಕೀಯ ತಮಿಳುನಾಡಿಗೆ ಮಾತ್ರ ಸೀಮಿತವೇ? ಕೇರಳಂ ಸಿಎಂ ವಿಡಿ ಸತೀಶನ್ ಪದಗ್ರಹಣಕ್ಕೆ ವಿಜಯ್ ಗೈರು

ಕೆಲವು ದಿನಗಳ ಹಿಂದೆ, ಅವರು ತಮ್ಮ 2024 ರ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರದ ವೈರಲ್ ಆಗಿದ್ದ ‘TN07 CM 2026’ ನಂಬರ್ ಪ್ಲೇಟ್ ಅನ್ನು ವಿಜಯ್ ಅವರಿಗೆ ಉಡುಗೊರೆಯಾಗಿ ನೀಡಿದ್ದರು. ಆ ನಂಬರ್ ಪ್ಲೇಟ್ ಅನ್ನು ಮೂಲತಃ ಸಿನಿಮಾದಲ್ಲಿ ಬಳಸಲಾಗಿತ್ತು. ಸಿನಿಮಾನಲ್ಲಿ ಅವರು ಊಹಿಸಿದಂತೆ ಇದೀಗ ನಿಜಕ್ಕೂ 2026ರಲ್ಲಿ ವಿಜಯ್ ಸಿಎಂ ಆಗಿದ್ದಾರೆ.

ವಿಜಯ್ ಅವರನ್ನು ಭೇಟಿಯಾದ ತಂಡದಲ್ಲಿ ನಿರ್ದೇಶಕ ಕೆಎಸ್ ರವಿಕುಮಾರ್ ಅವರು ಸಹ ಇದ್ದು, ‘ಕೆಲವು ಕ್ಷಣಗಳು ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ, ಅಂತಹ ಕ್ಷಣಗಳಲ್ಲಿ ಇದೂ ಒಂದು. ನಮ್ಮ ಪ್ರೀತಿಯ ವಿಜಯ್ ಅವರನ್ನು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರ ಹೊಸ ಪಾತ್ರದಲ್ಲಿ ಭೇಟಿ ಮಾಡಿದ್ದು ಮತ್ತು ನಮ್ಮ ನಿರ್ದೇಶಕರ ಸಂಘದ ಪರವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದು ಅದ್ಭುತವಾಗಿತ್ತು. ಈ ವಿಶೇಷ ಮತ್ತು ಸ್ಮರಣೀಯ ಕ್ಷಣವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಮೇ 16 ರಂದು, ಹಿರಿಯ ನಟ ಕಮಲ್ ಹಾಸನ್ ಅವರು ವಿಜಯ್ ಅವರನ್ನು ಭೇಟಿ ಮಾಡಿ, ತಮಿಳು ಚಿತ್ರೋದ್ಯಮಕ್ಕೆ ಬೆಂಬಲ ನೀಡುವ ಅಗತ್ಯದ ಕುರಿತು 6 ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು. ಅವರು, “ವಿವಿಧ ಅಡೆತಡೆಗಳನ್ನು ಎದುರಿಸುತ್ತಿರುವ ತಮಿಳು ಚಿತ್ರೋದ್ಯಮಕ್ಕೆ ಬೆಂಬಲ ಮತ್ತು ಸಹಕಾರದ ಅಗತ್ಯವನ್ನು ಒತ್ತು ತೇಳಿ ನಾನು ತಮಿಳುನಾಡು ಸರ್ಕಾರಕ್ಕೆ 6 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದೇನೆ. ಇದರ ಪ್ರಯೋಜನಗಳು ವೃದ್ಧಿಸಲಿ’ ಎಂದು ಅವರು ಬರೆದುಕೊಂಡಿದ್ದರು. ತಮಿಳುನಾಡು ಸರ್ಕಾರದ ಒಟಿಟಿ (OTT) ಪ್ಲಾಟ್‌ಫಾರ್ಮ್ ಪ್ರಾರಂಭಿಸುವುದು, ಸ್ಥಳೀಯ ಸಂಸ್ಥೆಗಳ ಮನರಂಜನಾ ತೆರಿಗೆ ರದ್ದುಪಡಿಸುವುದು ಮತ್ತು ಬಲಿಷ್ಠ ಪೈರಸಿ ವಿರೋಧಿ ತಂಡವನ್ನು ರಚಿಸುವುದು ಈ ವಿನಂತಿಗಳಲ್ಲಿ ಸೇರಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?