AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದವರಿಗೆ ನಗದು ಬಹುಮಾನ ಘೋಷಿಸಿದ ರಾಜಕಾರಣಿ

ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದ. ಈ ವಿಡಿಯೋ ವೈರಲ್​ ಆಗಿತ್ತು.

ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದವರಿಗೆ ನಗದು ಬಹುಮಾನ ಘೋಷಿಸಿದ ರಾಜಕಾರಣಿ
ವಿಜಯ್​ ಮೇಲೆ ಹಲ್ಲೆ ಆದ ದೃಶ್ಯ ಮತ್ತು ಅರ್ಜುನ್​ ಸಂಪತ್
TV9 Web
| Edited By: |

Updated on:Nov 08, 2021 | 4:07 PM

Share

ವಿಜಯ್​ ಸೇತುಪತಿ (Vijay Sethupathi) ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru)  ಹಲ್ಲೆ ಮಾಡಿದ ಪ್ರಕರಣ ದೊಡ್ಡ ಮಟ್ಟದಲ್ಲಿ ಹೈಪ್​ ಪಡೆದುಕೊಂಡಿತ್ತು. ಇದಕ್ಕೆ ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದರು. ಹಲ್ಲೆ ಮಾಡಿದ ವ್ಯಕ್ತಿಗೆ ಶಿಕ್ಷೆ ಆಗಬೇಕು ಎಂದು ಕೆಲವರು ಆಗ್ರಹಿಸಿದ್ದರು. ‘ಈ ಪ್ರಕರಣವನ್ನು ಇಷ್ಟೊಂದು ದೊಡ್ಡದು ಮಾಡುವ ಅವಶ್ಯಕತೆಯೇ ಇರಲಿಲ್ಲ. ಹಲ್ಲೆ ಮಾಡಿದ ವ್ಯಕ್ತಿ ​ಕುಡಿದಿದ್ದ ಅಷ್ಟೇ’ ಎಂದು ವಿಜಯ್​ ಸೇತುಪತಿ ಸ್ಪಷ್ಟಪಡಿಸಿದ್ದರು. ಈ ಬೆನ್ನಲ್ಲೇ ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದರೆ ನಗದು ಬಹುಮಾನ ನೀಡುವುದಾಗಿ ರಾಜಕಾರಣಿ ಒಬ್ಬರು ಘೋಷಿಸಿದ್ದಾರೆ. ಈ ಮೂಲಕ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರಾಜಕಾರಣಿ ಬಗ್ಗೆ ಎಲ್ಲರೂ ದ್ವೇಷ ಕಾರುತ್ತಿದ್ದಾರೆ.

ನವೆಂಬರ್​ 2 ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ವಾಗ್ವಾದ ಏರ್ಪಟ್ಟಿತ್ತು. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದ. ಈ ವಿಡಿಯೋ ವೈರಲ್​ ಆಗಿತ್ತು. ಇದಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ್ದ ವಿಜಯ್​ ಸೇತುಪತಿ, ‘ನಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿ ನನ್ನ ಅಭಿಮಾನಿ ಅಲ್ಲ. ವಿಮಾನದಲ್ಲಿ ಆತ ಸಹ-ಪ್ರಯಾಣಿಕ ಆಗಿದ್ದ. ಪ್ರಯಾಣದ ವೇಳೆ ನಮ್ಮೊಂದಿಗೆ ವಾಗ್ವಾದ ಮಾಡುತ್ತಲೇ ಇದ್ದ. ಆತ ಕುಡಿದಿದ್ದ’ ಎಂದು ವಿಜಯ್​ ಸೇತುಪತಿ ಹೇಳಿದ್ದರು.

ಹಲ್ಲೆ ಮಾಡಿದ ವ್ಯಕ್ತಿ ಹೆಸರು ಮಹಾ ಗಾಂಧಿ. ಹಲ್ಲೆ ಬೆನ್ನಲ್ಲೇ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದರು. ‘ಸ್ವಾತಂತ್ರ್ಯ ಹೋರಾಟಗಾರ ಮುತ್ತುರಾಮಲಿಂಗ ತೇವರ್​ಗೆ ವಿಜಯ್​ ಸೇತುಪತಿ ಅವಮಾನ ಮಾಡಿದ್ದಾರೆ. ಆ ಕಾರಣಕ್ಕೆ ನಾನು ಹಲ್ಲೆ ಮಾಡಿದ್ದೆ’ ಎಂದು ಮಹಾ ಹೇಳಿಕೊಂಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.  ಆದರೆ, ಇದನ್ನು ವಿಜಯ್​ ಒಪ್ಪಿಕೊಂಡಿಲ್ಲ.

ತಮಿಳುನಾಡಿನ ವಿವಾದಾತ್ಮಕ ರಾಜಕಾರಣಿ ಅರ್ಜುನ್​ ಸಂಪತ್​ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ವಿಜಯ್​ ಸೇತುಪತಿ ಅವರು ಮುತ್ತುರಾಮಲಿಂಗ ತೇವರ್​​ಗೆ ಅವಮಾನ ಮಾಡಿದ ಬಗ್ಗೆ ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳುವವರೆಗೂ ನಾವು ಬಿಡುವುದಿಲ್ಲ. ಯಾರು ಅವರಿಗೆ ಹೋಗಿ ಒದೆಯುತ್ತಾರೋ, ಪ್ರತಿ ಒದೆತಕ್ಕೆ 1 ಸಾವಿರ ರೂಪಾಯಿ ನೀಡುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

‘ಬೆಂಗಳೂರಿನ ಹಲ್ಲೆ ಘಟನೆಯನ್ನು ಅನವಶ್ಯಕ ದೊಡ್ಡದು ಮಾಡಲಾಯ್ತು’: ನಟ ವಿಜಯ್​ ಸೇತುಪತಿ

Published On - 4:05 pm, Mon, 8 November 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ