AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

ಮೈಕ್ ಹಿಡಿದು ಥಿಯೇಟರ್​ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.  

ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 21, 2024 | 10:19 AM

Share

ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಈ ಚಿತ್ರಗಳಿಗೆ ಕೆಟ್ಟ ವಿಮರ್ಶೆ ಸಿಕ್ಕವು. ‘ಕಂಗುವ’ ಸಿನಿಮಾ ನೋಡಿ ಬಂದ ಎಲ್ಲರೂ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು. ಸಿನಿಮಾ ನೋಡುತ್ತೇನೆ ಎಂದು ಹೊರಡಬೇಕು ಎಂದುಕೊಂಡಿದ್ದವರಿಗೆ ಈ ವಿಮರ್ಶೆಯಿಂದ ಹಿನ್ನಡೆ ಆಯಿತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.

ಇತ್ತೀಚೆಗೆ ಯೂಟ್ಯೂಬರ್​​ಗಳ ಸಂಖ್ಯೆ ಹೆಚ್ಚಿದೆ. ಎಲ್ಲರೂ ಯೂಟ್ಯೂಬ್ ಮಾಡಿಕೊಂಡು, ಸಿನಿಮಾ ವಿಮರ್ಶೆ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಕ್ ಹಿಡಿದು ಥಿಯೇಟರ್​ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್​ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ. ಇದರ ಪ್ರಕಾರ ಯಾರೂ ಥಿಯೇಟರ್ ಬಳಿ ಮೈಕ್ ಹಿಡಿದು ಬರುವಂತಿಲ್ಲ.

‘ಈ ರೀತಿಯ ವಿಮರ್ಶೆಗಳು ಸಿನಿಮಾಗೆ ತೊಂದರೆ ಮಾಡುತ್ತವೆ. ಈ ಕಾರಣಕ್ಕೆ ಬ್ಯಾನ್ ಮಾಡಲಾಗಿದೆ’ ಎನ್ನುವ ಅಭಿಪ್ರಾಯವನ್ನು ನಿರ್ಮಾಪಕರ ಕೌನ್ಸಿಲ್ ನೀಡಿದೆ. ಇದಕ್ಕೆ ಯೂಟ್ಯೂಬರ್​ಗಳು ವಿರೋಧ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ

‘ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಇದನ್ನು ನಾವು ಜನರಿಗೆ ತಲುಪಿಸುತ್ತೇವೆ. ಇದರಲ್ಲಿ ತಪ್ಪೇನಿದೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಈ ರೀತಿಯ ವಿಮರ್ಶೆಗಳಿಂದಲೇ ಸೋತಿತು ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಈ ಸಿನಿಮಾಗಳು ಉತ್ತಮವಾಗಿರಲಿಲ್ಲ ಎಂಬ ಕಾರಣಕ್ಕೆ ಸೋತಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ