AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilli Babu: ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಪಕನ ಹಠಾತ್ ನಿಧನ

ದಿಲ್ಲಿ ಬಾಬು ಅವರ ಸಾವು ಚಿತ್ರರಂಗಕ್ಕೆ ದೊಡ್ಡ ಮಟ್ಟದ ಶಾಕ್ ತಂದಿದೆ. ತಮಿಳು ಫಿಲ್ಮ್​ ಇಂಡಸ್ಟ್ರಿಯಲ್ಲಿ ಅವರು ‘ರಾಕ್ಷಸನ್’, ‘ಓ ಮೈ ಕಡವಲೆ’, ‘ಬ್ಯಾಚುಲರ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅನೇಕರು ದಿಲ್ಲಿ ಬಾಬು ಸಾವಿಗೆ ಸಂತಾಪ ಸೂಚಿಸಿದ್ದಾರೆ.

Dilli Babu: ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಪಕನ ಹಠಾತ್ ನಿಧನ
ದಿಲ್ಲಿ ಬಾಬು
TV9 Web
| Edited By: |

Updated on: Sep 09, 2024 | 12:34 PM

Share

ತಮಿಳು ನಿರ್ಮಾಪಕ ದಿಲ್ಲಿ ಬಾಬು ಅವರು ಇಂದು (ಸೆಪ್ಟೆಂಬರ್ 9) ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 50 ವರ್ಷ ವಯಸ್ಸಾಗಿತ್ತು. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ ಸಮಯಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅವರು ತಮಿಳು ಚಿತ್ರರಂಗದಲ್ಲಿ ಹಲವು ಹಿಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.

ದಿಲ್ಲಿ ಬಾಬು ಅವರ ಸಾವು ಚಿತ್ರರಂಗಕ್ಕೆ ದೊಡ್ಡ ಮಟ್ಟದ ಶಾಕ್ ತಂದಿದೆ. ತಮಿಳು ಫಿಲ್ಮ್​ ಇಂಡಸ್ಟ್ರಿಯ ಅನೇಕರು ದಿಲ್ಲಿ ಬಾಬು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಲಿಲ್ಲ.

ಚೆನ್ನೈನ ಪೆರಂಗಳದೂರ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ರ ವೇಳೆಗೆ ಅವರ ಶವವನ್ನು ಮನೆಗೆ ತರಲಾಗಿದೆ. ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ನಿರ್ಮಾಪಕ ಎಸ್​ಆರ್ ಪ್ರಭು ಅವರು ಟ್ವೀಟ್ ಮಾಡಿದ್ದಾರೆ. ‘ದಿಲ್ಲಿ ಬಾಬು ನಿಧನ ವಾರ್ತೆ ಶಾಕಿಂಗ್ ತಂದಿದೆ. ಅನೇಕ ಯುವ ಟ್ಯಾಲೆಂಟ್​ಗಳಿಗೆ ಇವರು ಬೆಂಬಲ ನೀಡಿದ್ದರು. ಅವರ ಆಪ್ತರು ಹಾಗೂ ಕುಟುಂಬದವರಿಗೆ ನನ್ನ ಸಂತಾಪ’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಗ್ಗೆ ಅಪ್ಡೇಟ್ ಕೊಟ್ಟ ನಿರ್ಮಾಪಕ: ರಿಲೀಸ್ ಯಾವಾಗ?

ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು ಅವರ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ದಿಲ್ಲಿ ಬಾಬು ಅವರು ‘Axess Film Factory’ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದರು. ‘ರಾಕ್ಷಸನ್’, ‘ಓ ಮೈ ಕಡವಲೆ’, ‘ಬ್ಯಾಚುಲರ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ