AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.   

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ
ಉಮಾ ರಮಣನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 10:33 AM

Share

ತಮಿಳು ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಉಮಾ ರಮಣನ್ (Uma Ramanan) ಅವರು ಬುಧವಾರ (ಮೇ 1) ನಿಧನ ಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತಮಿಳು ಸಿನಿಮಾಗಳಲ್ಲಿ ಹಲವು ಮೆಲೋಡಿ ಹಾಡುಗಳನ್ನು ಹಾಡಿದ ಖ್ಯಾತಿ ಅವರಿಗೆ ಇದೆ. ಅವರ ಪತಿ ಅವಿ ರಮಣನ್ ಅವರು ಖ್ಯಾತ ಗಾಯಕರು. ಈ ದಂಪತಿಗೆ ಓರ್ವ ಮಗ ಇದ್ದಾನೆ. ಉಮಾ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.

1977ರಲ್ಲಿ ರಿಲೀಸ್ ಆದ ‘ಶ್ರೀ ಕೃಷ್ಣಲೀಲಾ’ ಸಿನಿಮಾದ ‘ಮೋಹನ ಕಣ್ಣನ ಮುರಳಿ..’ ಹಾಡಿನ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು.  ‘ನೀಳಲ್ಗಳ್’ ಸಿನಿಮಾದ ‘ಪೂಂಗಾತವೇ ತಾಳ ತಿರವೈ..’ ಹಾಡನ್ನು ಹಾಡಿ ಉಮಾ ರಮಣ್ ಅವರು ಗಮನ ಸೆಳೆದರು. ಈ ಹಾಡು ಅವರ ವೃತ್ತಿ ಜೀವನವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಯಿತು.

ಉಮಾ ಅವರು ಇಳಯರಾಜ ಕಂಪೋಸ್ ಮಾಡಿದ 100ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಿದ್ಯಾ ಸಾಗರ್, ಮಣಿ ಶರ್ಮಾ ಹಾಗೂ ದೇವ ಅವರು ಕಂಪೋಸ್ ಮಾಡಿದ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರು ಹಾಡಿದ ‘ಪನ್ನೀರ್ ಪುಷ್ಪಂಗಳ್’ ಸಿನಿಮಾದ ‘ಆನಂದ ರಾಗಮ್..’, ‘ತೆಂಡ್ರಾಲೆ ಎನ್ನೈ ತೊಡು’ ಸಿನಿಮಾದ ‘ಕಣ್ಮಣಿ ನೀ ವರಾ..’ ಸೇರಿ ಅನೇಕ ಹಾಡುಗಳು ಕೇಳುಗರ ಫೇವರಿಟ್ ಎನಿಸಿಕೊಂಡಿದೆ. 2005ರಿಂದ ಈಚೆ ಅವರು ಸಿನಿಮಾಗಾಗಿ ಹಾಡಿಲ್ಲ.

ಇದನ್ನೂ ಓದಿ: 36 ಭಾಷೆಗಳಲ್ಲಿ ಗಾಯನದ ಮೋಡಿ ಮಾಡಿದ್ದ ‘ಬಾಲಿವುಡ್ ನೈಟಿಂಗೇಲ್’; ಅನನ್ಯ ಸಾಧಕಿ ಲತಾ ಮಂಗೇಶ್ಕರ್ ಜೀವನಯಾನದ ಮೆಲುಕು ಇಲ್ಲಿದೆ

ಉಮಾ ರಮಣ್ ನಿಧನವಾರ್ತೆ ತಮಿಳು ಚಿತ್ರರಂಗವನ್ನು ಶೋಕಕ್ಕೆ ತಳ್ಳಿದೆ. ಅನೇಕ ಸೆಲೆಬ್ರಿಟಿಗಳು ಉಮಾ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಅವರು ತಮಿಳು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?