AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.   

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ
ಉಮಾ ರಮಣನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 10:33 AM

Share

ತಮಿಳು ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಉಮಾ ರಮಣನ್ (Uma Ramanan) ಅವರು ಬುಧವಾರ (ಮೇ 1) ನಿಧನ ಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತಮಿಳು ಸಿನಿಮಾಗಳಲ್ಲಿ ಹಲವು ಮೆಲೋಡಿ ಹಾಡುಗಳನ್ನು ಹಾಡಿದ ಖ್ಯಾತಿ ಅವರಿಗೆ ಇದೆ. ಅವರ ಪತಿ ಅವಿ ರಮಣನ್ ಅವರು ಖ್ಯಾತ ಗಾಯಕರು. ಈ ದಂಪತಿಗೆ ಓರ್ವ ಮಗ ಇದ್ದಾನೆ. ಉಮಾ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.

1977ರಲ್ಲಿ ರಿಲೀಸ್ ಆದ ‘ಶ್ರೀ ಕೃಷ್ಣಲೀಲಾ’ ಸಿನಿಮಾದ ‘ಮೋಹನ ಕಣ್ಣನ ಮುರಳಿ..’ ಹಾಡಿನ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು.  ‘ನೀಳಲ್ಗಳ್’ ಸಿನಿಮಾದ ‘ಪೂಂಗಾತವೇ ತಾಳ ತಿರವೈ..’ ಹಾಡನ್ನು ಹಾಡಿ ಉಮಾ ರಮಣ್ ಅವರು ಗಮನ ಸೆಳೆದರು. ಈ ಹಾಡು ಅವರ ವೃತ್ತಿ ಜೀವನವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಯಿತು.

ಉಮಾ ಅವರು ಇಳಯರಾಜ ಕಂಪೋಸ್ ಮಾಡಿದ 100ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಿದ್ಯಾ ಸಾಗರ್, ಮಣಿ ಶರ್ಮಾ ಹಾಗೂ ದೇವ ಅವರು ಕಂಪೋಸ್ ಮಾಡಿದ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರು ಹಾಡಿದ ‘ಪನ್ನೀರ್ ಪುಷ್ಪಂಗಳ್’ ಸಿನಿಮಾದ ‘ಆನಂದ ರಾಗಮ್..’, ‘ತೆಂಡ್ರಾಲೆ ಎನ್ನೈ ತೊಡು’ ಸಿನಿಮಾದ ‘ಕಣ್ಮಣಿ ನೀ ವರಾ..’ ಸೇರಿ ಅನೇಕ ಹಾಡುಗಳು ಕೇಳುಗರ ಫೇವರಿಟ್ ಎನಿಸಿಕೊಂಡಿದೆ. 2005ರಿಂದ ಈಚೆ ಅವರು ಸಿನಿಮಾಗಾಗಿ ಹಾಡಿಲ್ಲ.

ಇದನ್ನೂ ಓದಿ: 36 ಭಾಷೆಗಳಲ್ಲಿ ಗಾಯನದ ಮೋಡಿ ಮಾಡಿದ್ದ ‘ಬಾಲಿವುಡ್ ನೈಟಿಂಗೇಲ್’; ಅನನ್ಯ ಸಾಧಕಿ ಲತಾ ಮಂಗೇಶ್ಕರ್ ಜೀವನಯಾನದ ಮೆಲುಕು ಇಲ್ಲಿದೆ

ಉಮಾ ರಮಣ್ ನಿಧನವಾರ್ತೆ ತಮಿಳು ಚಿತ್ರರಂಗವನ್ನು ಶೋಕಕ್ಕೆ ತಳ್ಳಿದೆ. ಅನೇಕ ಸೆಲೆಬ್ರಿಟಿಗಳು ಉಮಾ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಅವರು ತಮಿಳು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು