AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.   

Uma Raman: ಹಿರಿಯ ತಮಿಳು ಗಾಯಕಿ ಉಮಾ ರಮಣನ್ ನಿಧನ
ಉಮಾ ರಮಣನ್
ರಾಜೇಶ್ ದುಗ್ಗುಮನೆ
|

Updated on: May 02, 2024 | 10:33 AM

Share

ತಮಿಳು ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಉಮಾ ರಮಣನ್ (Uma Ramanan) ಅವರು ಬುಧವಾರ (ಮೇ 1) ನಿಧನ ಹೊಂದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ತಮಿಳು ಸಿನಿಮಾಗಳಲ್ಲಿ ಹಲವು ಮೆಲೋಡಿ ಹಾಡುಗಳನ್ನು ಹಾಡಿದ ಖ್ಯಾತಿ ಅವರಿಗೆ ಇದೆ. ಅವರ ಪತಿ ಅವಿ ರಮಣನ್ ಅವರು ಖ್ಯಾತ ಗಾಯಕರು. ಈ ದಂಪತಿಗೆ ಓರ್ವ ಮಗ ಇದ್ದಾನೆ. ಉಮಾ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್​ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.

1977ರಲ್ಲಿ ರಿಲೀಸ್ ಆದ ‘ಶ್ರೀ ಕೃಷ್ಣಲೀಲಾ’ ಸಿನಿಮಾದ ‘ಮೋಹನ ಕಣ್ಣನ ಮುರಳಿ..’ ಹಾಡಿನ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು.  ‘ನೀಳಲ್ಗಳ್’ ಸಿನಿಮಾದ ‘ಪೂಂಗಾತವೇ ತಾಳ ತಿರವೈ..’ ಹಾಡನ್ನು ಹಾಡಿ ಉಮಾ ರಮಣ್ ಅವರು ಗಮನ ಸೆಳೆದರು. ಈ ಹಾಡು ಅವರ ವೃತ್ತಿ ಜೀವನವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಯಿತು.

ಉಮಾ ಅವರು ಇಳಯರಾಜ ಕಂಪೋಸ್ ಮಾಡಿದ 100ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಿದ್ಯಾ ಸಾಗರ್, ಮಣಿ ಶರ್ಮಾ ಹಾಗೂ ದೇವ ಅವರು ಕಂಪೋಸ್ ಮಾಡಿದ ಹಾಡುಗಳನ್ನು ಕೂಡ ಹಾಡಿದ್ದಾರೆ. ಅವರು ಹಾಡಿದ ‘ಪನ್ನೀರ್ ಪುಷ್ಪಂಗಳ್’ ಸಿನಿಮಾದ ‘ಆನಂದ ರಾಗಮ್..’, ‘ತೆಂಡ್ರಾಲೆ ಎನ್ನೈ ತೊಡು’ ಸಿನಿಮಾದ ‘ಕಣ್ಮಣಿ ನೀ ವರಾ..’ ಸೇರಿ ಅನೇಕ ಹಾಡುಗಳು ಕೇಳುಗರ ಫೇವರಿಟ್ ಎನಿಸಿಕೊಂಡಿದೆ. 2005ರಿಂದ ಈಚೆ ಅವರು ಸಿನಿಮಾಗಾಗಿ ಹಾಡಿಲ್ಲ.

ಇದನ್ನೂ ಓದಿ: 36 ಭಾಷೆಗಳಲ್ಲಿ ಗಾಯನದ ಮೋಡಿ ಮಾಡಿದ್ದ ‘ಬಾಲಿವುಡ್ ನೈಟಿಂಗೇಲ್’; ಅನನ್ಯ ಸಾಧಕಿ ಲತಾ ಮಂಗೇಶ್ಕರ್ ಜೀವನಯಾನದ ಮೆಲುಕು ಇಲ್ಲಿದೆ

ಉಮಾ ರಮಣ್ ನಿಧನವಾರ್ತೆ ತಮಿಳು ಚಿತ್ರರಂಗವನ್ನು ಶೋಕಕ್ಕೆ ತಳ್ಳಿದೆ. ಅನೇಕ ಸೆಲೆಬ್ರಿಟಿಗಳು ಉಮಾ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಅವರು ತಮಿಳು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ